ಧಾರವಾಡ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಆರನೇ ದಿನಕ್ಕೆ ಕೊನೆಗೊಂಡಿದೆ.
ರೈತರೊಂದಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸಭೆ ನಡೆಸಿ, ರೈತರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಬಂದು ರೈತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿ, ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು. ಬಳಿಕ ರೈತರು ಧರಣಿ ವಾಪಸ್ ಪಡೆದರು.
ನಂತರ ರೈತಸೇನಾ ರಾಜ್ಯಾಧ್ಯಕ್ಷ, ವೀರೇಶ್ ಸೊಬರದಮಠ ಮಾತನಾಡಿ, ದೀಪಾ ಚೋಳನ್ ಇನ್ನು ಮೂರ್ನಾಲ್ಕು ದಿನಗಳಲ್ಲಿ ರೈತರ ಬೇಡಿಕೆಗಳನ್ನು ಸರ್ಕಾರದ ಜೊತೆ ಮಾತನಾಡಿ, ಈಡೇರಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ. ಹಾಗಾಗಿ ಧರಣಿಯನ್ನು ವಾಪಸ್ ಪಡೆದಿದ್ದೇವೆ ಎಂದು ತಿಳಿಸಿದರು.