ETV Bharat / city

ಹುಬ್ಬಳ್ಳಿ: ಚೀಟಿ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ.. ಆರೋಪಿ ಅಂದರ್​​

author img

By

Published : Jan 29, 2022, 3:48 PM IST

ಚೀಟಿ (ಬಿ ಸಿ) ವ್ಯವಹಾರದಲ್ಲಿ ಲಕ್ಷಾಂತರ ರೂ. ಹಣ ಸಂಗ್ರಹಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗೋಕುಲ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Ramesh Nagaloti arrested under fraud case at Hubli
ವಂಚನೆ ಆರೋಪದಡಿ ರಮೇಶ ನಾಗಲೋಟಿ ಬಂಧನ

ಹುಬ್ಬಳ್ಳಿ (ಧಾರವಾಡ): ಚೀಟಿ (ಬಿ ಸಿ) ವ್ಯವಹಾರದಲ್ಲಿ ಸುಮಾರು 20 ಲಕ್ಷ ರೂ. ಹಣ ಸಂಗ್ರಹಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಮೂಲದ ಹಾಲಿ ಗೋಕುಲರಸ್ತೆಯ ರಾಮಲಿಂಗೇಶ್ವರನ ನಗರದ ನಿವಾಸಿ ರಮೇಶ ನಾಗಲೋಟಿ ಆರೋಪಿ.

ಈತ ರಾಮಲಿಂಗೇಶ್ವರ ನಗರದ ಸ್ಲಂ ನಿವಾಸಿಗಳ ಬಳಿ ತಲಾ 2 ಸಾವಿರ ರೂ.ಗಳ ಚೀಟಿ (ಬಿ.ಸಿ) ಮಾಡಿಸಿಕೊಂಡು ಹೆಚ್ಚಿನ ಲಾಭ ಮಾಡುತ್ತೇನೆ ಎಂದು ನಂಬಿಸಿ ಸುಮಾರು 15 ರಿಂದ 20 ಲಕ್ಷ ರೂ. ಹಣವನ್ನು ಸಂಗ್ರಹಿಸಿಕೊಂಡು ಪರಾರಿಯಾಗಿದ್ದನು. ಅಲ್ಲದೇ ಈ ಕುರಿತು ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ರಮೇಶ ನಾಗಲೋಟಿ ವಿರುದ್ಧ ಮೋಸ ಹೋದವರ ಪ್ರತಿಭಟನೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಶುಕ್ರವಾರ ಅಕ್ಷಯ ಪಾರ್ಕ್​​ನಲ್ಲಿ ಓಡಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಗೋಕುಲ ರೋಡ್​ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ : ಬ್ಯಾಂಕ್ ಸಿಬ್ಬಂದಿ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂ.ವಂಚನೆ

ಚಿಟಿ ವ್ಯವಹಾರದಲ್ಲಿ ವಂಚಿಸಿದ ವ್ಯಕ್ತಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಹಣ ಕಳೆದುಕೊಂಡ ನೂರಾರು ಸಾರ್ವಜನಿಕರು ಪೊಲೀಸ್ ಠಾಣೆಗೆ ದೌಡಾಯಿಸಿದ್ದರು. ಅಲ್ಲದೇ ಕೆಲಕಾಲ ಮೋಸ‌ ಮಾಡಿದ ಆರೋಪಿಯ ವಿರುದ್ಧ ಪ್ರತಿಭಟನೆ ಮಾಡಿದರು. ಈ ಕುರಿತು ಗೋಕುಲ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹುಬ್ಬಳ್ಳಿ (ಧಾರವಾಡ): ಚೀಟಿ (ಬಿ ಸಿ) ವ್ಯವಹಾರದಲ್ಲಿ ಸುಮಾರು 20 ಲಕ್ಷ ರೂ. ಹಣ ಸಂಗ್ರಹಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಮೂಲದ ಹಾಲಿ ಗೋಕುಲರಸ್ತೆಯ ರಾಮಲಿಂಗೇಶ್ವರನ ನಗರದ ನಿವಾಸಿ ರಮೇಶ ನಾಗಲೋಟಿ ಆರೋಪಿ.

ಈತ ರಾಮಲಿಂಗೇಶ್ವರ ನಗರದ ಸ್ಲಂ ನಿವಾಸಿಗಳ ಬಳಿ ತಲಾ 2 ಸಾವಿರ ರೂ.ಗಳ ಚೀಟಿ (ಬಿ.ಸಿ) ಮಾಡಿಸಿಕೊಂಡು ಹೆಚ್ಚಿನ ಲಾಭ ಮಾಡುತ್ತೇನೆ ಎಂದು ನಂಬಿಸಿ ಸುಮಾರು 15 ರಿಂದ 20 ಲಕ್ಷ ರೂ. ಹಣವನ್ನು ಸಂಗ್ರಹಿಸಿಕೊಂಡು ಪರಾರಿಯಾಗಿದ್ದನು. ಅಲ್ಲದೇ ಈ ಕುರಿತು ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ರಮೇಶ ನಾಗಲೋಟಿ ವಿರುದ್ಧ ಮೋಸ ಹೋದವರ ಪ್ರತಿಭಟನೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಶುಕ್ರವಾರ ಅಕ್ಷಯ ಪಾರ್ಕ್​​ನಲ್ಲಿ ಓಡಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಗೋಕುಲ ರೋಡ್​ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ : ಬ್ಯಾಂಕ್ ಸಿಬ್ಬಂದಿ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂ.ವಂಚನೆ

ಚಿಟಿ ವ್ಯವಹಾರದಲ್ಲಿ ವಂಚಿಸಿದ ವ್ಯಕ್ತಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಹಣ ಕಳೆದುಕೊಂಡ ನೂರಾರು ಸಾರ್ವಜನಿಕರು ಪೊಲೀಸ್ ಠಾಣೆಗೆ ದೌಡಾಯಿಸಿದ್ದರು. ಅಲ್ಲದೇ ಕೆಲಕಾಲ ಮೋಸ‌ ಮಾಡಿದ ಆರೋಪಿಯ ವಿರುದ್ಧ ಪ್ರತಿಭಟನೆ ಮಾಡಿದರು. ಈ ಕುರಿತು ಗೋಕುಲ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.