ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಧರಣಿಯಲ್ಲಿ ಭಾಗವಹಿಸಿದ್ದ ವ್ಯಕ್ತಿವೋರ್ವ ತೀವ್ರ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.
ಧಾರವಾಡದ ನೀಮ್ ಟ್ರೀ ಗಾರ್ಡನ್ ನಿವಾಸಿ ಸೈಫುಲ್ಲಾ ಸಾಹುಕಾರ (45) ಸಾವನ್ನಪ್ಪಿರುವ ವ್ಯಕ್ತಿ. ಕಳೆದ 9 ದಿನಗಳಿಂದ ಸರದಿ ಪ್ರಕಾರ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ನಗರದ ಖೂಬಾ ಮಸೀದಿಯಿಂದ ಸೈಫುಲ್ಲಾ ಪ್ರತಿಭಟನೆಗೆ ಆಗಮಿಸಿದ್ದರು. ಪ್ರತಿಭಟನೆಗೆ ಕುಳಿತಾಗ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸೈಫುಲ್ಲಾ ಮೃತಪಟ್ಟಿದ್ದಾರೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನೆಡೆದಿದೆ.