ಹುಬ್ಬಳ್ಳಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಉತ್ತಮ ಆಡಳಿತಕ್ಕಾಗಿ ಮತದಾರರು ನಮಗೆ ಶ್ರೀರಕ್ಷೆ ನೀಡಿದ್ದು, ಉಪ ಚುನಾವಣೆಯ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಚುನಾವಣೆ ಅಂದ ಮೇಲೆ ಅಸಮಾಧಾನ ಇರೋದು ಸಹಜ. ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ. ಆದರೆ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ ಅಷ್ಟೇ. ಆದರೂ ನಮ್ಮ ಪಕ್ಷಕ್ಕೆ ಹಾನಿಯಾಗುವ ಕೆಲಸ ಯಾರೂ ಮಾಡಲ್ಲ ಎಂದರು.
ಎಲ್ಲರೂ ಒಟ್ಟಾಗಿ ಉಪ ಚುನಾವಣೆ ಎದುರಿಸುತ್ತೇವೆ. ಸಿಎಂ ಬಿಎಸ್ವೈ ನೆರೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಮತದಾರರ ಶ್ರೀರಕ್ಷೆ ನಮ್ಮ ಗೆಲುವಿಗೆ ಅಸ್ತ್ರವಾಗಿ ಪರಿಣಮಿಸಲಿದೆ ಎಂದು ಕಾರಜೋಳ ಹೇಳಿದರು.