ETV Bharat / city

ಮುಂಜಾಗ್ರತಾ ಕ್ರಮಗಳೊಂದಿಗೆ ಸಂಸತ್​​ ಮುಂಗಾರು ಅಧಿವೇಶನ ನಡೆಯುತ್ತದೆ: ಪ್ರಹ್ಲಾದ್ ಜೋಶಿ

ಸಂಸತ್​ನ ಮುಂಗಾರು ಅಧಿವೇಶನ ಖಂಡಿತವಾಗಿಯೂ ನಡೆಯಲಿದೆ. ಇದಕ್ಕಾಗಿ ಸರ್ಕಾರವು ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್​ ಜೋಶಿ ತಿಳಿಸಿದ್ದಾರೆ.

author img

By

Published : Jul 12, 2020, 12:45 PM IST

Prahlad Joshi
ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೋವಿಡ್​-19 ಪರಿಣಾಮ ಎಲ್ಲಾ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಂಸತ್​ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಸಂಸತ್​ ಮುಂಗಾರು ಅಧಿವೇಶನ ಖಂಡಿತವಾಗಿಯೂ ನಡೆಯಲಿದೆ. ಸರ್ಕಾರವು ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಜೂನ್ 1ರಂದು ರಾಜ್ಯಸಭಾ ಸ್ಪೀಕರ್​ ಎಂ.ವೆಂಕಯ್ಯ ನಾಯ್ಡು ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ಸಂಸತ್​​ ಮುಂಗಾರು ಅಧಿವೇಶನವನ್ನು ನಡೆಸುವ ಬಗ್ಗೆ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ನಡೆದ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ 15 ಮತ್ತು ರಾಜ್ಯಸಭೆ 13 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಕೊರೊನಾ ವೈರಸ್ ಹರಡುವ ಭೀತಿಯಿಂದ ಅಧಿವೇಶನದ ಎರಡನೇ ಭಾಗವನ್ನು ಮೊಟಕುಗೊಳಿಸಲಾಗಿತ್ತು.

ಹುಬ್ಬಳ್ಳಿ: ಕೋವಿಡ್​-19 ಪರಿಣಾಮ ಎಲ್ಲಾ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಂಸತ್​ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಸಂಸತ್​ ಮುಂಗಾರು ಅಧಿವೇಶನ ಖಂಡಿತವಾಗಿಯೂ ನಡೆಯಲಿದೆ. ಸರ್ಕಾರವು ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಜೂನ್ 1ರಂದು ರಾಜ್ಯಸಭಾ ಸ್ಪೀಕರ್​ ಎಂ.ವೆಂಕಯ್ಯ ನಾಯ್ಡು ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ಸಂಸತ್​​ ಮುಂಗಾರು ಅಧಿವೇಶನವನ್ನು ನಡೆಸುವ ಬಗ್ಗೆ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ನಡೆದ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ 15 ಮತ್ತು ರಾಜ್ಯಸಭೆ 13 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಕೊರೊನಾ ವೈರಸ್ ಹರಡುವ ಭೀತಿಯಿಂದ ಅಧಿವೇಶನದ ಎರಡನೇ ಭಾಗವನ್ನು ಮೊಟಕುಗೊಳಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.