ETV Bharat / city

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ

author img

By

Published : Mar 31, 2022, 12:30 PM IST

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಹುಬ್ಬಳ್ಳಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ‌. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ನಗರದ ನಿವಾಸಿ ಕಿಶೋರ ಬೊಮ್ಮಾಜಿ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ.

ಹುಬ್ಬಳ್ಳಿ ಕೋರ್ಟ್
ಹುಬ್ಬಳ್ಳಿ ಕೋರ್ಟ್

ಹುಬ್ಬಳ್ಳಿ: ಪತ್ನಿಯ ಶೀಲ ಶಂಕಿಸಿ 2019 ರಲ್ಲಿ ಕೊಲೆ ಮಾಡಿದ್ದ ಅಪರಾಧಿ ಪತಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗದಗ ರಸ್ತೆ ಚಾಲುಕ್ಯ ನಗರದ ನಿವಾಸಿ ಕಿಶೋರ ಬೊಮ್ಮಾಜಿ ಶಿಕ್ಷೆಗೀಡಾದ ಅಪರಾಧಿ.

ಕಿಶೋರ 2011ರಲ್ಲಿ ಆಂಧ್ರಪ್ರದೇಶ ಗುಂಟೂರು ಮೂಲದ ಲವೀನಾರನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಹೆಂಡತಿ ಶೀಲ ಶಂಕಿಸಿ ಕಿಶೋರ ಆಗಾಗ ಜಗಳವಾಡುತ್ತಿದ್ದ. ತಂದೆ- ತಾಯಿ ಜತೆ ಮಾತನಾಡಲೆಂದು ಪರಿಚಯಸ್ಥರೊಬ್ಬರಿಂದ ಲವೀನಾ ಮೊಬೈಲ್ ಫೋನ್ ಪಡೆದಿದ್ದಳು. ಇದರಿಂದ ಮತ್ತಷ್ಟು ಸಂಶಯಪಟ್ಟು ಜಗಳ ತೆಗೆದಿದ್ದ. 2018ರ ಮಾ.23 ರಂದು ಕುತ್ತಿಗೆಗೆ ವೈರ್‌ನಿಂದ ಬಿಗಿದು ಕೊಲೆ ಮಾಡಿದ್ದ. ನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ್ದ.

ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್​ಪೆಕ್ಟರ್ ಬಿ.ಆರ್.ಗಡ್ಡೇಕರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ಅವರು ಅಪರಾಧಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. 40,000 ರೂ.ಗಳನ್ನು ಮೃತಳ ಮಗಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಗಿರಿಜಾ ತಮ್ಮಿನಾಳ ವಾದ ಮಂಡಿಸಿದ್ದರು.

ಇದನ್ನೂ ಓದಿ: ದೆಹಲಿ ಸಿಎಂ ಕ್ಷಮೆ ಕೇಳಬೇಕು..ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಕೆ: ತೇಜಸ್ವಿ ಸೂರ್ಯ

ಹುಬ್ಬಳ್ಳಿ: ಪತ್ನಿಯ ಶೀಲ ಶಂಕಿಸಿ 2019 ರಲ್ಲಿ ಕೊಲೆ ಮಾಡಿದ್ದ ಅಪರಾಧಿ ಪತಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗದಗ ರಸ್ತೆ ಚಾಲುಕ್ಯ ನಗರದ ನಿವಾಸಿ ಕಿಶೋರ ಬೊಮ್ಮಾಜಿ ಶಿಕ್ಷೆಗೀಡಾದ ಅಪರಾಧಿ.

ಕಿಶೋರ 2011ರಲ್ಲಿ ಆಂಧ್ರಪ್ರದೇಶ ಗುಂಟೂರು ಮೂಲದ ಲವೀನಾರನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಹೆಂಡತಿ ಶೀಲ ಶಂಕಿಸಿ ಕಿಶೋರ ಆಗಾಗ ಜಗಳವಾಡುತ್ತಿದ್ದ. ತಂದೆ- ತಾಯಿ ಜತೆ ಮಾತನಾಡಲೆಂದು ಪರಿಚಯಸ್ಥರೊಬ್ಬರಿಂದ ಲವೀನಾ ಮೊಬೈಲ್ ಫೋನ್ ಪಡೆದಿದ್ದಳು. ಇದರಿಂದ ಮತ್ತಷ್ಟು ಸಂಶಯಪಟ್ಟು ಜಗಳ ತೆಗೆದಿದ್ದ. 2018ರ ಮಾ.23 ರಂದು ಕುತ್ತಿಗೆಗೆ ವೈರ್‌ನಿಂದ ಬಿಗಿದು ಕೊಲೆ ಮಾಡಿದ್ದ. ನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ್ದ.

ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್​ಪೆಕ್ಟರ್ ಬಿ.ಆರ್.ಗಡ್ಡೇಕರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ಅವರು ಅಪರಾಧಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. 40,000 ರೂ.ಗಳನ್ನು ಮೃತಳ ಮಗಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಗಿರಿಜಾ ತಮ್ಮಿನಾಳ ವಾದ ಮಂಡಿಸಿದ್ದರು.

ಇದನ್ನೂ ಓದಿ: ದೆಹಲಿ ಸಿಎಂ ಕ್ಷಮೆ ಕೇಳಬೇಕು..ಇಲ್ಲದಿದ್ದರೆ ಪ್ರತಿಭಟನೆ ಮುಂದುವರಿಕೆ: ತೇಜಸ್ವಿ ಸೂರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.