ETV Bharat / city

ಯೋಗೀಶಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ: ಸಹೋದರ ಗುರುನಾಥಗೌಡ ಸಂತಸ

author img

By

Published : Sep 6, 2019, 11:53 PM IST

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದಕ್ಕೆ ಸಹೋದರ ಗುರುನಾಥಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

The state government in charge of the Yogeshgowda murder case is the CBI

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಯೋಗೇಶ್​ಗೌಡರ ಸಹೋದರ ಗುರುನಾಥಗೌಡ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ನಮ್ಮ ನಿರಂತರ ಹೋರಾಟದಿಂದ ನ್ಯಾಯ ಸಿಗುವ ಭರವಸೆ ಇದೆ. ಬಿಜೆಪಿ ಸರ್ಕಾರ ಬಂದ ತಿಂಗಳೊಳಗೆ ಸಿಬಿಐಗೆ ವಹಿಸುವಂತೆ ತಿಳಿಸಿದ್ದರು. ಅದರಂತೆ ಸಹೋದರನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿದ ಬಿಜೆಪಿ ನಾಯಕರಿಗೆ ದೂರವಾಣಿ ಮೂಲಕ ಗರುನಾಥಗೌಡ ಧನ್ಯವಾದ ತಿಳಿಸಿದ್ದಾರೆ.

ಶುಕ್ರವಾರ ನಡೆದ ಸರ್ಕಾರದ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನಿಸಿರುವುದನ್ನು ಮಾಧ್ಯಮದ ‌ಮೂಲಕ ತಿಳಿದುಕೊಂಡಿದ್ದೇನೆ. ಮೂರು ವರ್ಷಗಳ ಹಿಂದೆ ಧಾರವಾಡದ ಸಪ್ತಾಪುರ ಜಿಮ್​​ನಲ್ಲಿ ಯೋಗೀಶಗೌಡ ಕೊಲೆ ನಡೆದಿತ್ತು. ಕೊಲೆಯ ಹಿಂದೆ ಮಾಜಿ ಸಚಿವ ವಿನಯ್​ ಕುಲಕರ್ಣಿ ಕೈವಾಡದ ಆರೋಪ ಕೇಳಿ ಬಂದಿತ್ತು. ವಿನಯ ಕುಲಕರ್ಣಿ ವಿರುದ್ಧ ಆರೋಪ ಮಾಡಿ ಗುರುನಾಥ ಗೌಡ ಹಾಗೂ ತಾಯಿ ತುಂಗಮ್ಮ ಗೌಡರ ಕೋರ್ಟ್ ಮೆಟ್ಟಿಲೇರಿದ್ದರು.

ಯೊಗೇಶಗೌಡನ ಸಹೋದರ ಮತ್ತು ತಾಯಿ ತುಂಗಮ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಸದ್ಯ ತನಿಖೆ ನಡೆಸುವಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ವಿಧಾನಸಭಾ ಚುನಾವಣೆಯ ವೇಳೆ ಯೊಗೇಶ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಧಾರವಾಡಕ್ಕೆ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ಬಹಿರಂಗ ಭರವಸೆ ನೀಡಿದ್ದರು.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಯೋಗೇಶ್​ಗೌಡರ ಸಹೋದರ ಗುರುನಾಥಗೌಡ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ನಮ್ಮ ನಿರಂತರ ಹೋರಾಟದಿಂದ ನ್ಯಾಯ ಸಿಗುವ ಭರವಸೆ ಇದೆ. ಬಿಜೆಪಿ ಸರ್ಕಾರ ಬಂದ ತಿಂಗಳೊಳಗೆ ಸಿಬಿಐಗೆ ವಹಿಸುವಂತೆ ತಿಳಿಸಿದ್ದರು. ಅದರಂತೆ ಸಹೋದರನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿದ ಬಿಜೆಪಿ ನಾಯಕರಿಗೆ ದೂರವಾಣಿ ಮೂಲಕ ಗರುನಾಥಗೌಡ ಧನ್ಯವಾದ ತಿಳಿಸಿದ್ದಾರೆ.

ಶುಕ್ರವಾರ ನಡೆದ ಸರ್ಕಾರದ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನಿಸಿರುವುದನ್ನು ಮಾಧ್ಯಮದ ‌ಮೂಲಕ ತಿಳಿದುಕೊಂಡಿದ್ದೇನೆ. ಮೂರು ವರ್ಷಗಳ ಹಿಂದೆ ಧಾರವಾಡದ ಸಪ್ತಾಪುರ ಜಿಮ್​​ನಲ್ಲಿ ಯೋಗೀಶಗೌಡ ಕೊಲೆ ನಡೆದಿತ್ತು. ಕೊಲೆಯ ಹಿಂದೆ ಮಾಜಿ ಸಚಿವ ವಿನಯ್​ ಕುಲಕರ್ಣಿ ಕೈವಾಡದ ಆರೋಪ ಕೇಳಿ ಬಂದಿತ್ತು. ವಿನಯ ಕುಲಕರ್ಣಿ ವಿರುದ್ಧ ಆರೋಪ ಮಾಡಿ ಗುರುನಾಥ ಗೌಡ ಹಾಗೂ ತಾಯಿ ತುಂಗಮ್ಮ ಗೌಡರ ಕೋರ್ಟ್ ಮೆಟ್ಟಿಲೇರಿದ್ದರು.

ಯೊಗೇಶಗೌಡನ ಸಹೋದರ ಮತ್ತು ತಾಯಿ ತುಂಗಮ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಸದ್ಯ ತನಿಖೆ ನಡೆಸುವಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ವಿಧಾನಸಭಾ ಚುನಾವಣೆಯ ವೇಳೆ ಯೊಗೇಶ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಧಾರವಾಡಕ್ಕೆ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ಬಹಿರಂಗ ಭರವಸೆ ನೀಡಿದ್ದರು.

Intro:ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೃತ ‌ಯೋಗೀಶಗೌಡ ಗೌಡರ ಸಹೋದರ ಗುರುನಾಥ ಗೌಡ ಗೌಡರ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ನಮ್ಮ ನಿರಂತರ ಹೋರಾಟದಿಂದ ನ್ಯಾಯ ಸಿಗುವ ಭರವಸೆ ಇದೆ. ಬಿಜೆಪಿ ಸರ್ಕಾರ ಬಂದ ಒಂದು ಒಂದು ತಿಂಗಳೊಳಗೆ ಸಿಬಿಐಗೆ ವಹಿಸುವಂತೆ ತಿಳಿಸಿದ್ದರು. ಆ ಪ್ರಕಾರ ರಾಜ್ಯ ಸರ್ಕಾರ ಯೋಗೀಶಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಬಿಜೆಪಿ ನಾಯಕರಿಗೆ ಧನ್ಯವಾದ ಎಂದು ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದಾರೆ.

ಇಂದು‌ ನಡೆದ ಸರ್ಕಾರದ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ಮಾಡಿ ತೀರ್ಮಾನಿಸಿರುವುದನ್ನು ಮಾಧ್ಯಮದ ‌ಮೂಲಕ ತಿಳಿದುಕೊಂಡಿದ್ದೇನೆ. ನಿರಂತರ ಹೋರಾಟಕ್ಕೆ ನ್ಯಾಯ ಸಿಗುವ ಲಕ್ಷಣಗಳು ಕಾಣುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಧಾರವಾಡದ ಸಪ್ತಾಪುರ ಜಿಮ್ ನಲ್ಲಿ ಯೋಗೀಶಗೌಡ ಕೊಲೆ ನಡೆದಿತ್ತು. ಕೊಲೆಯ ಹಿಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಕೈವಾಡದ ಆರೋಪ ಕೇಳಿ ಬಂದಿತ್ತು. ವಿನಯ ಕುಲಕರ್ಣಿ ಮೇಲೆ ಆರೋಪ ಮಾಡಿ ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ್ ಹಾಗೂ ತುಂಗಮ್ಮ ಗೌಡರ ಕೋರ್ಟ್ ಮೆಟ್ಟಿಲೆರಿದ್ದರು.

ಮೃತ ಯೊಗೇಶಗೌಡ್ ಸಹೊದರ ಮತ್ತು ತಾಯಿ ತುಂಗಮ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಮಾಡಿತ್ತು. ಸದ್ಯ ತನಿಖೆ ನಡೆಸುವಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ.Body:ವಿಧಾನಸಭಾ ಚುನಾವಣೆಯ ವೇಳೆ ಯೊಗೇಶ ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಧಾರವಾಡಕ್ಕೆ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ಬಹಿರಂಗ ಭಾಷಣದಲ್ಲಿ ಮಾತನಾಡಿದ್ದರು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ್ ಧನ್ಯವಾದ ತಿಳಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.