ಧಾರವಾಡ: ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾರಾಮಾರಿ ಘಟನೆ ಮಾಸುವ ಮುನ್ನವೇ ಕರ್ನಾಟಕ ಕಾಲೇಜಿನ ಮುಂಭಾಗದಲ್ಲಿರುವ ಗಾರ್ಡನ್ನಲ್ಲಿ ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವಕರ ಬೀದಿ ಕಾಳಗ ಮುಂದುವರಿದಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಹೊಡೆದಾಟ ನಡೆಯುತ್ತಿದ್ದ ವೇಳೆ ಮಾಧ್ಯಮದ ಕ್ಯಾಮೆರಾ ನೋಡಿದ ಯುವಕರು ಓಡಿ ಹೋಗಿದ್ದಾರೆ. ಸದ್ಯ ಧಾರವಾಡದಲ್ಲಿ ಪುಂಡ ರೌಡಿಗಳ ಹಾವಳಿ ಹೆಚ್ಚಾಯ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದನ್ನ ಕಾದು ನೋಡಬೇಕಿದೆ.
ಇದನ್ನೂ ಓದಿ: ಚಾಮರಾಜನಗರ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ