ETV Bharat / city

ಹುಬ್ಬಳ್ಳಿಯಲ್ಲಿ ಕಾಲೇಜು ನಿರ್ಮಾಣ ಮತ್ತು ರಸ್ತೆ ಕಾಮಗಾರಿಗೆ ಸಚಿವ ಶೆಟ್ಟರ್​​ ಭೂಮಿಪೂಜೆ - ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌

ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಹುಬ್ಬಳ್ಳಿಯಲ್ಲಿ ಇಂದು ಕಾಲೇಜು ನಿರ್ಮಾಣ ಮತ್ತು ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕಾಲೇಜು ನಿರ್ಮಾಣ ಮತ್ತು ರಸ್ತೆ ಕಾಮಗಾರಿಗೆ ಜಗದೀಶ್ ಶೆಟ್ಟರ್‌ ಭೂಮಿಪೂಜೆ
author img

By

Published : Oct 29, 2019, 9:25 PM IST

Updated : Oct 29, 2019, 11:27 PM IST

ಹುಬ್ಬಳ್ಳಿ: ನಗರದ ಗೋಪನಕೊಪ್ಪದ ಶಿವ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಹಾಗೂ ಶಿರಡಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಸಚಿವ ಜಗದೀಶ್ ಶೆಟ್ಟರ್‌ ಇಂದು ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಒಟ್ಟು ₹21 ಲಕ್ಷ ವೆಚ್ಚದ ಕಾಂಕ್ರೀಟ್‌ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ಎಸ್‌ಸಿಪಿ, ಟಿಎಸ್​ಪಿ ಅನುದಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 200 ಮೀಟರ್‌ ರಸ್ತೆ ಇದಾಗಿದೆ. ಹುಬ್ಬಳ್ಳಿಯಲ್ಲಿ ಕೆಲವೆಡೆ ನಿರ್ಮಿಸಿರುವ ರಸ್ತೆಗೆ ಪೇವರ್ಸ್‌ ಹಾಕಲಾಗಿದೆ. ಅವು ಕೂಡ ಕಿತ್ತುಕೊಂಡು ಹೋಗಿವೆ. ಆದ್ದರಿಂದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರ ಗುತ್ತಿಗೆದಾರರಿಗೆ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಕಾರಣ ಈಗ ಕಾಮಗಾರಿ ನಿಧಾನವಾಗುತ್ತಿವೆ. ಇದು ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ. ಈಗಿನ ನಮ್ಮ ಸರ್ಕಾರ ಹಂತ ಹಂತವಾಗಿ ಈ ಸಮಸ್ಯೆಯನ್ನು ಪರಿಹರಿಸುತ್ತಿದೆ ಎಂದರು.

ಇನ್ನು, ಶಿರಡಿ ನಗರದಲ್ಲಿ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಬಂಧ ಮಾತನಾಡಿದ ಶೆಟ್ಟರ್​, ಮೂರು ಲ್ಯಾಬ್‌ಗಳು, 14 ವರ್ಗ ಕೋಣೆಗಳನ್ನು ಒಳಗೊಂಡಿರುವ ಕಾಲೇಜಿನ ನೂತನ ಕಟ್ಟಡದ ಕಾಮಗಾರಿಯನ್ನು 15 ತಿಂಗಳಲ್ಲಿ ಪೂರ್ಣಗೊಳಿಸಬೇಕು. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ. ಮಳೆಗಾಲ ಮುಗಿದ ತಕ್ಷಣ ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ: ನಗರದ ಗೋಪನಕೊಪ್ಪದ ಶಿವ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಹಾಗೂ ಶಿರಡಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಸಚಿವ ಜಗದೀಶ್ ಶೆಟ್ಟರ್‌ ಇಂದು ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಒಟ್ಟು ₹21 ಲಕ್ಷ ವೆಚ್ಚದ ಕಾಂಕ್ರೀಟ್‌ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ಎಸ್‌ಸಿಪಿ, ಟಿಎಸ್​ಪಿ ಅನುದಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 200 ಮೀಟರ್‌ ರಸ್ತೆ ಇದಾಗಿದೆ. ಹುಬ್ಬಳ್ಳಿಯಲ್ಲಿ ಕೆಲವೆಡೆ ನಿರ್ಮಿಸಿರುವ ರಸ್ತೆಗೆ ಪೇವರ್ಸ್‌ ಹಾಕಲಾಗಿದೆ. ಅವು ಕೂಡ ಕಿತ್ತುಕೊಂಡು ಹೋಗಿವೆ. ಆದ್ದರಿಂದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರ ಗುತ್ತಿಗೆದಾರರಿಗೆ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಕಾರಣ ಈಗ ಕಾಮಗಾರಿ ನಿಧಾನವಾಗುತ್ತಿವೆ. ಇದು ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ. ಈಗಿನ ನಮ್ಮ ಸರ್ಕಾರ ಹಂತ ಹಂತವಾಗಿ ಈ ಸಮಸ್ಯೆಯನ್ನು ಪರಿಹರಿಸುತ್ತಿದೆ ಎಂದರು.

ಇನ್ನು, ಶಿರಡಿ ನಗರದಲ್ಲಿ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಬಂಧ ಮಾತನಾಡಿದ ಶೆಟ್ಟರ್​, ಮೂರು ಲ್ಯಾಬ್‌ಗಳು, 14 ವರ್ಗ ಕೋಣೆಗಳನ್ನು ಒಳಗೊಂಡಿರುವ ಕಾಲೇಜಿನ ನೂತನ ಕಟ್ಟಡದ ಕಾಮಗಾರಿಯನ್ನು 15 ತಿಂಗಳಲ್ಲಿ ಪೂರ್ಣಗೊಳಿಸಬೇಕು. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ. ಮಳೆಗಾಲ ಮುಗಿದ ತಕ್ಷಣ ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

Intro:ಹುಬ್ಬಳ್ಳಿ -03

ನಗರದ ಗೋಪನಕೊಪ್ಪದ ಶಿವ ಕಾಲನಿಯಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿ ಹಾಗೂ ಶಿರಡಿ ನಗರದಲ್ಲಿ ₹7 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಕಾಲೇಜು ನಿರ್ಮಾಣಕ್ಕೆ ಸಚಿವ ಜಗದೀಶ್ ಶೆಟ್ಟರ್‌ ಭೂಮಿಪೂಜೆ ನೆರವೇರಿಸಿದರು.

ಒಟ್ಟು ₹21 ಲಕ್ಷ. ಕಾಂಕ್ರೀಟ್‌ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ಎಸ್‌ಸಿಪಿ, ಟಿಎಸ್ ಪಿ ಅನುದಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 200 ಮೀಟರ್‌ ರಸ್ತೆ ಇದಾಗಿದೆ.

ಹುಬ್ಬಳ್ಳಿಯಲ್ಲಿ ಕೆಲವೆಡೆ ನಿರ್ಮಿಸಿರುವ ರಸ್ತೆಗೆ ಪೇವರ್ಸ್‌ ಹಾಕಲಾಗಿದೆ. ಅವು ಕೂಡ ಕಿತ್ತುಕೊಂಡು ಹೋಗಿವೆ. ಆದ್ದರಿಂದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರ ಗುತ್ತಿಗೆದಾರರಿಗೆ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಕಾರಣ ಈಗ ಕಾಮಗಾರಿ ನಿಧಾನವಾಗುತ್ತಿವೆ. ಇದು ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ. ಈಗಿನ ನಮ್ಮ ಸರ್ಕಾರ ಹಂತ ಹಂತವಾಗಿ ಈ ಸಮಸ್ಯೆಯನ್ನು ಪರಿಹರಿಸುತ್ತಿದೆ ಎಂದು ಸಚಿವ ಶೆಟ್ಟರ್ ಹೇಳಿದರು.

ಇನ್ನು ಶಿರಡಿನಗರದಲ್ಲಿ 7 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂರು ಲ್ಯಾಬ್‌ಗಳು, 14 ವರ್ಗಕೋಣೆಗಳನ್ನು ಒಳಗೊಂಡಿರುವ ಕಾಲೇಜಿನ ನೂತನ ಕಟ್ಟಡದ ಕಾಮಗಾರಿಯನ್ನು ,15 ತಿಂಗಳಲ್ಲಿ ಪೂರ್ಣಗೊಳಿಸಬೇಕು. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ. ಮಳೆಗಾಲ ಮುಗಿದ ತಕ್ಷಣ ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು ಎಂದರು.Body:H B GaddadConclusion:Etv hubli
Last Updated : Oct 29, 2019, 11:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.