ETV Bharat / city

'ಅನಾಥ ರಸ್ತೆ' ಎಂಬ ನಾಮ ಫಲಕ ಹಿಡಿದು ಆಟೋ ಚಾಲಕರ ಪ್ರತಿಭಟನೆ.. - Auto drivers protest demanding road repair in Hubli

ಇತ್ತೀಚೆಗೆ ಸುರಿದ ಮಳೆಯಿಂದ ನಗರದ ರಸ್ತೆಗಳ ಮಧ್ಯೆದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿದ್ದು, ಕೂಡಲೇ ‌ರಸ್ತೆಗಳ ದುರಸ್ತಿ ಮಾಡಬೇಕು ಎಂದು ಆಟೋರಿಕ್ಷಾ ಮಾಲೀಕ ಹಾಗೂ ಚಾಲಕರ ಸಂಘಟನೆಯ ಕಾರ್ಯಕರ್ತರು 'ಅನಾಥ ರಸ್ತೆ' ಎಂಬ ನಾಮ ಫಲಕ ಹಿಡಿದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಆಟೋ ಚಾಲಕರ ಪ್ರತಿಭಟನೆ
author img

By

Published : Oct 14, 2019, 8:21 PM IST

ಹುಬ್ಬಳ್ಳಿ: ನಗರದಲ್ಲಿ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ‌ರಸ್ತೆಗಳ ದುರಸ್ತಿ ಮಾಡಬೇಕು ಎಂದು ಆಟೋರಿಕ್ಷಾ ಮಾಲೀಕ ಹಾಗೂ ಚಾಲಕರ ಸಂಘಟನೆಯ ಕಾರ್ಯಕರ್ತರು 'ಅನಾಥ ರಸ್ತೆ' ಎಂಬ ನಾಮ ಫಲಕಕ್ಕೆ ಪೂಜೆ ಮಾಡಿ ಪ್ರತಿಭಟನೆ ಮಾಡಿದರು.

'ಅನಾಥ ರಸ್ತೆ' ಎಂಬ ನಾಮ ಫಲಕ ಹಿಡಿದು ಆಟೋ ಚಾಲಕರ ಪ್ರತಿಭಟನೆ

ಇತ್ತೀಚೆಗೆ ಸುರಿದ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ರಸ್ತೆಯ ಮಧ್ಯೆದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಇಲ್ಲಿನ ನಿರಂಜನ್ ರಸ್ತೆ, ಚೆನ್ನಮ್ಮ ವೃತ್ತದಲ್ಲಿರುವ ಗುಂಡಿಗಳ ನಡುವೆ ವಾಹನ ಸವಾರರು ಎದ್ದು ಬಿದ್ದು ಸಂಚರಿಸುತ್ತಿದ್ದಾರೆ. ಇದೇ ರಸ್ತೆಯಲ್ಲಿ ಖುದ್ದು ಅಧಿಕಾರಿಗಳು, ಜನ ಪ್ರತಿನಿಧಿಗಳೇ ಓಡಾಟ ನಡೆಸುತ್ತಾರೆ. ಆದರೆ, ಗುಂಡಿಗಳನ್ನ ಮುಚ್ಚುವ ಕಾರ್ಯ ಮಾತ್ರ ನಡೆದಿಲ್ಲ, ಪಾಲಿಕೆ ಈ ಬಗ್ಗೆ ಕ್ಯಾರೇ ಅನ್ನುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಳೆಯಿಂದ ಕೆಸರು ಗದ್ದೆಯಂತೆ ಆಗಿದ್ದ ರಸ್ತೆಗಳೀಗ ಧೂಳುಮಯವಾಗಿವೆ. ಕೂಡಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಜನಗಳ ಕಷ್ಟವನ್ನು ಅರ್ಥ ಮಾಡಿಕೊಂಡು ಉತ್ತಮ ರಸ್ತೆಗಳ ನಿರ್ಮಾಣ ಮಾಡಿ ಜನಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಹುಬ್ಬಳ್ಳಿ: ನಗರದಲ್ಲಿ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ‌ರಸ್ತೆಗಳ ದುರಸ್ತಿ ಮಾಡಬೇಕು ಎಂದು ಆಟೋರಿಕ್ಷಾ ಮಾಲೀಕ ಹಾಗೂ ಚಾಲಕರ ಸಂಘಟನೆಯ ಕಾರ್ಯಕರ್ತರು 'ಅನಾಥ ರಸ್ತೆ' ಎಂಬ ನಾಮ ಫಲಕಕ್ಕೆ ಪೂಜೆ ಮಾಡಿ ಪ್ರತಿಭಟನೆ ಮಾಡಿದರು.

'ಅನಾಥ ರಸ್ತೆ' ಎಂಬ ನಾಮ ಫಲಕ ಹಿಡಿದು ಆಟೋ ಚಾಲಕರ ಪ್ರತಿಭಟನೆ

ಇತ್ತೀಚೆಗೆ ಸುರಿದ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ರಸ್ತೆಯ ಮಧ್ಯೆದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಇಲ್ಲಿನ ನಿರಂಜನ್ ರಸ್ತೆ, ಚೆನ್ನಮ್ಮ ವೃತ್ತದಲ್ಲಿರುವ ಗುಂಡಿಗಳ ನಡುವೆ ವಾಹನ ಸವಾರರು ಎದ್ದು ಬಿದ್ದು ಸಂಚರಿಸುತ್ತಿದ್ದಾರೆ. ಇದೇ ರಸ್ತೆಯಲ್ಲಿ ಖುದ್ದು ಅಧಿಕಾರಿಗಳು, ಜನ ಪ್ರತಿನಿಧಿಗಳೇ ಓಡಾಟ ನಡೆಸುತ್ತಾರೆ. ಆದರೆ, ಗುಂಡಿಗಳನ್ನ ಮುಚ್ಚುವ ಕಾರ್ಯ ಮಾತ್ರ ನಡೆದಿಲ್ಲ, ಪಾಲಿಕೆ ಈ ಬಗ್ಗೆ ಕ್ಯಾರೇ ಅನ್ನುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಳೆಯಿಂದ ಕೆಸರು ಗದ್ದೆಯಂತೆ ಆಗಿದ್ದ ರಸ್ತೆಗಳೀಗ ಧೂಳುಮಯವಾಗಿವೆ. ಕೂಡಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಜನಗಳ ಕಷ್ಟವನ್ನು ಅರ್ಥ ಮಾಡಿಕೊಂಡು ಉತ್ತಮ ರಸ್ತೆಗಳ ನಿರ್ಮಾಣ ಮಾಡಿ ಜನಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.

Intro:ಹುಬ್ಬಳಿBody:ಗುಂಡಿ ಮುಚ್ಚುವಂತೆ ಅಟೋ ಚಾಲಕರಿಂದ ಪ್ರತಿಭಟನೆ

ಹುಬ್ಬಳ್ಳಿ:- ನಗರದಲ್ಲಿ ಸಂಚಾರ ಮಾಡುತ್ತಿರುವ ವಾಹನ ಸವಾರರು, ಕೈಯಲ್ಲಿ ಜೀವ ಹಿಡಿದಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ‌ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಅಟೋ ಚಾಲಕ ಮಾಲೀಕರು ಸಂಘಟನೆಯ ಕಾರ್ಯಕರ್ತರು ಅನಾಥ ರಸ್ತೆ ಎಂಬ ನಾಮ ಫಲಕಕ್ಕೆ ಪೂಜೆ ಮಾಡುವವ ಮೂಲಕ ಪ್ರತಿಭಟನೆ ಮಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ರಸ್ತೆಯ ಮಧ್ಯೆದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ವಾಹನ ಸವಾರರ ಅನುಕೂಲಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಮಹಾನಗರ ಪಾಲಿಕೆ ಮುಂದಾಗಬೇಕು. ಇಲ್ಲಿನ ನಿರಂಜನ್ ರಸ್ತೆ ,ಚೆನ್ನಮ್ಮ ವೃತ್ತದಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಗುಂಡಿಗಳಲ್ಲಿ ಎದ್ದು ಬಿದ್ದು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಅಲ್ಲದೇ ಈ ರಸ್ತೆಯಲ್ಲಿ ಕುದ್ದು ಅಧಿಕಾರಿಗಳು, ಜನ ಪ್ರತಿನಿಧಿಗಳೇ ಓಡಾಟ ನಡೆಸುತ್ತಾರೆ. ಆದರೆ ಈ ರಸ್ತೆಯಲ್ಲಿ ಬಿದ್ದ ಗುಂಡಿಗಳ ಮುಚ್ಚುವ ಕಾರ್ಯ ನಡೆದಿಲ್ಲವೆಂದರೆ ವಿಪರ್ಯಾಸವೇ ಸರಿ. ಇದರಿಂದ ಪಾಲಿಕೆ ಎಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದೆ ಎಂದು ಸುಳ್ಳು ಹೇಳಿತಿದ್ದಾರೆ. ಮಳೆಯಿಂದ ಕೆಸರುಗದ್ದೆಯಂತೆ ಆಗಿದ್ದ ರಸ್ತೆಗಳೀಗ ಧೂಳುಮ ಯವಾಗಿವೆ. ಕೂಡಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಜನಗಳ ಕಷ್ಟವನ್ನು ಅರ್ಥ ಮಾಡಿಕೊಂಡು ಉತ್ತಮ ರಸ್ತೆಗಳ ನಿರ್ಮಾಣ ಮಾಡಿ ಜನಗಳಿಗೆ ಅನುಕೂಲ ಮಾಡಿಕೊಡಬೇಕೆಂಬುದ ಆಗ್ರಹಿಸಿದರು.

ಬೈಟ:- ಶೇಕರಯ್ಯಾ ಮಠಪತಿ. ಆಟೋ ಚಾಲಕ..

_______________________________

ಹುಬ್ಬಳ್ಳಿ:- ಸ್ಟ್ರಿಂಜರ್

ಯಲ್ಲಪ್ ಕುಂದಗೋಳ


Conclusion:ಯಲ್ಲಪ್ಪ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.