ETV Bharat / city

ವರದಕ್ಷಿಣೆಗಾಗಿ ಪತ್ನಿಯನ್ನೇ ಸುಟ್ಟು ಹಾಕಿದ್ದ ಪತಿ: ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿ ಕೋರ್ಟ್​ ತೀರ್ಪು - 1ನೇ ಜೆಎಂಎಫ್‌ಸಿ ಕೋರ್ಟ್‌

ವರದಕ್ಷಿಣೆಗಾಗಿ ಪತ್ನಿಯನ್ನ ಬಲಿ ಪಡೆದಿದ್ದ ಪಾಪಿ ಪತಿಗೆ ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ಕೋರ್ಟ್‌ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

1ನೇ ಜೆಎಂಎಫ್‌ಸಿ ಕೋರ್ಟ್‌
1ನೇ ಜೆಎಂಎಫ್‌ಸಿ ಕೋರ್ಟ್‌
author img

By

Published : Mar 5, 2020, 4:57 AM IST

ಹುಬ್ಬಳ್ಳಿ: ವರದಕ್ಷಿಣೆಗಾಗಿ ಕಿರುಕುಳ ನೀಡಿ ಪತ್ನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಆರೋಪಿಗೆ ಇಲ್ಲಿನ 1ನೇ ಜೆಎಂಎಫ್‌ಸಿ ಕೋರ್ಟ್‌ ಜೀವಾವಧಿ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಸುತಗಟ್ಟಿ ನಿವಾಸಿ ಈರಣ್ಣಾ ಬಸವರಾಜ ಕಮ್ಮಾರನಿಗೆ 1ನೇ ಜೆಎಂಎಫ್‌ಸಿ ಕೋರ್ಟ್‌ ಜೀವಾವಧಿ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಮೇ 21ರಂದು ಈರಣ್ಣಾ ನವಲಗುಂದದ ವಿಜಯಲಕ್ಷ್ಮೀ ಅವರನ್ನು ವಿವಾಹವಾಗಿದ್ದರು. ವರದಕ್ಷಿಣೆಗಾಗಿ ಪತ್ನಿಗೆ ಹಿಂಸೆ ನೀಡುತ್ತಿದ್ದ ಅವನು, 2016 ರ ಮಾರ್ಚ್​ 12 ರಂದು ಪತ್ನಿಯನ್ನು ಕೊಲೆ ಮಾಡಿ, ಸುತಗಟ್ಟಿ ಗ್ರಾಮದ ಹೊಲವೊಂದರಲ್ಲಿ ಸುಟ್ಟು ಹಾಕಿದ್ದ.

ಈ ಪ್ರಕರಣ ಕುರಿತು ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ಮಂಗಳವಾರ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದರು.

ಹುಬ್ಬಳ್ಳಿ: ವರದಕ್ಷಿಣೆಗಾಗಿ ಕಿರುಕುಳ ನೀಡಿ ಪತ್ನಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಆರೋಪಿಗೆ ಇಲ್ಲಿನ 1ನೇ ಜೆಎಂಎಫ್‌ಸಿ ಕೋರ್ಟ್‌ ಜೀವಾವಧಿ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಸುತಗಟ್ಟಿ ನಿವಾಸಿ ಈರಣ್ಣಾ ಬಸವರಾಜ ಕಮ್ಮಾರನಿಗೆ 1ನೇ ಜೆಎಂಎಫ್‌ಸಿ ಕೋರ್ಟ್‌ ಜೀವಾವಧಿ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಮೇ 21ರಂದು ಈರಣ್ಣಾ ನವಲಗುಂದದ ವಿಜಯಲಕ್ಷ್ಮೀ ಅವರನ್ನು ವಿವಾಹವಾಗಿದ್ದರು. ವರದಕ್ಷಿಣೆಗಾಗಿ ಪತ್ನಿಗೆ ಹಿಂಸೆ ನೀಡುತ್ತಿದ್ದ ಅವನು, 2016 ರ ಮಾರ್ಚ್​ 12 ರಂದು ಪತ್ನಿಯನ್ನು ಕೊಲೆ ಮಾಡಿ, ಸುತಗಟ್ಟಿ ಗ್ರಾಮದ ಹೊಲವೊಂದರಲ್ಲಿ ಸುಟ್ಟು ಹಾಕಿದ್ದ.

ಈ ಪ್ರಕರಣ ಕುರಿತು ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ಮಂಗಳವಾರ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.