ಧಾರವಾಡ : ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಇಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಮಹಾರಾಷ್ಟ್ರದ ಅಮೋಲ್ ಕಾಳೆ, ಬೆಳಗಾವಿಯ ಪ್ರವೀಣ್ ಚತುರ್ ಎಂಬಿಬ್ಬರು ಆರೋಪಿಗಳನ್ನು ತನಿಖೆಗೊಳಪಡಿಸಿರುವ ಎಸ್ಐಟಿ ಪೊಲೀಸರು, ಧಾರವಾಡದ 3ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಆರೋಪಿಗಳನ್ನು ನಾಳೆಯವರೆಗೂ ಎಸ್ಐಟಿ ವಶದಲ್ಲೇ ಇರುವಂತೆ ಸೂಚಿಸಲಾಗಿತ್ತು. ಆದ್ರೆ, ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.