ETV Bharat / city

'ಯುವರತ್ನ' ಪ್ರಚಾರಕ್ಕಾಗಿ ನಾಳೆ ಹುಬ್ಬಳ್ಳಿಗೆ ಪುನೀತ್ ರಾಜಕುಮಾರ್ ಭೇಟಿ

author img

By

Published : Mar 20, 2021, 1:24 PM IST

'ಯುವರತ್ನ' ಸಿನಿಮಾದ ಪ್ರಚಾರಕ್ಕಾಗಿ ನಾಳೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದು, ರೋಡ್ ಶೋ ನಡೆಸಲಿದ್ದಾರೆ.

ಪುನೀತ್ ರಾಜಕುಮಾರ್
ಪುನೀತ್ ರಾಜಕುಮಾರ್

ಹುಬ್ಬಳ್ಳಿ: 'ಯುವರತ್ನ' ಚಲನಚಿತ್ರದ ಪ್ರಚಾರಕ್ಕಾಗಿ ನಟ ಪುನೀತ್ ರಾಜಕುಮಾರ್​ ಅವರು ಮಾರ್ಚ್​ 21 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಯುವ ಸಂಭ್ರಮ ಪೋಸ್ಟರ್​
ಯುವ ಸಂಭ್ರಮ ಪೋಸ್ಟರ್​

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ನಗರದ ವಿವಿಧ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ. ನಂತರ ನಗರದ ಅರ್ಬನ್ ಓಯಾಸಿಸ್ ಮಾಲ್​ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲಿ ನೆರೆದಿರುವ ಅಭಿಮಾನಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಖಳನಟ ರವಿಶಂಕರ್, ಧನಂಜಯ, ನಿರ್ಮಾಪಕ ಕಿರಗಂದೂರು ಹಾಗೂ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ.

ಹುಬ್ಬಳ್ಳಿ: 'ಯುವರತ್ನ' ಚಲನಚಿತ್ರದ ಪ್ರಚಾರಕ್ಕಾಗಿ ನಟ ಪುನೀತ್ ರಾಜಕುಮಾರ್​ ಅವರು ಮಾರ್ಚ್​ 21 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಯುವ ಸಂಭ್ರಮ ಪೋಸ್ಟರ್​
ಯುವ ಸಂಭ್ರಮ ಪೋಸ್ಟರ್​

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ನಗರದ ವಿವಿಧ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ. ನಂತರ ನಗರದ ಅರ್ಬನ್ ಓಯಾಸಿಸ್ ಮಾಲ್​ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲಿ ನೆರೆದಿರುವ ಅಭಿಮಾನಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಖಳನಟ ರವಿಶಂಕರ್, ಧನಂಜಯ, ನಿರ್ಮಾಪಕ ಕಿರಗಂದೂರು ಹಾಗೂ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.