ETV Bharat / city

ಶಂಕರ್​ ಪಾಟೀಲ್​ಗೆ ಸಚಿವ ಸ್ಥಾನ: ನವಲಗುಂದದಲ್ಲಿ ಅಭಿಮಾನಿಗಳ ಸಂಭ್ರಮ

author img

By

Published : Aug 4, 2021, 1:15 PM IST

ಶಂಕರ್​ ಪಾಟೀಲ್​ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಸಿಕ್ಕಿರುವ ಹಿನ್ನೆಲೆ ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

BJP activists celebration in dharwad
ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಧಾರವಾಡ: ಜಿಲ್ಲೆಯಲ್ಲಿ ತೀವ್ರ ಪೈಪೋಟಿ ನಡುವೆ ನವಲಗುಂದ ಕ್ಷೇತ್ರದ ಶಾಸಕ ಶಂಕರ್​ ಪಾಟೀಲ್ ಮುನೇನಕೊಪ್ಪ ಅವರಿಗೆ ಅದೃಷ್ಟ ಒಲಿದಿದೆ.​ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದ್ದಾರೆ.

ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ನವಲಗುಂದ ಶಂಕರ್​ ಪಾಟೀಲ್ ಮುನೇನಕೊಪ್ಪ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಕಾರ್ಯಕರ್ತರು ನಗರದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಬಿಜೆಪಿಯಲ್ಲಿ ಇಷ್ಟು ದಿನ ನಗರಕ್ಕೆ ಮೀಸಲಾಗಿರುತ್ತಿದ್ದ ಸಚಿವ ಸ್ಥಾನ ಈ ಬಾರಿ ಗ್ರಾಮೀಣ ಭಾಗಕ್ಕೆ ಒಲಿದಿದ್ದು, ನವಲಗುಂದ ಕ್ಷೇತ್ರದ ಜನರ ಸಂತಸಕ್ಕೆ ಕರಣವಾಗಿದೆ.

ಧಾರವಾಡ: ಜಿಲ್ಲೆಯಲ್ಲಿ ತೀವ್ರ ಪೈಪೋಟಿ ನಡುವೆ ನವಲಗುಂದ ಕ್ಷೇತ್ರದ ಶಾಸಕ ಶಂಕರ್​ ಪಾಟೀಲ್ ಮುನೇನಕೊಪ್ಪ ಅವರಿಗೆ ಅದೃಷ್ಟ ಒಲಿದಿದೆ.​ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದ್ದಾರೆ.

ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ನವಲಗುಂದ ಶಂಕರ್​ ಪಾಟೀಲ್ ಮುನೇನಕೊಪ್ಪ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಕಾರ್ಯಕರ್ತರು ನಗರದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಬಿಜೆಪಿಯಲ್ಲಿ ಇಷ್ಟು ದಿನ ನಗರಕ್ಕೆ ಮೀಸಲಾಗಿರುತ್ತಿದ್ದ ಸಚಿವ ಸ್ಥಾನ ಈ ಬಾರಿ ಗ್ರಾಮೀಣ ಭಾಗಕ್ಕೆ ಒಲಿದಿದ್ದು, ನವಲಗುಂದ ಕ್ಷೇತ್ರದ ಜನರ ಸಂತಸಕ್ಕೆ ಕರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.