ಹುಬ್ಬಳ್ಳಿ: ಎಸಿಬಿ ಹಾಗೂ ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ವಾಗ್ದಾಳಿ ನಡೆಸಿದರು.
ಐದು ವರ್ಷ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರು ಯಾಕೆ ಎಸಿಬಿ ರದ್ದು ಮಾಡಲಿಲ್ಲ. ಈಗ ಎಸಿಬಿ ವಿಫಲತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಬಗ್ಗೆ ನರೇಂದ್ರ ಮೋದಿಯವರ ಬಗ್ಗೆ ಅವರಿಗೆ ಯಾವ ವಿಷಯ ಸಿಗುತ್ತಿಲ್ಲ ಹೀಗಾಗಿ ಕುಂಟು ನೆಪ ಹೇಳುವ ಮೂಲಕ ಎಸಿಬಿ ರದ್ದುಪಡಿಸಲು ಹೇಳುತ್ತಿದ್ದಾರೆ ಎಂದು ಶೆಟ್ಟರ್ ಕಿಡಿಕಾರಿದರು.