ETV Bharat / city

ಕತ್ತಲಲ್ಲಿ ಹುಬ್ಬಳ್ಳಿ ಭೂಮಾಪನ ಕಚೇರಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಬೇಸರ

ವಿದ್ಯುತ್ ಬಿಲ್ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಿದ್ದಾರೆ. ಹೀಗಾಗಿ ಕರೆಂಟ್ ಕಟ್ ಮಾಡಿದ್ದಾರೆ ಎನ್ನಲಾಗ್ತಿದೆ.

author img

By

Published : Oct 27, 2021, 12:40 PM IST

hubli
ಕತ್ತಲಲ್ಲಿ ಹುಬ್ಬಳ್ಳಿ ಭೂಮಾಪನ ಕಚೇರಿ

ಹುಬ್ಬಳ್ಳಿ: ಇಲ್ಲಿರುವ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದೇ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಿ ಕಚೇರಿಯಲ್ಲಿ ಕಳೆದ 7 ದಿನಗಳಿಂದ ಕರೆಂಟ್ ಇಲ್ಲದೇ ಇರುವುದೇ ಇದಕ್ಕೆ ಕಾರಣ. ಅಧಿಕಾರಿಗಳು ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಹಾಗು, ಸಾರ್ವಜನಿಕರು ಕೆಲಸಕ್ಕಾಗಿ ಕಚೇರಿಗೆ ಬಂದಾಗ ಕರೆಂಟ್ ಇಲ್ಲ ಎಂದು ಹೇಳಿ ವಾಪಸ್‌ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕತ್ತಲಲ್ಲಿ ಹುಬ್ಬಳ್ಳಿ ಭೂಮಾಪನ ಕಚೇರಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಬೇಸರ

ಮಿನಿ ವಿಧಾನಸೌಧದಲ್ಲಿರುವ ಭೂಮಾಪನ ಇಲಾಖೆ ಕಚೇರಿಯಲ್ಲಿ ಕಳೆದೊಂದು ವಾರದಿಂದ ಕರೆಂಟ್ ಇಲ್ಲ. ಹೀಗಾಗಿ ಅಧಿಕಾರಿಗಳು ಹಾಗು ಸಿಬ್ಬಂದಿ ಕತ್ತಲಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಕಚೇರಿಗೆ ಬರುವ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದುಕೊಂಡೇ ಒಳಗೆ ಬರಬೇಕು. ಇಲ್ಲವಾದಲ್ಲಿ ಕಚೇರಿಯಲ್ಲಿ ಯಾರು, ಎಲ್ಲಿದ್ದಾರೆ ಎಂದು ಗೊತ್ತಾಗುವುದಿಲ್ಲ. ಅಷ್ಟರಮಟ್ಟಿಗೆ ಬೆಳಕಿನ ಸಮಸ್ಯೆ ಇದೆ. ಈ ಬಗ್ಗೆ ಸಂಬಂಧಪಟ್ಟವರು ಯಾಕೆ ಗಮನ ಹರಿಸುತ್ತಿಲ್ಲ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಹುಬ್ಬಳ್ಳಿ: ಇಲ್ಲಿರುವ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದೇ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಿ ಕಚೇರಿಯಲ್ಲಿ ಕಳೆದ 7 ದಿನಗಳಿಂದ ಕರೆಂಟ್ ಇಲ್ಲದೇ ಇರುವುದೇ ಇದಕ್ಕೆ ಕಾರಣ. ಅಧಿಕಾರಿಗಳು ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಹಾಗು, ಸಾರ್ವಜನಿಕರು ಕೆಲಸಕ್ಕಾಗಿ ಕಚೇರಿಗೆ ಬಂದಾಗ ಕರೆಂಟ್ ಇಲ್ಲ ಎಂದು ಹೇಳಿ ವಾಪಸ್‌ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕತ್ತಲಲ್ಲಿ ಹುಬ್ಬಳ್ಳಿ ಭೂಮಾಪನ ಕಚೇರಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಬೇಸರ

ಮಿನಿ ವಿಧಾನಸೌಧದಲ್ಲಿರುವ ಭೂಮಾಪನ ಇಲಾಖೆ ಕಚೇರಿಯಲ್ಲಿ ಕಳೆದೊಂದು ವಾರದಿಂದ ಕರೆಂಟ್ ಇಲ್ಲ. ಹೀಗಾಗಿ ಅಧಿಕಾರಿಗಳು ಹಾಗು ಸಿಬ್ಬಂದಿ ಕತ್ತಲಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಕಚೇರಿಗೆ ಬರುವ ಸಾರ್ವಜನಿಕರು ಕೈಯಲ್ಲಿ ಟಾರ್ಚ್ ಹಿಡಿದುಕೊಂಡೇ ಒಳಗೆ ಬರಬೇಕು. ಇಲ್ಲವಾದಲ್ಲಿ ಕಚೇರಿಯಲ್ಲಿ ಯಾರು, ಎಲ್ಲಿದ್ದಾರೆ ಎಂದು ಗೊತ್ತಾಗುವುದಿಲ್ಲ. ಅಷ್ಟರಮಟ್ಟಿಗೆ ಬೆಳಕಿನ ಸಮಸ್ಯೆ ಇದೆ. ಈ ಬಗ್ಗೆ ಸಂಬಂಧಪಟ್ಟವರು ಯಾಕೆ ಗಮನ ಹರಿಸುತ್ತಿಲ್ಲ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.