ETV Bharat / city

SSLCವರೆಗೆ ಸಮವಸ್ತ್ರ ಕಡ್ಡಾಯ, ಪಿಯು ವಿದ್ಯಾರ್ಥಿಗಳಿಗೆ ಕಾಲೇಜುಗಳೇ ನಿರ್ಧರಿಸಬೇಕು.. ಹೊರಟ್ಟಿ - ಹುಬ್ಬಳ್ಳಿಯಲ್ಲಿ ಬಸವರಾಜ ಹೊರಟ್ಟಿ

ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು..

basavaraj-horatti-on-hijab-and-saffron-shawl
ಹೈಕೋರ್ಟ್ ತೀರ್ಪು ಬರುವವರೆಗೆ ಕೇಸರಿ, ಹಿಜಾಬ್ ಧರಿಸಬಾರದು: ಬಸವರಾಜ ಹೊರಟ್ಟಿ
author img

By

Published : Feb 11, 2022, 11:58 AM IST

Updated : Feb 11, 2022, 1:03 PM IST

ಹುಬ್ಬಳ್ಳಿ : ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿಚಾರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಯಾರೂ ಧರಿಸಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು ಎಂದರು.

ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿರುವುದು..

ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿದ ಅವರು, ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನಗಳನ್ನು ನೀಡಲಾಗುವುದು. ಇಲಾಖೆಗಳು ತಮಗೆ ಬೇಡಿಕೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ರತಿ ವರ್ಷ ಶಾಸಕರಿಗೆ ನೀಡಲಾಗುವ 2 ಕೋಟಿ ಅನುದಾನದಲ್ಲಿ ರಸ್ತೆ, ಕಟ್ಟಡ, ವಾಹನಗಳು, ಆ್ಯಂಬುಲೆನ್ಸ್​ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಗಳಿಗೆ ಉಪಯುಕ್ತ ರೀತಿಯಲ್ಲಿ ಬಳಕೆಯಾಗಬೇಕು.

ಪೊಲೀಸ್ ಇಲಾಖೆಗೆ ಹಳೆಯ ವಾಹನಗಳಿಗೆ ಬದಲಾಗಿ ಹೊಸ ವಾಹನಗಳನ್ನು ನೀಡಲಾಗಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಪೊಲೀಸ್ ಠಾಣೆಗೆ ವಾಹನಗಳು ಅವಶ್ಯಕವಾಗಿದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಡಿವೈಎಸ್ಪಿ ಎಂ‌ಬಿ ಸಂಕದ, ಪೊಲೀಸ್ ಇನ್ಸ್​ಪೆಕ್ಟರ್ ರಮೇಶ ಗೋಕಾಕ್, ಜಿ ಸಿ ಡೂಗನವರ, ರವಿಚಂದ್ರ ಡಿ ಬಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ: ನೆಲಮಂಗಲ: 8 ಮಂದಿ ವಾಹನ ಕಳ್ಳರ ಬಂಧನ, 23 ಬೈಕ್‌, 2 ಕಾರು ವಶ

ಹುಬ್ಬಳ್ಳಿ : ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿಚಾರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಯಾರೂ ಧರಿಸಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು ಎಂದರು.

ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿರುವುದು..

ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿದ ಅವರು, ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನಗಳನ್ನು ನೀಡಲಾಗುವುದು. ಇಲಾಖೆಗಳು ತಮಗೆ ಬೇಡಿಕೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ರತಿ ವರ್ಷ ಶಾಸಕರಿಗೆ ನೀಡಲಾಗುವ 2 ಕೋಟಿ ಅನುದಾನದಲ್ಲಿ ರಸ್ತೆ, ಕಟ್ಟಡ, ವಾಹನಗಳು, ಆ್ಯಂಬುಲೆನ್ಸ್​ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಕಾರ್ಯಗಳಿಗೆ ಉಪಯುಕ್ತ ರೀತಿಯಲ್ಲಿ ಬಳಕೆಯಾಗಬೇಕು.

ಪೊಲೀಸ್ ಇಲಾಖೆಗೆ ಹಳೆಯ ವಾಹನಗಳಿಗೆ ಬದಲಾಗಿ ಹೊಸ ವಾಹನಗಳನ್ನು ನೀಡಲಾಗಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಪೊಲೀಸ್ ಠಾಣೆಗೆ ವಾಹನಗಳು ಅವಶ್ಯಕವಾಗಿದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಡಿವೈಎಸ್ಪಿ ಎಂ‌ಬಿ ಸಂಕದ, ಪೊಲೀಸ್ ಇನ್ಸ್​ಪೆಕ್ಟರ್ ರಮೇಶ ಗೋಕಾಕ್, ಜಿ ಸಿ ಡೂಗನವರ, ರವಿಚಂದ್ರ ಡಿ ಬಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ: ನೆಲಮಂಗಲ: 8 ಮಂದಿ ವಾಹನ ಕಳ್ಳರ ಬಂಧನ, 23 ಬೈಕ್‌, 2 ಕಾರು ವಶ

Last Updated : Feb 11, 2022, 1:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.