ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂವಿಧಾನ ಸುರಕ್ಷತಾ ಸಮಿತಿ ಕಾರ್ಯಕರ್ತರು ನಗರದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದಲ್ಲಿಂದು ಪ್ರತಿಭಟನೆ ನಡೆಸಿದ ಅವರು, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ದೇಶದಲ್ಲಿ ದ್ವೇಷ ರಾಜಕೀಯ ಮಾಡುವುದನ್ನು ಬಿಟ್ಟು ಕೋವಿಡ್ನಿಂದ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕು ಹಾಗೂ ಖಾಸಗಿ ಆಸ್ಪತ್ರೆಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಆಗ್ರಹಿಸಿದರು.
ಕೂಡಲೇ ಕೇಂದ್ರ ಸರ್ಕಾರ ದೇಶದ ಒಗ್ಗಟ್ಟಿಗಾಗಿ ಶ್ರಮಿಸುವ ಕೆಲಸ ಮಾಡಬೇಕು ಹಾಗೂ ಸಂವಿಧಾನ ವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.