ETV Bharat / city

ಅತೃಪ್ತ ಶಾಸಕರ ಅನರ್ಹತೆ ಬಗ್ಗೆ ಬಿಜೆಪಿಗೆ ಒಳಗೊಳಗೇ ಖುಷಿ ಇದೆ: ಹೊರಟ್ಟಿ - karnataka politics today's news

ಸದ್ಯ ಬಿಜೆಪಿ ಬಳಿಯು ಕಡಿಮೆ ಬಹುಮತ ಇರುವುದರಿಂದ ಈ ಸರ್ಕಾರ ಕೂಡ ಸ್ಥಿರವಲ್ಲ. ಸ್ಪೀಕರ್ ನಡೆ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಅತೃಪ್ತ ಶಾಸಕರ ಅನರ್ಹತೆ ವಿಚಾರದಿಂದ ಬಿಜೆಪಿಗೆ ಒಳಗೊಳಗೆ ಖುಷಿ ಆಗಿದೆ.‌ ಇವರ ಕಾಟ ಬಿಜೆಪಿಯವರಿಗೆ ತಪ್ಪಿದಂತಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ಧಾರೆ.

ಬಸವರಾಜ ಹೊರಟ್ಟಿ
author img

By

Published : Jul 28, 2019, 5:13 PM IST

ಧಾರವಾಡ: ಅತೃಪ್ತ ಶಾಸಕರ ಅನರ್ಹತೆ ವಿಚಾರದಿಂದ ಬಿಜೆಪಿಗೆ ಒಳಗೊಳಗೆ ಖುಷಿ ಆಗಿದೆ.‌ ಇವರ ಕಾಟ ಬಿಜೆಪಿಯವರಿಗೆ ತಪ್ಪಿದಂತಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ, ವಿಧಾನ ಪರಿಷತ್​ ಸದಸ್ಯ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಅವರು ತಮ್ಮ ಇತಿಮಿತಿಯಲ್ಲಿ ಕಾಯ್ದೆ, ಕಾನೂನುಗಳನ್ನು ನೋಡಿ ಶಾಸಕರನ್ನು ಅನರ್ಹತೆ ಮಾಡಿದ್ದಾರೆ. ಒಂದು ಪಕ್ಷದಿಂದ ಸ್ಪರ್ಧಿಸಿ ತಮಗೆ ಬೇಕಾದಾಗ ರಾಜೀನಾಮೆ ನೀಡುವುದು ಸರಿಯಾದ ಕ್ರಮವಲ್ಲ.

ಈ ವಿಚಾರವಾಗಿ ಸ್ಪೀಕರ್ ಒಳ್ಳೆಯ ನಿರ್ಣಯ ಮಾಡಿದ್ದಾರೆ.‌ ರಾಜೀನಾಮೆ ಕೊಟ್ಟರೆ ಮುಂದಿನ ಐದು ವರ್ಷದ ಅವಧಿಯೊಳಗೆ ಯಾವುದೇ ಚುನಾವಣೆಗೆ ನಿಲ್ಲದಂತಹ ಕಟ್ಟುನಿಟ್ಟಿನ ಕಾನೂನುಗಳು ರಾಜಕಾರಣದಲ್ಲಿ ಬರಬೇಕು. ಒಂದು ಕಟ್ಟುನಿಟ್ಟಾದ ಕಾನೂನನ್ನು ಮೋದಿಯವರೇ ತರಬೇಕು. ಮೋದಿಯವರು ದೇಶದ ಬಗ್ಗೆ ಬಹಳ ಮಾತನಾಡುತ್ತಾರೆ. ಹೀಗಾಗಿ ರಾಜಕಾರಣದಲ್ಲಿ ಕಟ್ಟುನಿಟ್ಟಿನ ಕಾನೂನು ಅವರೇ ತರಲಿ ಎಂದು ಆಗ್ರಹಿಸಿದರು.

ಸದ್ಯ ಬಿಜೆಪಿ ಬಳಿಯು ಕಡಿಮೆ ಬಹುಮತ ಇರುವುದರಿಂದ ಈ ಸರ್ಕಾರ ಕೂಡ ಸ್ಥಿರವಲ್ಲ. ಸ್ಪೀಕರ್ ನಡೆ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಎಲ್ಲಾ ಕಾಯ್ದೆ, ಕಾನೂನು ನೋಡಿ ಅವರು ಅನರ್ಹ ಮಾಡಿದ್ದಾರೆ. ರಾಜೀನಾಮೆ ಕೊಟ್ಟ ಬಳಿಕ ಅವರು ಸದನದಲ್ಲಿ ಇರಬೇಕಿತ್ತು. ಹೀಗಾಗಿ ರಾಜೀನಾಮೆ ಅಂಗೀಕರಿಸದೇ ಅನರ್ಹ ಮಾಡಲಾಗಿದೆ. ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತಿದ್ದರೆ ಅಂಗೀಕಾರ ಆಗುತ್ತಿತ್ತು. ಆದರೆ ಅವರು ನಿಯಮ ಪಾಲಿಸಿಲ್ಲ. ಎಲ್ಲರೂ ಒಟ್ಟಾಗಿ ಮುಂಬೈ ರೆಸಾರ್ಟ್‌ನಲ್ಲಿ‌ದ್ದರು. ಹೀಗಾಗಿ ರಾಜೀನಾಮೆ ಅಂಗೀಕಾರದ ಬದಲಿಗೆ ಅನರ್ಹ ಮಾಡಿದ್ದಾರೆ ಎಂದರು.

ಇನ್ನು ಬಿಜೆಪಿಗೆ ಜೆಡಿಎಸ್ ನೈತಿಕ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿ‌.ಟಿ.ದೇವೇಗೌಡರು ಬಿಜೆಪಿಗೆ ನೈತಿಕ ಬೆಂಬಲ ಕೊಡೋ ವಿಚಾರ ಹೇಳಿದ್ದು ಸರಿಯಲ್ಲ ಎಂದು ತಿರುಗೇಟು ನೀಡಿದರು.

ಧಾರವಾಡ: ಅತೃಪ್ತ ಶಾಸಕರ ಅನರ್ಹತೆ ವಿಚಾರದಿಂದ ಬಿಜೆಪಿಗೆ ಒಳಗೊಳಗೆ ಖುಷಿ ಆಗಿದೆ.‌ ಇವರ ಕಾಟ ಬಿಜೆಪಿಯವರಿಗೆ ತಪ್ಪಿದಂತಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ, ವಿಧಾನ ಪರಿಷತ್​ ಸದಸ್ಯ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಅವರು ತಮ್ಮ ಇತಿಮಿತಿಯಲ್ಲಿ ಕಾಯ್ದೆ, ಕಾನೂನುಗಳನ್ನು ನೋಡಿ ಶಾಸಕರನ್ನು ಅನರ್ಹತೆ ಮಾಡಿದ್ದಾರೆ. ಒಂದು ಪಕ್ಷದಿಂದ ಸ್ಪರ್ಧಿಸಿ ತಮಗೆ ಬೇಕಾದಾಗ ರಾಜೀನಾಮೆ ನೀಡುವುದು ಸರಿಯಾದ ಕ್ರಮವಲ್ಲ.

ಈ ವಿಚಾರವಾಗಿ ಸ್ಪೀಕರ್ ಒಳ್ಳೆಯ ನಿರ್ಣಯ ಮಾಡಿದ್ದಾರೆ.‌ ರಾಜೀನಾಮೆ ಕೊಟ್ಟರೆ ಮುಂದಿನ ಐದು ವರ್ಷದ ಅವಧಿಯೊಳಗೆ ಯಾವುದೇ ಚುನಾವಣೆಗೆ ನಿಲ್ಲದಂತಹ ಕಟ್ಟುನಿಟ್ಟಿನ ಕಾನೂನುಗಳು ರಾಜಕಾರಣದಲ್ಲಿ ಬರಬೇಕು. ಒಂದು ಕಟ್ಟುನಿಟ್ಟಾದ ಕಾನೂನನ್ನು ಮೋದಿಯವರೇ ತರಬೇಕು. ಮೋದಿಯವರು ದೇಶದ ಬಗ್ಗೆ ಬಹಳ ಮಾತನಾಡುತ್ತಾರೆ. ಹೀಗಾಗಿ ರಾಜಕಾರಣದಲ್ಲಿ ಕಟ್ಟುನಿಟ್ಟಿನ ಕಾನೂನು ಅವರೇ ತರಲಿ ಎಂದು ಆಗ್ರಹಿಸಿದರು.

ಸದ್ಯ ಬಿಜೆಪಿ ಬಳಿಯು ಕಡಿಮೆ ಬಹುಮತ ಇರುವುದರಿಂದ ಈ ಸರ್ಕಾರ ಕೂಡ ಸ್ಥಿರವಲ್ಲ. ಸ್ಪೀಕರ್ ನಡೆ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಎಲ್ಲಾ ಕಾಯ್ದೆ, ಕಾನೂನು ನೋಡಿ ಅವರು ಅನರ್ಹ ಮಾಡಿದ್ದಾರೆ. ರಾಜೀನಾಮೆ ಕೊಟ್ಟ ಬಳಿಕ ಅವರು ಸದನದಲ್ಲಿ ಇರಬೇಕಿತ್ತು. ಹೀಗಾಗಿ ರಾಜೀನಾಮೆ ಅಂಗೀಕರಿಸದೇ ಅನರ್ಹ ಮಾಡಲಾಗಿದೆ. ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತಿದ್ದರೆ ಅಂಗೀಕಾರ ಆಗುತ್ತಿತ್ತು. ಆದರೆ ಅವರು ನಿಯಮ ಪಾಲಿಸಿಲ್ಲ. ಎಲ್ಲರೂ ಒಟ್ಟಾಗಿ ಮುಂಬೈ ರೆಸಾರ್ಟ್‌ನಲ್ಲಿ‌ದ್ದರು. ಹೀಗಾಗಿ ರಾಜೀನಾಮೆ ಅಂಗೀಕಾರದ ಬದಲಿಗೆ ಅನರ್ಹ ಮಾಡಿದ್ದಾರೆ ಎಂದರು.

ಇನ್ನು ಬಿಜೆಪಿಗೆ ಜೆಡಿಎಸ್ ನೈತಿಕ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿ‌.ಟಿ.ದೇವೇಗೌಡರು ಬಿಜೆಪಿಗೆ ನೈತಿಕ ಬೆಂಬಲ ಕೊಡೋ ವಿಚಾರ ಹೇಳಿದ್ದು ಸರಿಯಲ್ಲ ಎಂದು ತಿರುಗೇಟು ನೀಡಿದರು.

Intro:ಧಾರವಾಡ: ಅತೃಪ್ತರ ಅನರ್ಹತೆ ವಿಚಾರಕ್ಕೆ ಧಾರವಾಡದಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಇದು ಬಿಜೆಪಿಗೆ ಒಳಗೊಳಗೆ ಖುಷಿ ಆಗಿದೆ.‌ ಇವರ ಕಾಟ ಅವರಿಗೆ ತಪ್ಪಿದಂತಾಗಿದೆ. ಸ್ಪೀಕರ್ ಅವರು ತಮ್ಮ ಇತಿ ಮೀತಿಯಲ್ಲಿ ಕಾಯಿದೆ ಕಾನೂನು ನೋಡ ಅನರ್ಹತೆ ಮಾಡಿದ್ದಾರೆ ಎಂದು ಸ್ಪೀಕರ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು. ಸುಪ್ರಿಂಕೋರ್ಟ್‌ಗೆ ಹೋದರೆ. ಅಲ್ಲಿ ಯಾವುದು ಸರಿ ಯಾವುದು ತಪ್ಪು ಆಗಬಹುದು. ಒಂದು ಪಕ್ಷದಿಂದ ಸ್ಪರ್ಧಿಸಿ ತಮಗೆ ಬೇಕಾದಾಗ ರಾಜೀನಾಮೆ ನೀಡುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಈ ವಿಚಾರವಾಗಿ ಒಳ್ಳೆ ನಿರ್ಣಯ ಮಾಡಿದ್ದಾರೆ.‌ ರಾಜೀನಾಮೆ ಕೊಟ್ಟರೇ ಮುಂದಿನ ಐದು ವರ್ಷದ ಅವಧಿಯೊಳಗೆ ಯಾವುದೇ ಚುನಾವಣೆಗೆ ನಿಲ್ಲದಂತಹ ಕಾನೂನು ಬರಬೇಕು. ರಾಜಕಾರಣದಲ್ಲಿ ಕಟ್ಟುನಿಟ್ಟಿನ ಕಾನೂನುಗಳು ಬರಬೇಕು. ಒಂದು ಕಟ್ಟುನಿಟ್ಟಾದ ಕಾನೂನನ್ನು ಮೋದಿಯವರೇ ತರಬೇಕು ಎಂದು ಪ್ರಧಾನಿ ಮೋದಿ‌ ಅವರನ್ನು ಆಗ್ರಹ‌ ಮಾಡಿದ್ದಾರೆ.

ಮೋದಿಯವರು ದೇಶದ ಬಗ್ಗೆ ಬಹಳ ಮಾತನಾಡುತ್ತಾರೆ ಹೀಗಾಗಿ ರಾಜಕಾರಣದಲ್ಲಿ ಕಟ್ಟುನಿಟ್ಟಿನ ಕಾನೂನು ಅವರೇ ತರಲಿ. ಸದ್ಯ ಬಿಜೆಪಿ ಬಳಿಯು ಕಡಿಮೆ ಬಹುಮತ ಇರುವುದರಿಂದ ಈ ಸರ್ಕಾರ ಕೂಡ ಕುಂಟಾಡೋದೆ ಆಗುತ್ತೆ ಸ್ಪೀಕರ್ ನಡೆ ಬಗ್ಗೆ ಬಿಜೆಪಿ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.Body:ಎಲ್ಲ ಕಾಯಿದೆ ಕಾನೂನು ನೋಡಿ ಅವರು ಅನರ್ಹ ಮಾಡಿದ್ದಾರೆ. ರಾಜೀನಾಮೆ ಕೊಟ್ಟ ಬಳಿಕ ಅವರು ಸದನದಲ್ಲಿ ಇರಬೇಕಿತ್ತು. ಹೀಗಾಗಿ ರಾಜೀನಾಮೆ ಅಂಗೀಕರಿಸದೇ ಅನರ್ಹ ಮಾಡಲಾಗಿದೆ. ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತಿದ್ದರೇ ಅಂಗೀಕಾರ ಆಗುತ್ತಿತ್ತು. ಆದರೆ ಅವರು ನಿಯಮ ಪಾಲಿಸಿಲ್ಲ, ಎಲ್ಲರೂ ಒಟ್ಟಾಗಿ ಮುಂಬೈ ರೇಸಾರ್ಟ್‌ನಲ್ಲಿ‌ದ್ದರು. ಹೀಗಾಗಿ ರಾಜೀನಾಮೆ ಅಂಗೀಕಾರ ಬದಲಿಗೆ ಅನರ್ಹ ಮಾಡಿದ್ದಾರೆ ಎಂದರು.

ಬಿಜೆಪಿಗೆ ಜೆಡಿಎಸ್ ನೈತಿಕ ಬೆಂಬಲ ವಿಚಾರಕ್ಕೆ ಮಾತನಾಡಿದ ಅವರು, ಹೊತ್ತ ಬಂದಂತೆ ಕೊಡೆ ಹಿಡಿಯೋದು ಸರಿಯಲ್ಲ, ಜಿ‌.ಟಿ. ದೇವೇಗೌಡರು ಬಿಜೆಪಿ ನೈತಿಕ ಬೆಂಬಲ ಕೊಡೋ ವಿಚಾರ ಹೇಳಿದ್ದು ಸರಿಯಲ್ಲ ಎಂದು ಜಿ.ಟಿ. ದೇವೆಗೌಡ ಅವರಿಗೆ ಹೊರಟ್ಟಿ ತಿರುಗೇಟು ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.