ETV Bharat / city

ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ಹುಬ್ಬಳ್ಳಿ-ಧಾರವಾಡ: ಜನಜಾಗೃತಿಯೇ ದಿವ್ಯೌಷಧ

author img

By

Published : Apr 29, 2021, 8:51 AM IST

ಹು-ಧಾ ಅವಳಿ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಸಾವಿನ ಸಂಖ್ಯೆಯೂ ಆತಂಕ ಸೃಷ್ಟಿಸಿದೆ.

Hubli
ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ಅವಳಿನಗರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪ್ರತಿನಿತ್ಯ 300 ರಿಂದ 400 ಕೊರೊನಾ ಸೋಂಕಿತ​ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ನಿಗಾ ವಹಿಸಬೇಕಿದೆ.

ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ಅವಳಿನಗರ

ಕಳೆದ ಬಾರಿ ವಯೋವೃದ್ಧರಲ್ಲೇ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಕೊರೊನಾ ಎರಡನೇ ಅಲೆಯಲ್ಲಿ ಯುವಕರೇ ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಒಂದನೇ ಹಾಗೂ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 687 ಜನರು ಕೋವಿಡ್​​ಗೆ ಪ್ರಾಣ ಕಳೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿಲ್ಲ. ಬದಲಾಗಿ ಅವಳಿ ನಗರದಲ್ಲೇ ಶೇ 80ರಷ್ಟು ಜನರಿಗೆ ಕೊರೊನಾ ವಕ್ಕರಿಸುತ್ತಿದ್ದು, ಸಾವಿನ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಸರ್ಕಾರದ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮುಖ್ಯವಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಯಾವಾಗ, ಯಾರಿಗೆ ಏನಾಗುತ್ತೋ ಗೊತ್ತಿಲ್ಲ. ಹೀಗಾಗಿ, ಎಲ್ಲರೂ ಕೋವಿಡ್​ ನಿಯಮ ಪಾಲಿಸಬೇಕು. ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕೋ, ಅದನ್ನು ಕೈಗೊಳ್ಳುತ್ತದೆ ಎಂದರು.

ಕಿಮ್ಸ್​​ ನಿರ್ದೇಶಕ ಡಾ.ರಾಮಲಿಂಗಪ್ಪ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಬಾರಿ ಯುವಕರಿಗೆ ಹೆಚ್ಚಾಗಿ ಸೋಂಕು ತಗಲುತ್ತಿದೆ. ಕಿಮ್ಸ್​​ನಲ್ಲಿ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಆಕ್ಸಿಜನ್​ ಕೊರತೆಯಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೋವಿಡ್ ನಿಯಂತ್ರಣ ವಿಚಾರದಲ್ಲಿ ರಾಜ್ಯಗಳತ್ತ ಗಮನಹರಿಸಿ : ಪ್ರಧಾನಿಗೆ ಸಿದ್ದರಾಮಯ್ಯ ಮನವಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪ್ರತಿನಿತ್ಯ 300 ರಿಂದ 400 ಕೊರೊನಾ ಸೋಂಕಿತ​ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ನಿಗಾ ವಹಿಸಬೇಕಿದೆ.

ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ಅವಳಿನಗರ

ಕಳೆದ ಬಾರಿ ವಯೋವೃದ್ಧರಲ್ಲೇ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಕೊರೊನಾ ಎರಡನೇ ಅಲೆಯಲ್ಲಿ ಯುವಕರೇ ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಒಂದನೇ ಹಾಗೂ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 687 ಜನರು ಕೋವಿಡ್​​ಗೆ ಪ್ರಾಣ ಕಳೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿಲ್ಲ. ಬದಲಾಗಿ ಅವಳಿ ನಗರದಲ್ಲೇ ಶೇ 80ರಷ್ಟು ಜನರಿಗೆ ಕೊರೊನಾ ವಕ್ಕರಿಸುತ್ತಿದ್ದು, ಸಾವಿನ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಸರ್ಕಾರದ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮುಖ್ಯವಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಯಾವಾಗ, ಯಾರಿಗೆ ಏನಾಗುತ್ತೋ ಗೊತ್ತಿಲ್ಲ. ಹೀಗಾಗಿ, ಎಲ್ಲರೂ ಕೋವಿಡ್​ ನಿಯಮ ಪಾಲಿಸಬೇಕು. ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕೋ, ಅದನ್ನು ಕೈಗೊಳ್ಳುತ್ತದೆ ಎಂದರು.

ಕಿಮ್ಸ್​​ ನಿರ್ದೇಶಕ ಡಾ.ರಾಮಲಿಂಗಪ್ಪ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಬಾರಿ ಯುವಕರಿಗೆ ಹೆಚ್ಚಾಗಿ ಸೋಂಕು ತಗಲುತ್ತಿದೆ. ಕಿಮ್ಸ್​​ನಲ್ಲಿ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಆಕ್ಸಿಜನ್​ ಕೊರತೆಯಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೋವಿಡ್ ನಿಯಂತ್ರಣ ವಿಚಾರದಲ್ಲಿ ರಾಜ್ಯಗಳತ್ತ ಗಮನಹರಿಸಿ : ಪ್ರಧಾನಿಗೆ ಸಿದ್ದರಾಮಯ್ಯ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.