ಹುಬ್ಬಳ್ಳಿ: ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಮರಿಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಭಾಗಿಯಾಗಿ ಮರಿಮೊಮ್ಮಗಳಿಗೆ 'ನೈರಾ' ಎಂದು ನಾಮಕರಣ ಮಾಡಿದರು.

ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಯಡಿಯೂರಪ್ಪ, ಪುತ್ರಿ ಪದ್ಮಾವತಿ ಹಾಗೂ ಅಳಿಯ ವಿರುಪಾಕ್ಷಪ್ಪ ಯಮಕನಮರಡಿ ಅವರ ಮಗ ಶಶಿಧರ ಯಮನಕನಮರಡಿ ಅವರ ಪುತ್ರಿಗೆ ನೈರಾ ಎಂದು ನಾಮಕರಣ ಮಾಡಿದ್ರು. ಖಾಸಗಿ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿಎಂ ಬಿಎಸ್ವೈಗೆ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.
ನಾಮಕರಣ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕುಟುಂಬದ ಸದಸ್ಯರ ಜೊತೆ ಸಂತಸದಿಂದ ಕಾಲ ಕಾಲಕಳೆದರು.