ETV Bharat / city

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆ ಹುಬ್ಬಳ್ಳಿ- ಧಾರವಾಡ, ಕೊಪ್ಪಳ, ಕಲಬುರಗಿ, ಗದಗದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

author img

By

Published : Aug 5, 2019, 6:14 PM IST

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಹುಬ್ಬಳಿ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಹುಬ್ಬಳ್ಳಿಯ ದುರ್ಗದ ಬೈಲ್​ನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಸಿಹಿ ಹಂಚಿದರು. ಐತಿಹಾಸಿಕ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. 70 ವರ್ಷದ ಆತಂಕಕ್ಕೆ ಇದೀಗ ತೆರೆ ಎಳೆಯಲಾಗಿದೆ. ಇದರಿಂದ ಜಗತ್ತೇ ಭಾರತವನ್ನು ಕೊಂಡಾಡುವಂತಾಗಿದೆ ಎಂದರು. ಇನ್ನು ಧಾರವಾಡದಲ್ಲೂ ಸಹ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿ ಐತಿಹಾಸಿಕ ನಿರ್ಧಾರ ಹೊರಡಿಸಿದ್ದಕ್ಕೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.

ಗದಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸೇರಿ ಅಖಂಡ ಭಾರತದ ಪರ ಜಯಘೋಷ ಕೂಗಿದರು. ಈ ವೇಳೆ ಪರಸ್ಪರ ಸಿಹಿ ಹಂಚಿದರು.

ಕೊಪ್ಪಳದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು‌. ನಗರದ ಗಡಿಯಾರ ಕಂಬ ಸರ್ಕಲ್​ನಲ್ಲಿ ಸೇರಿದ ಕಾರ್ಯಕರ್ತರು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370 ನೇ ವಿಧಿ ಹಾಗೂ 35 (ಎ) ರದ್ದು ಮಾಡಿರುವುದು ಸ್ವಾಗತಾರ್ಹ ಎಂದರು.

ಇನ್ನು ಜಮ್ಮು-ಕಾಶ್ಮೀರದ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದ್ದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಕಲಬುರಗಿ ನಗರದ ಎಸ್​ವಿಪಿ ವೃತ್ತದಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ನಿರ್ಧಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ರಾಷ್ಟ್ರಪತಿ ಅವರಿಗೂ ಅಭಿನಂದನೆ ಸಲ್ಲಿಸಿದರು.

ಹುಬ್ಬಳಿ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಹುಬ್ಬಳ್ಳಿಯ ದುರ್ಗದ ಬೈಲ್​ನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಸಿಹಿ ಹಂಚಿದರು. ಐತಿಹಾಸಿಕ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. 70 ವರ್ಷದ ಆತಂಕಕ್ಕೆ ಇದೀಗ ತೆರೆ ಎಳೆಯಲಾಗಿದೆ. ಇದರಿಂದ ಜಗತ್ತೇ ಭಾರತವನ್ನು ಕೊಂಡಾಡುವಂತಾಗಿದೆ ಎಂದರು. ಇನ್ನು ಧಾರವಾಡದಲ್ಲೂ ಸಹ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿ ಐತಿಹಾಸಿಕ ನಿರ್ಧಾರ ಹೊರಡಿಸಿದ್ದಕ್ಕೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.

ಗದಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸೇರಿ ಅಖಂಡ ಭಾರತದ ಪರ ಜಯಘೋಷ ಕೂಗಿದರು. ಈ ವೇಳೆ ಪರಸ್ಪರ ಸಿಹಿ ಹಂಚಿದರು.

ಕೊಪ್ಪಳದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು‌. ನಗರದ ಗಡಿಯಾರ ಕಂಬ ಸರ್ಕಲ್​ನಲ್ಲಿ ಸೇರಿದ ಕಾರ್ಯಕರ್ತರು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370 ನೇ ವಿಧಿ ಹಾಗೂ 35 (ಎ) ರದ್ದು ಮಾಡಿರುವುದು ಸ್ವಾಗತಾರ್ಹ ಎಂದರು.

ಇನ್ನು ಜಮ್ಮು-ಕಾಶ್ಮೀರದ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದ್ದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಕಲಬುರಗಿ ನಗರದ ಎಸ್​ವಿಪಿ ವೃತ್ತದಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ನಿರ್ಧಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ರಾಷ್ಟ್ರಪತಿ ಅವರಿಗೂ ಅಭಿನಂದನೆ ಸಲ್ಲಿಸಿದರು.

Intro:ಹುಬ್ಬಳಿBody:ಸ್ಲಗ್: ಬಿಜೆಪಿ ವಿಜಯೋತ್ಸವ.


ಹುಬ್ಬಳ್ಳಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ದುರ್ಗದ ಬೈಲ್ ನಲ್ಲಿ ನಗರದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪಟಾಕಿ ಹಾಗೂ ಸಿಹಿ ಹಂಚಿ ಸಂಭ್ರಮಸಿದರು. ನಂತರ ಮಾತನಾಡಿದ ಬಿಜೆಪಿ ಮುಖಂಡ ಮಹೇಶ ತೆಂಗಿನಕಾಯಿ
ಜಮ್ಮು ಮತ್ತು ಕಾಶ್ಮೀರ ಭಾರತಮಾತೆ ಸಿಂಧೂರ
೭೨ ವರ್ಷಗಳಿಂದ 370 ವಿಶೇಷ ಸ್ಥಾನಮಾರ ರದ್ದು ಪಡಿಸಿ, ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ.ಐತಿಹಾಸಿಕ ಕಾಯ್ದೆ ಮೋದಿ ಸರ್ಕಾರ. ಕರಾಳ ಶಾಸನ ಕಿತ್ತೊಗೆದು, ಜಮ್ಮುಬಕಾಶ್ಮೀರ ದೇಶದ ಅಂಗ ಎಂದು ಘೋಷಣೆ ಮಾಡಿದೆ. ಮೋದಿ, ಷಾ ಅವರಿಗೆ ದೇಶದ ಜನತೆ ಗೌರವ ಸಲ್ಲಿಸಲಿದೆ ಎಪ್ಪತ್ತು ವರ್ಷದ ಆತಂಕಕ್ಕೆ ತೆರೆ ಎಳೆಯಲಾಗಿದೆ. ದೇಶದ ಜನತೆಯೇ ಸಂಭ್ರಮಿಸುತ್ತಿದೆ. ಸೈನಿಕರ ಕನಸು ಸಹ ಇದೇ ಆಗಿತ್ತು. ಸಾಕಷ್ಟು ಸೈನಿಕರು ಆ ಕಾಯ್ದೆಯಿಂದ ಉಗ್ರರಿಗೆ ಪ್ರಾಣ ಒಪ್ಪಿಸಿದರು. ವಿರೋಧ ಮಾಡಿದ ಪಕ್ಷಗಳು ಸಹ ಸಹಕಾರ ನೀಡಿದೆ. ಜಗತ್ತೇ ಭಾರತವನ್ನು ಕೊಂಡಾಡುವಂತಾಗಿದೆ.ಎಂದರು....

__________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.