ಹುಬ್ಬಳ್ಳಿ: ಮಹಾತ್ಮ ಗಾಂಧೀಜಿಯವರ ಪುಣ್ಯ ತಿಥಿಯ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕರ್ನಾಟಕ ವೈದ್ಯಕೀಯ ಸಂಸ್ಥೆಯ ಆವರಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಮಹಾತ್ಮ ಗಾಂಧೀಜಿಯವರು ಕಂಡ ಏಕತೆಯ ಕನಸಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ಧಕ್ಕೆ ತರುತ್ತಿದೆ. ದೇಶ ವಿರೋಧಿ ನೀತಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಿ ಮಹಾತ್ಮ ಗಾಂಧೀಜಿಯವರ ಭವ್ಯ ಭಾರತದ ಕನಸನ್ನು ಸಾಕಾರಗೊಳಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿಯವರು ಸ್ವತಂತ್ರ್ಯಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡಿದ್ದರು. ಅದೇ ರೀತಿ ಮುಸ್ಲಿಂ ಸಮುದಾಯ ಹಾಗೂ ಅಲ್ಪಸಂಖ್ಯಾತರನ್ನು ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಕ್ತಿಗೊಳಿಸಲು ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಇದರ ಬಗ್ಗೆ ಗಮನ ಹರಿಸಿ ಸಿಎಎ, ಎನ್ಆರ್ಸಿ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.