ETV Bharat / city

ಹುಬ್ಬಳ್ಳಿ: ಸ್ವಚ್ಛ ಭಾರತ ಕನಸು ಕಂಡ ಮಹಾತ್ಮನ ಪುತ್ಥಳಿಗಿಲ್ಲ ದುರಸ್ತಿ ಭಾಗ್ಯ

author img

By

Published : Sep 30, 2020, 11:33 AM IST

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಎದುರಿನ ಮಹಾತ್ಮ ಗಾಂಧಿ ಪುತ್ಥಳಿ ತುಕ್ಕು ‌ಹಿಡಿಯುತ್ತಿದೆ. ಸರಿಯಾದ ಬಣ್ಣದ ಲೇಪನ ಮಾಡಿಲ್ಲ. ಮಹಾನಗರ ಪಾಲಿಕೆ ಕೆಲಸವನ್ನು ಕೈಗೆತ್ತಿಕೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Rust in Mahatma Gandhi  Statue
ತುಕ್ಕು ‌ಹಿಡಿಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆ..

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಎದುರಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯು ಅವ್ಯವಸ್ಥೆಯಿಂದ ಕೂಡಿದೆ‌.

ತುಕ್ಕು ‌ಹಿಡಿಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆ: ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಎದುರು ಇರುವ ಮಹಾತ್ಮ ಗಾಂಧಿ ಪುತ್ಥಳಿ ತುಕ್ಕು ‌ಹಿಡಿಯುತ್ತಿದೆ. ಸರಿಯಾದ ಬಣ್ಣದ ಲೇಪನ ಮಾಡಿಲ್ಲ. ಮಹಾನಗರ ಪಾಲಿಕೆ ಕೆಲಸವನ್ನು ಕೈಗೆತ್ತಿಕೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪುತ್ಥಳಿಯ ಕಟ್ಟೆ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಪುತ್ಥಳಿ ಆವರಣ ಕೂಡ ಸ್ವಚ್ಛತೆಯಿಂದ ವಂಚಿತವಾಗಿದೆ. ಎಲ್ಲೆಂದರಲ್ಲಿ ಕಸ ಬಿದ್ದಿರುವುದು ಮಹಾನಗರ ಪಾಲಿಕೆಯ ಕಾರ್ಯವೈಖರಿಯನ್ನು ಅಣಕಿಸುವಂತಿದೆ.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛ ಭಾರತ ಕನಸನ್ನು ಕಂಡಿರುವ ಮಹಾತ್ಮನ ಪುತ್ಥಳಿಯ ಆವರಣದಲ್ಲಿಯೇ ಸ್ವಚ್ಛತೆ ಗಗನ ಕುಸುಮವಾಗಿದೆ. ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಅವ್ಯವಸ್ಥೆ ಸರಿಪಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಎದುರಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯು ಅವ್ಯವಸ್ಥೆಯಿಂದ ಕೂಡಿದೆ‌.

ತುಕ್ಕು ‌ಹಿಡಿಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆ: ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಎದುರು ಇರುವ ಮಹಾತ್ಮ ಗಾಂಧಿ ಪುತ್ಥಳಿ ತುಕ್ಕು ‌ಹಿಡಿಯುತ್ತಿದೆ. ಸರಿಯಾದ ಬಣ್ಣದ ಲೇಪನ ಮಾಡಿಲ್ಲ. ಮಹಾನಗರ ಪಾಲಿಕೆ ಕೆಲಸವನ್ನು ಕೈಗೆತ್ತಿಕೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪುತ್ಥಳಿಯ ಕಟ್ಟೆ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಪುತ್ಥಳಿ ಆವರಣ ಕೂಡ ಸ್ವಚ್ಛತೆಯಿಂದ ವಂಚಿತವಾಗಿದೆ. ಎಲ್ಲೆಂದರಲ್ಲಿ ಕಸ ಬಿದ್ದಿರುವುದು ಮಹಾನಗರ ಪಾಲಿಕೆಯ ಕಾರ್ಯವೈಖರಿಯನ್ನು ಅಣಕಿಸುವಂತಿದೆ.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛ ಭಾರತ ಕನಸನ್ನು ಕಂಡಿರುವ ಮಹಾತ್ಮನ ಪುತ್ಥಳಿಯ ಆವರಣದಲ್ಲಿಯೇ ಸ್ವಚ್ಛತೆ ಗಗನ ಕುಸುಮವಾಗಿದೆ. ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಅವ್ಯವಸ್ಥೆ ಸರಿಪಡಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.