ETV Bharat / city

2023ರಲ್ಲಿ ಹೊಸ ಶಕ್ತಿಯೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ: ಯತ್ನಾಳ್​

author img

By

Published : Jan 10, 2022, 4:59 PM IST

ಈ ಹಿಂದೆ ಅಟಲ್​ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಂತ್ರಿ ಆಗಿದ್ದಾಗ ಕ್ರಿಯಾಶೀಲ ಸಚಿವ ಎಂಬ ಹೆಗ್ಗಳಿಕೆಯನ್ನು ನೀಡಿ ವಾಜಪೇಯಿ ಅವರೇ ಪತ್ರ ಬರೆದಿದ್ದರು. ಆದರೀಗ ದುರ್ದೈವವಶಾತ್‌​ ಯಾವುದೇ ಸ್ಥಾನಮಾನ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

yatnal
ಯತ್ನಾಳ್

ಧಾರವಾಡ: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆ ಒಳ್ಳೆಯ ದಿನಗಳು ಬರಲಿವೆ. ನಾನಂತೂ ಯಾವುದೇ ಅಪೇಕ್ಷೆ ಇಟ್ಟುಕೊಂಡಿಲ್ಲ. ನಾನು ಹೇಳಿದ್ದು ಒಮ್ಮೊಮ್ಮೆ ನಿಜವಾಗುತ್ತದೆ. ನಾನೇನು ರಾಜಕೀಯ ಜ್ಯೋತಿಷಿ ಅಲ್ಲ ಎಂದರು.

ಯತ್ನಾಳರಿಗೆ ಸಿಎಂ ಸ್ಥಾನದ ಬಗ್ಗೆ ಸ್ವಾಮೀಜಿಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಅಟಲ್​ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಂತ್ರಿ ಆಗಿದ್ದಾಗ ಕ್ರಿಯಾಶೀಲ ಸಚಿವ ಎಂಬ ಹೆಗ್ಗಳಿಕೆಯನ್ನು ನೀಡಿ ವಾಜಪೇಯಿ ಅವರೇ ಪತ್ರ ಬರೆದಿದ್ದರು. ಆದರೀಗ ದುರ್ದೈವವಶಾತ್​ ಯಾವುದೇ ಸ್ಥಾನಮಾನ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

'ಡಿಕೆಶಿ ಓಲಾಡಿದ್ದು ದೊಡ್ಡ ಸುದ್ದಿಯಾಗಲೇ ಇಲ್ಲ'

ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಓಲಾಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ವಿಶೇಷ ಕಾರ್ಯಕ್ರಮ ಮಾಡಲೇ ಇಲ್ಲ. ನಾವು ಸುಮ್ಮನೆ ಎಡವಿದರೂ ಯತ್ನಾಳ್​ ಕುಡಿದು ತೂರಾಡಿದರು ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಚಟಾಕಿ ಹಾರಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 31 ಮಂದಿ ವಿರುದ್ಧ ಎಫ್​ಐಆರ್​ ದಾಖಲು

ಧಾರವಾಡ: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆ ಒಳ್ಳೆಯ ದಿನಗಳು ಬರಲಿವೆ. ನಾನಂತೂ ಯಾವುದೇ ಅಪೇಕ್ಷೆ ಇಟ್ಟುಕೊಂಡಿಲ್ಲ. ನಾನು ಹೇಳಿದ್ದು ಒಮ್ಮೊಮ್ಮೆ ನಿಜವಾಗುತ್ತದೆ. ನಾನೇನು ರಾಜಕೀಯ ಜ್ಯೋತಿಷಿ ಅಲ್ಲ ಎಂದರು.

ಯತ್ನಾಳರಿಗೆ ಸಿಎಂ ಸ್ಥಾನದ ಬಗ್ಗೆ ಸ್ವಾಮೀಜಿಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಅಟಲ್​ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಂತ್ರಿ ಆಗಿದ್ದಾಗ ಕ್ರಿಯಾಶೀಲ ಸಚಿವ ಎಂಬ ಹೆಗ್ಗಳಿಕೆಯನ್ನು ನೀಡಿ ವಾಜಪೇಯಿ ಅವರೇ ಪತ್ರ ಬರೆದಿದ್ದರು. ಆದರೀಗ ದುರ್ದೈವವಶಾತ್​ ಯಾವುದೇ ಸ್ಥಾನಮಾನ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

'ಡಿಕೆಶಿ ಓಲಾಡಿದ್ದು ದೊಡ್ಡ ಸುದ್ದಿಯಾಗಲೇ ಇಲ್ಲ'

ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಓಲಾಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ವಿಶೇಷ ಕಾರ್ಯಕ್ರಮ ಮಾಡಲೇ ಇಲ್ಲ. ನಾವು ಸುಮ್ಮನೆ ಎಡವಿದರೂ ಯತ್ನಾಳ್​ ಕುಡಿದು ತೂರಾಡಿದರು ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಚಟಾಕಿ ಹಾರಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 31 ಮಂದಿ ವಿರುದ್ಧ ಎಫ್​ಐಆರ್​ ದಾಖಲು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.