ETV Bharat / city

ಸ್ಪೀಕರ್​​​​ ರಾಜೀನಾಮೆ ಅಂಗೀಕಾರ ಮಾಡಲಿ, ಆಗ ಅತೃಪ್ತ ಶಾಸಕರಿಗೆ ಬುದ್ಧಿ ಬರುತ್ತೆ: ಹೊರಟ್ಟಿ - undefined

ಗೊತ್ತಿದ್ದರು ಗೊತ್ತಿಲ್ಲದ ಹಾಗೆ ಬಿಜೆಪಿ ನಾಯಕರು ಸುಮ್ಮನಿದ್ದಾರೆ. ತೊಟ್ಟಿಲು ತೂಗುವ ಹಾಗೂ ಕೂಸನ್ನು ಚಿವಟುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ.
author img

By

Published : Jul 8, 2019, 6:00 PM IST

Updated : Jul 8, 2019, 6:07 PM IST

ಹುಬ್ಬಳ್ಳಿ: ರಾಜೀನಾಮೆ ನೀಡಿರುವ ಶಾಸಕರ ರಾಜೀನಾಮೆ ಸ್ಪೀಕರ್ ಅಂಗೀಕಾರ ಮಾಡಬೇಕು. ಆಗಲಾದರೂ ರಾಜೀನಾಮೆ ನೀಡಿ ಹೆದರಿಸುವ ತಂತ್ರ ನಿಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗುವುದಿಲ್ಲ. ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇರೋದು ಸ್ಪಷ್ಟವಾಗಿದೆ. ವಿಮಾನ, ಬಂಗಲೆ ಎಲ್ಲವೂ ಅವರದೇ ಆಗಿವೆ. ಹೀಗಾಗಿ ಮೈತ್ರಿ ಸರ್ಕಾರ ಬೀಳಿಸುವ ತಂತ್ರ ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಈಗ ಸಿಎಂ ಹುದ್ದೆ ಬದಲಾವಣೆ ಮಾಡೋದು ಸರಿಯಲ್ಲ. ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆದರೂ ಸಮಸ್ಯೆ ಬಗೆಹರಿಯುವುದಿಲ್ಲ. ಇದರಲ್ಲಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲ. 10 ಶಾಸಕರ ರಾಜೀನಾಮೆ ಅಂಗೀಕಾರ ಮಾಡಿದರೆ, ಅವರ ಬಣ್ಣ ಬಯಲಾಗುತ್ತದೆ. ಕಿರಿಕಿರಿ ಮಾಡುವವರಿಗೆ ಸರಿಯಾಗಿ ರಾಜೀನಾಮೆ ಪಡೆಯುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅತೃಪ್ತ ಶಾಸಕರ ವಿರುದ್ಧ ಕಿಡಿ‌ಕಾರಿದರು.

ಹುಬ್ಬಳ್ಳಿ: ರಾಜೀನಾಮೆ ನೀಡಿರುವ ಶಾಸಕರ ರಾಜೀನಾಮೆ ಸ್ಪೀಕರ್ ಅಂಗೀಕಾರ ಮಾಡಬೇಕು. ಆಗಲಾದರೂ ರಾಜೀನಾಮೆ ನೀಡಿ ಹೆದರಿಸುವ ತಂತ್ರ ನಿಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗುವುದಿಲ್ಲ. ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇರೋದು ಸ್ಪಷ್ಟವಾಗಿದೆ. ವಿಮಾನ, ಬಂಗಲೆ ಎಲ್ಲವೂ ಅವರದೇ ಆಗಿವೆ. ಹೀಗಾಗಿ ಮೈತ್ರಿ ಸರ್ಕಾರ ಬೀಳಿಸುವ ತಂತ್ರ ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಈಗ ಸಿಎಂ ಹುದ್ದೆ ಬದಲಾವಣೆ ಮಾಡೋದು ಸರಿಯಲ್ಲ. ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆದರೂ ಸಮಸ್ಯೆ ಬಗೆಹರಿಯುವುದಿಲ್ಲ. ಇದರಲ್ಲಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲ. 10 ಶಾಸಕರ ರಾಜೀನಾಮೆ ಅಂಗೀಕಾರ ಮಾಡಿದರೆ, ಅವರ ಬಣ್ಣ ಬಯಲಾಗುತ್ತದೆ. ಕಿರಿಕಿರಿ ಮಾಡುವವರಿಗೆ ಸರಿಯಾಗಿ ರಾಜೀನಾಮೆ ಪಡೆಯುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅತೃಪ್ತ ಶಾಸಕರ ವಿರುದ್ಧ ಕಿಡಿ‌ಕಾರಿದರು.

Intro:ಹುಬ್ಬಳ್ಳಿ-01
ರಾಜೀನಾಮೆ ನೀಡಿರುವ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕಾರ ಮಾಡಬೇಕು. ಆಗಲಾದ್ರೂ ಹೀಗೆ ರಾಜೀನಾಮೆ ನೀಡಿ ಹೆದರಿಸುವ ತಂತ್ರ ನಿಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗುವದಿಲ್ಲ.
ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇರೋದು ಸ್ಪಷ್ಟವಾಗಿದೆ. ಬಿಜೆಪಿ ವಿಮಾನ, ಬಿಜೆಪಿ ಬಂಗಲೆ, ಬಿಜೆಪಿಯವರ ಕೈವಾಡ ಇರುವದಿ ಇದರಿಂದ ಸ್ಪಷ್ಟವಾಗಿದೆ.
ಹೀಗಾಗಿ ಮೈತ್ರಿ ಸರ್ಕಾರ ಕೆಡುವ ತಂತ್ರ ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಗೊತ್ತಿದ್ದರು ಗೊತ್ತಿಲ್ಲದ ಹಾಗೇ ಬಿಜೆಪಿಯವರು ಇದ್ದಾರೆ.ತೊಟ್ಟಿಲು ತೂಗುವ ಹಾಗೂ ಕೂಸನ್ನು ಚಿವಟುವ ಕೆಲಸ ಬಿಜೆಪಿಗರು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇವಾಗ ಸಿಎಂ ಹುದ್ದೆ ಬದಲಾವಣೆ ಮಾಡೋದು ಸರಿಯಲ್ಲ.ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಯಾದರೂ ಸಮಸ್ಯೆ ಬಗೆಹರಿಯುವದಿಲ್ಲ ಎಂದರು. 10 ಶಾಸಕರ ರಾಜೀನಾಮೆ ಅಂಗೀಕಾರ ಮಾಡಿದ್ರೆ ಅವರ ಬಣ್ಣ ಬಯಲಾಗುತ್ತೇ ಎಂದು ಅವರು ಅತೃಪ್ತ ಶಾಸಕರ ವಿರುದ್ಧ ಕಿಡಿ‌ ಕಾರಿದರು.
ಬೈಟ್ - ಬಸವರಾಜ್ ಹೊರಟ್ಟಿ, ಪರಿಷತ್ ಸದಸ್ಯBody:H B GaddadConclusion:Etv hubli
Last Updated : Jul 8, 2019, 6:07 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.