ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಬೇಕೆಂದು ಹಾಗೂ ಕುಲಪತಿ ಈಶ್ವರ ಭಟ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೂರು ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿರುವ ಕಾನೂನು ವಿಶ್ವವಿದ್ಯಾಲಯ, ಸದ್ಯ ಅದೇ ರೀತಿಯಲ್ಲಿ ಐದು ವರ್ಷದ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
3 ವರ್ಷದ ವಿದ್ಯಾರ್ಥಿಗಳ ಪ್ರಮೋಟ್ ಆರ್ಡರ್ ಮೇಲಿರುವ ವಿಶ್ವವಿದ್ಯಾಲಯದ ಅರ್ಜಿ ವಾಪಸ್ ಪಡೆಯುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು, ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ಪ್ರತಿಭಟನೆಗೆ ಮುಂದಾದರು. ಸುಮಾರು ದಿನಗಳಿಂದ ನವನಗರದ ಕಾನೂನು ವಿಶ್ವವಿದ್ಯಾಲಯದ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ.
ಇದನ್ನೂ ಓದಿ: ಎನ್ಐಎಯಿಂದ ದಂತ ವೈದ್ಯೆ ಬಂಧನ ಪ್ರಕರಣ: ಆರೋಪಿ ಕುರಿತು ಸ್ಫೋಟಕ ಮಾಹಿತಿ ಬಹಿರಂಗ!