ETV Bharat / city

ಧಾರವಾಡ ಎಸ್​ಡಿಎಮ್ ಆಸ್ಪತ್ರೆ ಸುತ್ತಮುತ್ತ ಎಲ್ಲೂ ಸೀಲ್​​ಡೌನ್ ಮಾಡಿಲ್ಲ.. ಜಿಲ್ಲಾಧಿಕಾರಿಗಳ ಸ್ಪಷ್ಟಣೆ

author img

By

Published : Dec 1, 2021, 1:07 PM IST

ವಿದ್ಯಾರ್ಥಿಗಳಿರುವ ಎರಡು ವಸತಿ ನಿಲಯ ಹಾಗೂ ಎಸ್​ಡಿಎಮ್ ಆಸ್ಪತ್ರೆಯನ್ನು ಹೊರತುಪಡಿಸಿ, ಉಳಿದ ಎಲ್ಲೂ ಕಂಟೇನ್ಮೆಂಟ್ ಝೋನ್ ಅಥವಾ ಸೀಲ್​ಡೌನ್ ಪ್ರದೇಶ ಎಂದು ಆದೇಶಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ..

corona in Dharwad SDM Hospital
ಧಾರವಾಡ ಎಸ್​ಡಿಎಮ್ ಆಸ್ಪತ್ರೆಯಲ್ಲಿ ಕೋವಿಡ್​

ಧಾರವಾಡ : ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆ ಕಳೆದ ನ. 25ರಿಂದ ಧಾರವಾಡ ಎಸ್​ಡಿಎಮ್ ಮಹಾವಿದ್ಯಾಲಯವನ್ನು ಬಂದ್ ಮಾಡಲಾಗಿದೆ.

ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯಗಳನ್ನು ಮಾತ್ರ ನಿಯಮಾನುಸಾರ ಸೀಲ್​ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಡಿಸಿ ನಿತೇಶ್ ಪಾಟೀಲ ಸ್ಪಷ್ಟಣೆ : ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ, ಮಕ್ಕಳ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಸ್​ಡಿಎಮ್ ಆಸ್ಪತ್ರೆಯ ಸಮೀಪದಲ್ಲಿರುವ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಡಿ.1ರವರೆಗೆ ತರಗತಿಗಳನ್ನು ನಡೆಸದಂತೆ, ತೆರೆಯದಂತೆ ಸೂಚಿಸಲಾಗಿತ್ತು. ಆದರೆ, ಜಿಲ್ಲಾಡಳಿತದಿಂದ ಯಾವುದೇ ಇತರೆ ಪ್ರದೇಶ ಅಥವಾ ವಿದ್ಯಾಲಯದ 500 ಮೀಟರ್ ವ್ಯಾಪ್ತಿಯಲ್ಲಿ ಸೀಲ್​​ಡೌನ್ ಮಾಡಿದ ಕುರಿತು ಆದೇಶ ಹೊರಡಿಸಿರುವುದಿಲ್ಲ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹಾಗೂ ಕೋವಿಡ್ ಪ್ರಸರಣವಾಗದಂತೆ ತಡೆಯಲು ಎಸ್​ಡಿಎಮ್ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸಾ ವಿಭಾಗವನ್ನು ಮತ್ತು ಹೊಸ ರೋಗಿಗಳ ಅಡ್ಮಿಶನ್​​ ಮಾಡುವುದನ್ನು ಕೆಲವು ದಿನಗಳ ಕಾಲ ನಿಲ್ಲಿಸಲಾಗಿದೆ. ಉಳಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಉದ್ಯಮಗಳನ್ನು ತೆರೆಯಲು ಅನುಮತಿಸಲಾಗಿದೆ ಎಂದಿದ್ದಾರೆ.

ಕೋವಿಡ್​​ ಮುನ್ನೆಚ್ಚರಿಕೆ ಕ್ರಮ : ಹೆಗ್ಗಡೆ ಕಲಾಕ್ಷೇತ್ರದ ಆವರಣ ಮತ್ತು ಒಳಾಂಗಣದಲ್ಲಿ ಈಗಾಗಲೇ 2-3 ಬಾರಿ ಸ್ಯಾನಿಟೈಸೇಶನ್ ಮಾಡಲಾಗಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮದುವೆ, ಸಭೆಗಳಿಗೆ ಅನುಮತಿ ನೀಡಲಾಗುತ್ತಿದೆ. ಹೆಗ್ಗಡೆ ಕಲಾಕ್ಷೇತ್ರದಲ್ಲಿನ ಕಾರ್ಯಕ್ರಮಗಳಿಗೆ ಆಗಮಿಸುವವರಿಗೆ ಆಗಮನ ಮತ್ತು ನಿರ್ಗಮನಕ್ಕೆ ಇರುವ ಸ್ಥಳವು ಪ್ರತ್ಯೇಕವಾಗಿರುತ್ತದೆ. ಕಳೆದ ರವಿವಾರದಿಂದ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ.

ಕೇವಲ ನೂರು ಜನರಿಗೆ ಮಾತ್ರ ಅಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಲಾಗಿದೆ. ಮತ್ತು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕಾ ಕ್ರಮಕೈಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ತಪ್ಪು ಮಾಹಿತಿಯುಳ್ಳ ಸುದ್ದಿ ಪ್ರಕಟವಾಗುತ್ತಿದೆ : ಆದರೆ, ಕೆಲವು ಮಾಧ್ಯಮಗಳಲ್ಲಿ ಈ ಕುರಿತು ತಪ್ಪು ಮಾಹಿತಿಯುಳ್ಳ ಸುದ್ದಿ ಪ್ರಕಟವಾಗುತ್ತಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರು ಸಹಕರಿಸುವಂತೆ ಮಾಡಲು ಜಾಗೃತಿ ಮೂಡಿಸುವ ವರದಿಗಳನ್ನು ಪ್ರಕಟಿಸಲು ಮಾಧ್ಯಮ ಮಿತ್ರರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಕೋವಿಡ್​ ಅಬ್ಬರ.. ಎಸ್​ಡಿಎಮ್​​​ ಕಾಲೇಜಿನ ಓಪಿಡಿ, ಹೊಸ ರೋಗಿಗಳ ಎಂಟ್ರಿಗೆ ನಿರ್ಬಂಧ

ವಿದ್ಯಾರ್ಥಿಗಳಿರುವ ಎರಡು ವಸತಿ ನಿಲಯ ಹಾಗೂ ಎಸ್​ಡಿಎಮ್ ಆಸ್ಪತ್ರೆಯನ್ನು ಹೊರತುಪಡಿಸಿ, ಉಳಿದ ಎಲ್ಲೂ ಕಂಟೇನ್ಮೆಂಟ್ ಝೋನ್ ಅಥವಾ ಸೀಲ್​ಡೌನ್ ಪ್ರದೇಶ ಎಂದು ಆದೇಶಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ಎಸ್‌ಡಿಎಂ ಮೆಡಿಕಲ್ ಕಾಲೇಜು ಕೋವಿಡ್‌ ಸ್ಫೋಟದ ಎಫೆಕ್ಟ್‌; ಸಮೀಪದ ಶಾಲಾ - ಕಾಲೇಜುಗಳಿಗೆ ರಜೆ

ಧಾರವಾಡ : ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆ ಕಳೆದ ನ. 25ರಿಂದ ಧಾರವಾಡ ಎಸ್​ಡಿಎಮ್ ಮಹಾವಿದ್ಯಾಲಯವನ್ನು ಬಂದ್ ಮಾಡಲಾಗಿದೆ.

ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯಗಳನ್ನು ಮಾತ್ರ ನಿಯಮಾನುಸಾರ ಸೀಲ್​ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಡಿಸಿ ನಿತೇಶ್ ಪಾಟೀಲ ಸ್ಪಷ್ಟಣೆ : ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ, ಮಕ್ಕಳ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಸ್​ಡಿಎಮ್ ಆಸ್ಪತ್ರೆಯ ಸಮೀಪದಲ್ಲಿರುವ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಡಿ.1ರವರೆಗೆ ತರಗತಿಗಳನ್ನು ನಡೆಸದಂತೆ, ತೆರೆಯದಂತೆ ಸೂಚಿಸಲಾಗಿತ್ತು. ಆದರೆ, ಜಿಲ್ಲಾಡಳಿತದಿಂದ ಯಾವುದೇ ಇತರೆ ಪ್ರದೇಶ ಅಥವಾ ವಿದ್ಯಾಲಯದ 500 ಮೀಟರ್ ವ್ಯಾಪ್ತಿಯಲ್ಲಿ ಸೀಲ್​​ಡೌನ್ ಮಾಡಿದ ಕುರಿತು ಆದೇಶ ಹೊರಡಿಸಿರುವುದಿಲ್ಲ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹಾಗೂ ಕೋವಿಡ್ ಪ್ರಸರಣವಾಗದಂತೆ ತಡೆಯಲು ಎಸ್​ಡಿಎಮ್ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸಾ ವಿಭಾಗವನ್ನು ಮತ್ತು ಹೊಸ ರೋಗಿಗಳ ಅಡ್ಮಿಶನ್​​ ಮಾಡುವುದನ್ನು ಕೆಲವು ದಿನಗಳ ಕಾಲ ನಿಲ್ಲಿಸಲಾಗಿದೆ. ಉಳಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಉದ್ಯಮಗಳನ್ನು ತೆರೆಯಲು ಅನುಮತಿಸಲಾಗಿದೆ ಎಂದಿದ್ದಾರೆ.

ಕೋವಿಡ್​​ ಮುನ್ನೆಚ್ಚರಿಕೆ ಕ್ರಮ : ಹೆಗ್ಗಡೆ ಕಲಾಕ್ಷೇತ್ರದ ಆವರಣ ಮತ್ತು ಒಳಾಂಗಣದಲ್ಲಿ ಈಗಾಗಲೇ 2-3 ಬಾರಿ ಸ್ಯಾನಿಟೈಸೇಶನ್ ಮಾಡಲಾಗಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮದುವೆ, ಸಭೆಗಳಿಗೆ ಅನುಮತಿ ನೀಡಲಾಗುತ್ತಿದೆ. ಹೆಗ್ಗಡೆ ಕಲಾಕ್ಷೇತ್ರದಲ್ಲಿನ ಕಾರ್ಯಕ್ರಮಗಳಿಗೆ ಆಗಮಿಸುವವರಿಗೆ ಆಗಮನ ಮತ್ತು ನಿರ್ಗಮನಕ್ಕೆ ಇರುವ ಸ್ಥಳವು ಪ್ರತ್ಯೇಕವಾಗಿರುತ್ತದೆ. ಕಳೆದ ರವಿವಾರದಿಂದ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ.

ಕೇವಲ ನೂರು ಜನರಿಗೆ ಮಾತ್ರ ಅಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಲಾಗಿದೆ. ಮತ್ತು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕಾ ಕ್ರಮಕೈಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ತಪ್ಪು ಮಾಹಿತಿಯುಳ್ಳ ಸುದ್ದಿ ಪ್ರಕಟವಾಗುತ್ತಿದೆ : ಆದರೆ, ಕೆಲವು ಮಾಧ್ಯಮಗಳಲ್ಲಿ ಈ ಕುರಿತು ತಪ್ಪು ಮಾಹಿತಿಯುಳ್ಳ ಸುದ್ದಿ ಪ್ರಕಟವಾಗುತ್ತಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರು ಸಹಕರಿಸುವಂತೆ ಮಾಡಲು ಜಾಗೃತಿ ಮೂಡಿಸುವ ವರದಿಗಳನ್ನು ಪ್ರಕಟಿಸಲು ಮಾಧ್ಯಮ ಮಿತ್ರರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಕೋವಿಡ್​ ಅಬ್ಬರ.. ಎಸ್​ಡಿಎಮ್​​​ ಕಾಲೇಜಿನ ಓಪಿಡಿ, ಹೊಸ ರೋಗಿಗಳ ಎಂಟ್ರಿಗೆ ನಿರ್ಬಂಧ

ವಿದ್ಯಾರ್ಥಿಗಳಿರುವ ಎರಡು ವಸತಿ ನಿಲಯ ಹಾಗೂ ಎಸ್​ಡಿಎಮ್ ಆಸ್ಪತ್ರೆಯನ್ನು ಹೊರತುಪಡಿಸಿ, ಉಳಿದ ಎಲ್ಲೂ ಕಂಟೇನ್ಮೆಂಟ್ ಝೋನ್ ಅಥವಾ ಸೀಲ್​ಡೌನ್ ಪ್ರದೇಶ ಎಂದು ಆದೇಶಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ಎಸ್‌ಡಿಎಂ ಮೆಡಿಕಲ್ ಕಾಲೇಜು ಕೋವಿಡ್‌ ಸ್ಫೋಟದ ಎಫೆಕ್ಟ್‌; ಸಮೀಪದ ಶಾಲಾ - ಕಾಲೇಜುಗಳಿಗೆ ರಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.