ಹುಬ್ಬಳ್ಳಿ: ಮಂಗಳವಾರ ರಾತ್ರಿಯಿಂದ ವೆಂಟಿಲೇಟರ್ಗಾಗಿ ಪರದಾಡಿದ ವ್ಯಕ್ತಿಯೊಬ್ಬ ಸರಿಯಾದ ಸಮಯಕ್ಕೆ ವೆಂಟಿಲೇಶನ್ ಸಿಗದೆ ಸಾವನ್ನಪ್ಪಿದ ಘಟನೆ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಧಾರವಾಡ ಮೂಲದ ವ್ಯಕ್ತಿ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ಮೃತನ ಪತ್ನಿ ಮಂಗಳವಾರ ರಾತ್ರಿಯೇ ತನ್ನ ಪತಿಯನ್ನು ಕಿಮ್ಸ್ಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೆಂಟಿಲೇಟರ್ಗಾಗಿ ಪರದಾಡಿದ್ದು, ವೆಂಟಿಲೇಟರ್ ಸಿಕ್ಕಿರಲಿಲ್ಲ.
ಇಂದು ಬೆಳಗ್ಗೆ ವೆಂಟಿಲೇಟರ್ ವಾರ್ಡ್ಗೆ ಶಿಫ್ಟ್ ಮಾಡುವಾಗ ವ್ಯಕ್ತಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಓದಿ: ಎಲ್ಲಾ ವಲಯಕ್ಕೂ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ತನಿಖೆ ವಿಸ್ತರಣೆ: ಬೊಮ್ಮಾಯಿ