ETV Bharat / city

ಹುಬ್ಬಳ್ಳಿ ಕಚ್ಚಾ ಬಾಂಬ್ ಸ್ಫೋಟ ಪ್ರಕರಣ ಖುಲಾಸೆಗೆ ಅರ್ಜಿ: ಎರಡು ವರ್ಷವಾದರೂ ಸಿಕ್ಕಿಲ್ಲ ಸಾಕ್ಷಿ, ಪುರಾವೆ.!

author img

By

Published : Aug 13, 2021, 7:50 PM IST

ವಿಶ್ವದ ಅತೀ ಉದ್ದದ ರೈಲ್ವೆ ಪ್ಲಾಟ್​ ಫಾರಂ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಜರುಗಿದ್ದ ನಾಡ ಬಾಂಬ್​ ಸ್ಫೋಟ ಪ್ರಕರಣವನ್ನು ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಪ್ರಕರಣಕ್ಕೆ ಸಂಬಂಧಿಸಿ ತನಿಕೆ ನಡೆಯುತ್ತಿದ್ದರೂ ಯಾವುದೇ ಸುಳಿವು ಸಿಕ್ಕಿಲ್ಲ. ಇದರಿಂದಾಗಿ ಪ್ರಕರಣವನ್ನು ಖುಲಾಸೆ ಮಾಡಲು ನಿರ್ಧರಿಸಲಾಗಿದೆ.

crude-bomb-blast-at-hubli-railway-station-acquitted
ಹುಬ್ಬಳ್ಳಿ ಕಚ್ಚಾ ಬಾಂಬ್ ಸ್ಫೋಟ ಪ್ರಕರಣ

ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕಚ್ಚಾ ಬಾಂಬ್ ಸ್ಫೋಟ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ, ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೂ ಹೇಗೆ ಎಂಬ ಕುತೂಹಲ ಮೂಡಿದೆ.

ಹೌದು. ವಿಶ್ವದ ಅತೀ ಉದ್ದದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಸಮೀಪಿಸಿದರೂ ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ತಾತ್ಕಾಲಿಕವಾಗಿ ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ‘ಸಿ ರಿಪೋರ್ಟ್’ ಸಲ್ಲಿಸಿದ್ದಾರೆ.

2019ರ ಅಕ್ಟೋಬರ್ 21ರಂದು ಹುಬ್ಬಳ್ಳಿ- ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು. ಇದರಲಿದ್ದ ಒಂದು ಬಾಂಬ್ ಸ್ಫೋಟಗೊಂಡ ಪರಿಣಾಮ ಹುಸೇನಸಾಬ್​ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಫೋಟಗೊಂಡ ಸ್ಥಳಕ್ಕೆ ಅಂದಿನ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಮತ್ತಿತರರು ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು.

26 ರೈಲ್ವೆ ನಿಲ್ದಾಣಗಳ ಸಿಸಿಟಿವಿ ಪರಿಶೀಲನೆ

ಅಂದಿನ ರೈಲ್ವೆ ಎಸ್‌ಪಿ ಬೋರಲಿಂಗಯ್ಯ ಹಾಗೂ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಬಿ.ಬಿ. ಪಾಟೀಲ ನೇತೃತ್ವದ ತಂಡ ವಿಜಯವಾಡದಿಂದ ಹುಬ್ಬಳ್ಳಿವರೆಗೆ ಎಲ್ಲ 26 ರೈಲು ನಿಲ್ದಾಣಗಳ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದರು. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣಕ್ಕೆ ಎರಡೆರಡು ಬಾರಿ ತೆರಳಿ ತನಿಖೆ ನಡೆಸಿದ್ದರು. ಆದರೂ ಸ್ಫೋಟದ ಕುರಿತ ಯಾವ ಸುಳಿವೂ ಸಿಗಲಿಲ್ಲ. ಯಾವುದೇ ಸಾಕ್ಷಿ, ಪುರಾವೆ, ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದಾರೆ.

‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’

ಇನ್ನೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಅಂಶ ಅಂದರೆ, ವಿಜಯವಾಡದಿಂದ ಹುಬ್ಬಳ್ಳಿಗೆ ಬಂದಿದ್ದ ಅಮರಾವತಿ ಎಕ್ಸ್‌ಪ್ರೆಸ್ ರೈಲು ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಎಲ್ಲ ಪ್ರಯಾಣಿಕರು ಇಳಿದ ಬಳಿಕ 8 ಲಿಂಬೆಹಣ್ಣಿನ ಗಾತ್ರದ ಕಚ್ಚಾ ಬಾಂಬ್‌ಗಳಿದ್ದ ಬಕೆಟ್ ಸಿಕ್ಕಿತ್ತು. ಅದರ ಮೇಲೆ ‘ಪ್ರಕಾಶ ಅಭಿತ್ಕರ್, ಕೊಲ್ಲಾಪುರ ಎಂಎಲ್‌ಎ, ಗುರಗೋಟಿ, ‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’ ಎಂದು ಬರೆಯಲಾಗಿತ್ತು. ಸಂಶಯಾಸ್ಪದ ಬಕೆಟ್ ಕಂಡ ಕೂಡಲೇ ಕಾರ್ಮಿಕ ಸ್ಥಳದಲ್ಲಿದ್ದ ಆರ್‌ಪಿಎಫ್ ಪೇದೆ ರವಿ ರಾಠೋಡ್​​​​ಗೆ​ ಮಾಹಿತಿ ನೀಡಿದ್ದರು. ಆ ಬಕೆಟ್ ತೆಗೆದುಕೊಂಡು ಬಂದ ರವಿ ಸ್ಟೇಷನ್ ಮಾಸ್ಟರ್‌ಗೆ ವಿಷಯ ತಿಳಿಸಿದ್ದರು.

ಅಧಿಕಾರಿಗಳ ಅಮಾನತು, ಚಾಹಾ ಮಾರುವನ ಕೈ ಛಿದ್ರ

ಬಳಿಕ ಕುತೂಹಲ ತಡೆಯಲಾರದೇ ಚಹಾ ಮಾರುವ ಹುಸೇನ್​ಸಾಬ್​ನನ್ನು ಕರೆದು, ಅದನ್ನು ಒಡೆದು ಪರೀಕ್ಷಿಸುವಂತೆ ಸೂಚಿಸಿದ್ದ. ಆತ ಕೈಯಲ್ಲಿ ಹಿಡಿದು ನೆಲಕ್ಕೆ ಒಡೆದ ಕೂಡಲೇ ಬಾಂಬ್ ಸ್ಫೋಟಗೊಂಡು ಆತನ ಕೈ ಛಿದ್ರಗೊಂಡಿತ್ತು. ಸ್ಟೇಷನ್ ಮಾಸ್ಟರ್ ಕಚೇರಿಯ ಗಾಜು ಪುಡಿ ಪುಡಿಯಾಗಿತ್ತು. ಆರ್‌ಪಿಎಫ್ ಪೇದೆ ರಾಠೋಡ್​​​ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿತ್ತು. ಮೇಲಧಿಕಾರಿಗಳಿಗೆ ವಿಷಯ ತಿಳಿಸಿ ಅವರಿಗೆ ಒಪ್ಪಿಸಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರ್‌ಪಿಎಫ್‌ನ ರವಿ ರಾಠೋಡ್​ ಹಾಗೂ ಕೆಲ ಅಧಿಕಾರಿಗಳನ್ನು ಆರ್‌ಪಿಎಫ್ ಅಮಾನತುಗೊಳಿಸಿ ಕೈತೊಳೆದುಕೊಂಡಿತ್ತು.

ಪ್ರಕರಣ ದಾಖಲೆಗೆ ರೈಲ್ವೆ ಪೊಲೀಸ್​ ಆರ್​ಪಿಎಫ್​​ ನಡುವೆ ಗೊಂದಲ

ಒಟ್ಟಾರೆ ಈ ಪ್ರಕರಣ ಆರಂಭದಿಂದ ಈವರೆಗೆ ಗೊಂದಲದ ಗೂಡಾಗಿತ್ತು. ಸ್ಫೋಟಗೊಂಡ ಬಳಿಕ ಯಾರು ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬ ಕುರಿತು ರೈಲ್ವೆ ಇಲಾಖೆ, ರೈಲ್ವೆ ಪೊಲೀಸ್, ಆರ್‌ಪಿಎಫ್‌ಗೆ ಸ್ಪಷ್ಟತೆ ಇರಲಿಲ್ಲ. ಇದಕ್ಕಾಗಿ ಕಾಲಹರಣ ಮಾಡಿದ್ದರು. ಮರುದಿನ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಕೆಟ್‌ನಲ್ಲಿದ್ದ 7 ಬಾಂಬ್‌ಗಳನ್ನು ನಿಲ್ದಾಣದ ಪಕ್ಕದ ಖುಲ್ಲಾ ಜಾಗೆಯಲ್ಲಿ ಗುಂಡಿ ತೋಡಿ ಮರಳಿನ ಚೀಲಗಳ ನಡುವೆ ಮುಚ್ಚಿಟ್ಟಿದ್ದರು. ಐದು ದಿನಗಳ ಬಳಿಕ ಬೆಂಗಳೂರಿನಿಂದ ಬಂದ ಬಾಂಬ್ ನಿಷ್ಕ್ರಿಯ ದಳ ನಿರ್ಜನ ಪ್ರದೇಶದಲ್ಲಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿತ್ತು. ಆದರೆ, ಪ್ರಕರಣ ನಡೆದು ಎರಡು ವರ್ಷಗಳಾದರೂ ಕೂಡ ಇನ್ನೂ ಆರೋಪಿಗಳು ಪತ್ತೆಯಾಗದೇ ಇರುವುದು ಪ್ರಕರಣಕ್ಕೆ ಅಂತ್ಯ ಹಾಡಲು ರೈಲ್ವೆ ಇಲಾಖೆ ಮುಂದಾಗಿದೆ.

ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕಚ್ಚಾ ಬಾಂಬ್ ಸ್ಫೋಟ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ, ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೂ ಹೇಗೆ ಎಂಬ ಕುತೂಹಲ ಮೂಡಿದೆ.

ಹೌದು. ವಿಶ್ವದ ಅತೀ ಉದ್ದದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಸಮೀಪಿಸಿದರೂ ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣವನ್ನು ತಾತ್ಕಾಲಿಕವಾಗಿ ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ‘ಸಿ ರಿಪೋರ್ಟ್’ ಸಲ್ಲಿಸಿದ್ದಾರೆ.

2019ರ ಅಕ್ಟೋಬರ್ 21ರಂದು ಹುಬ್ಬಳ್ಳಿ- ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು. ಇದರಲಿದ್ದ ಒಂದು ಬಾಂಬ್ ಸ್ಫೋಟಗೊಂಡ ಪರಿಣಾಮ ಹುಸೇನಸಾಬ್​ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಫೋಟಗೊಂಡ ಸ್ಥಳಕ್ಕೆ ಅಂದಿನ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಮತ್ತಿತರರು ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು.

26 ರೈಲ್ವೆ ನಿಲ್ದಾಣಗಳ ಸಿಸಿಟಿವಿ ಪರಿಶೀಲನೆ

ಅಂದಿನ ರೈಲ್ವೆ ಎಸ್‌ಪಿ ಬೋರಲಿಂಗಯ್ಯ ಹಾಗೂ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಬಿ.ಬಿ. ಪಾಟೀಲ ನೇತೃತ್ವದ ತಂಡ ವಿಜಯವಾಡದಿಂದ ಹುಬ್ಬಳ್ಳಿವರೆಗೆ ಎಲ್ಲ 26 ರೈಲು ನಿಲ್ದಾಣಗಳ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದರು. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣಕ್ಕೆ ಎರಡೆರಡು ಬಾರಿ ತೆರಳಿ ತನಿಖೆ ನಡೆಸಿದ್ದರು. ಆದರೂ ಸ್ಫೋಟದ ಕುರಿತ ಯಾವ ಸುಳಿವೂ ಸಿಗಲಿಲ್ಲ. ಯಾವುದೇ ಸಾಕ್ಷಿ, ಪುರಾವೆ, ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದಾರೆ.

‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’

ಇನ್ನೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಅಂಶ ಅಂದರೆ, ವಿಜಯವಾಡದಿಂದ ಹುಬ್ಬಳ್ಳಿಗೆ ಬಂದಿದ್ದ ಅಮರಾವತಿ ಎಕ್ಸ್‌ಪ್ರೆಸ್ ರೈಲು ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಎಲ್ಲ ಪ್ರಯಾಣಿಕರು ಇಳಿದ ಬಳಿಕ 8 ಲಿಂಬೆಹಣ್ಣಿನ ಗಾತ್ರದ ಕಚ್ಚಾ ಬಾಂಬ್‌ಗಳಿದ್ದ ಬಕೆಟ್ ಸಿಕ್ಕಿತ್ತು. ಅದರ ಮೇಲೆ ‘ಪ್ರಕಾಶ ಅಭಿತ್ಕರ್, ಕೊಲ್ಲಾಪುರ ಎಂಎಲ್‌ಎ, ಗುರಗೋಟಿ, ‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’ ಎಂದು ಬರೆಯಲಾಗಿತ್ತು. ಸಂಶಯಾಸ್ಪದ ಬಕೆಟ್ ಕಂಡ ಕೂಡಲೇ ಕಾರ್ಮಿಕ ಸ್ಥಳದಲ್ಲಿದ್ದ ಆರ್‌ಪಿಎಫ್ ಪೇದೆ ರವಿ ರಾಠೋಡ್​​​​ಗೆ​ ಮಾಹಿತಿ ನೀಡಿದ್ದರು. ಆ ಬಕೆಟ್ ತೆಗೆದುಕೊಂಡು ಬಂದ ರವಿ ಸ್ಟೇಷನ್ ಮಾಸ್ಟರ್‌ಗೆ ವಿಷಯ ತಿಳಿಸಿದ್ದರು.

ಅಧಿಕಾರಿಗಳ ಅಮಾನತು, ಚಾಹಾ ಮಾರುವನ ಕೈ ಛಿದ್ರ

ಬಳಿಕ ಕುತೂಹಲ ತಡೆಯಲಾರದೇ ಚಹಾ ಮಾರುವ ಹುಸೇನ್​ಸಾಬ್​ನನ್ನು ಕರೆದು, ಅದನ್ನು ಒಡೆದು ಪರೀಕ್ಷಿಸುವಂತೆ ಸೂಚಿಸಿದ್ದ. ಆತ ಕೈಯಲ್ಲಿ ಹಿಡಿದು ನೆಲಕ್ಕೆ ಒಡೆದ ಕೂಡಲೇ ಬಾಂಬ್ ಸ್ಫೋಟಗೊಂಡು ಆತನ ಕೈ ಛಿದ್ರಗೊಂಡಿತ್ತು. ಸ್ಟೇಷನ್ ಮಾಸ್ಟರ್ ಕಚೇರಿಯ ಗಾಜು ಪುಡಿ ಪುಡಿಯಾಗಿತ್ತು. ಆರ್‌ಪಿಎಫ್ ಪೇದೆ ರಾಠೋಡ್​​​ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿತ್ತು. ಮೇಲಧಿಕಾರಿಗಳಿಗೆ ವಿಷಯ ತಿಳಿಸಿ ಅವರಿಗೆ ಒಪ್ಪಿಸಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರ್‌ಪಿಎಫ್‌ನ ರವಿ ರಾಠೋಡ್​ ಹಾಗೂ ಕೆಲ ಅಧಿಕಾರಿಗಳನ್ನು ಆರ್‌ಪಿಎಫ್ ಅಮಾನತುಗೊಳಿಸಿ ಕೈತೊಳೆದುಕೊಂಡಿತ್ತು.

ಪ್ರಕರಣ ದಾಖಲೆಗೆ ರೈಲ್ವೆ ಪೊಲೀಸ್​ ಆರ್​ಪಿಎಫ್​​ ನಡುವೆ ಗೊಂದಲ

ಒಟ್ಟಾರೆ ಈ ಪ್ರಕರಣ ಆರಂಭದಿಂದ ಈವರೆಗೆ ಗೊಂದಲದ ಗೂಡಾಗಿತ್ತು. ಸ್ಫೋಟಗೊಂಡ ಬಳಿಕ ಯಾರು ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬ ಕುರಿತು ರೈಲ್ವೆ ಇಲಾಖೆ, ರೈಲ್ವೆ ಪೊಲೀಸ್, ಆರ್‌ಪಿಎಫ್‌ಗೆ ಸ್ಪಷ್ಟತೆ ಇರಲಿಲ್ಲ. ಇದಕ್ಕಾಗಿ ಕಾಲಹರಣ ಮಾಡಿದ್ದರು. ಮರುದಿನ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಕೆಟ್‌ನಲ್ಲಿದ್ದ 7 ಬಾಂಬ್‌ಗಳನ್ನು ನಿಲ್ದಾಣದ ಪಕ್ಕದ ಖುಲ್ಲಾ ಜಾಗೆಯಲ್ಲಿ ಗುಂಡಿ ತೋಡಿ ಮರಳಿನ ಚೀಲಗಳ ನಡುವೆ ಮುಚ್ಚಿಟ್ಟಿದ್ದರು. ಐದು ದಿನಗಳ ಬಳಿಕ ಬೆಂಗಳೂರಿನಿಂದ ಬಂದ ಬಾಂಬ್ ನಿಷ್ಕ್ರಿಯ ದಳ ನಿರ್ಜನ ಪ್ರದೇಶದಲ್ಲಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿತ್ತು. ಆದರೆ, ಪ್ರಕರಣ ನಡೆದು ಎರಡು ವರ್ಷಗಳಾದರೂ ಕೂಡ ಇನ್ನೂ ಆರೋಪಿಗಳು ಪತ್ತೆಯಾಗದೇ ಇರುವುದು ಪ್ರಕರಣಕ್ಕೆ ಅಂತ್ಯ ಹಾಡಲು ರೈಲ್ವೆ ಇಲಾಖೆ ಮುಂದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.