ETV Bharat / city

ಕಾಂಗ್ರೆಸ್​​ನಲ್ಲಿ ಕಾರ್ಯಕರ್ತರೇ ಇಲ್ಲ, ಅದು​ ನಾಯಕರಿಂದ ತುಂಬಿರುವ ಪಕ್ಷ: ಸಚಿವ ಶೆಟ್ಟರ್​​​

author img

By

Published : Jun 23, 2020, 3:47 PM IST

ಕಾಂಗ್ರೆಸ್​ನಲ್ಲಿ ಕಾರ್ಯಕರ್ತರೇ ಇಲ್ಲ. ಅದು ನಾಯಕರಿಂದ ತುಂಬಿರುವ ಪಕ್ಷ. ಕೆಡರ್ ಇಲ್ಲ ಅಂದ ಮೇಲೆ ಪಾರ್ಟಿ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

There are no activists in Congress
ಸಚಿವ ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಲಾಕ್​​ಡೌನ್ ಸಡಿಲಿಕೆಯನ್ನು ಜನರು ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬೇರೆ ರಾಜ್ಯದವರು ಬಂದ ಮೇಲೆ ಈ ಅವಾಂತರ ಸೃಷ್ಟಿಯಾಗಿದೆ. ಜನರು‌ ಕೂಡ ಸ್ವಯಂ ಪ್ರೇರಿತರಾಗಿ ನಿಯಂತ್ರಣ ಹಾಕಿಕೊಳ್ಳಬೇಕು ಎಂದರು.

ಮುಂದೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿ ಹೇಳಿಕೆ ಎಂದರು. ವಿಧಾನ ಪರಿಷತ್​ಗೆ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಗ್ಗೆ ಮಾತನಾಡಿ, ಉತ್ತರ ಕರ್ನಾಟಕದವರಿಗೆ ಒತ್ತು ನೀಡುವಂತೆ ಒತ್ತಾಯ ಮಾಡ್ತೀವಿ. ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.

ಸಚಿವ ಜಗದೀಶ್​ ಶೆಟ್ಟರ್

ಕೊರೊನಾ ಯಾರನ್ನೂ ಬಿಟ್ಟಿಲ್ಲ, ವೈದ್ಯಕೀಯ ಶಿಕ್ಷಣ ಸಚಿವರ ಕುಟುಂಬದವರಿಗೂ ಸೋಂಕು ತಗುಲಿದೆ. ಜನರು ಜಾಗೃತರಾದಾಗ ಮಾತ್ರ ಪರಿಹಾರ ಸಾಧ್ಯ. ಬೇರೆ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರದಲ್ಲಿದೆ. ಆ ರಾಜ್ಯಗಳಿಗೆ ಕೇಂದ್ರ ಸರ್ಕಾರಗಳಿಗೆ ಅಭಿನಂದನೆ ಸಲ್ಲಿಸಿಲ್ಲ. ಕೊರೊನಾ ತಡೆಗಟ್ಟುವ ವಿಚಾರದಲ್ಲಿ ಕರ್ನಾಟಕದ ಮಾದರಿ ಅನುಸರಿಸಿ ಎಂದಿದೆ ಎಂದು ಹೇಳಿದರು.

ಡಿ.ಕೆ.‌ಶಿವಕುಮಾರ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರು. ಅವರು ರಾಜ್ಯ ಸರ್ಕಾರವನ್ನು ಹೊಗಳುವುದಕ್ಕೆ ಬರಲ್ಲ. ಅನಿವಾರ್ಯವಾಗಿ ತೆಗಳಬೇಕು. ಡಿಕೆಶಿ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್​ನಲ್ಲಿ ಕಾರ್ಯಕರ್ತರೇ ಇಲ್ಲ. ಅದು ನಾಯಕರಿಂದ ತುಂಬಿರುವ ಪಕ್ಷ. ಕೆಡರ್ ಇಲ್ಲ ಅಂದ ಮೇಲೆ ಪಾರ್ಟಿ ಕಟ್ಟಲು ಸಾಧ್ಯವಿಲ್ಲ ಎಂದರು.

ಹುಬ್ಬಳ್ಳಿ: ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಲಾಕ್​​ಡೌನ್ ಸಡಿಲಿಕೆಯನ್ನು ಜನರು ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬೇರೆ ರಾಜ್ಯದವರು ಬಂದ ಮೇಲೆ ಈ ಅವಾಂತರ ಸೃಷ್ಟಿಯಾಗಿದೆ. ಜನರು‌ ಕೂಡ ಸ್ವಯಂ ಪ್ರೇರಿತರಾಗಿ ನಿಯಂತ್ರಣ ಹಾಕಿಕೊಳ್ಳಬೇಕು ಎಂದರು.

ಮುಂದೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿ ಹೇಳಿಕೆ ಎಂದರು. ವಿಧಾನ ಪರಿಷತ್​ಗೆ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಗ್ಗೆ ಮಾತನಾಡಿ, ಉತ್ತರ ಕರ್ನಾಟಕದವರಿಗೆ ಒತ್ತು ನೀಡುವಂತೆ ಒತ್ತಾಯ ಮಾಡ್ತೀವಿ. ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.

ಸಚಿವ ಜಗದೀಶ್​ ಶೆಟ್ಟರ್

ಕೊರೊನಾ ಯಾರನ್ನೂ ಬಿಟ್ಟಿಲ್ಲ, ವೈದ್ಯಕೀಯ ಶಿಕ್ಷಣ ಸಚಿವರ ಕುಟುಂಬದವರಿಗೂ ಸೋಂಕು ತಗುಲಿದೆ. ಜನರು ಜಾಗೃತರಾದಾಗ ಮಾತ್ರ ಪರಿಹಾರ ಸಾಧ್ಯ. ಬೇರೆ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರದಲ್ಲಿದೆ. ಆ ರಾಜ್ಯಗಳಿಗೆ ಕೇಂದ್ರ ಸರ್ಕಾರಗಳಿಗೆ ಅಭಿನಂದನೆ ಸಲ್ಲಿಸಿಲ್ಲ. ಕೊರೊನಾ ತಡೆಗಟ್ಟುವ ವಿಚಾರದಲ್ಲಿ ಕರ್ನಾಟಕದ ಮಾದರಿ ಅನುಸರಿಸಿ ಎಂದಿದೆ ಎಂದು ಹೇಳಿದರು.

ಡಿ.ಕೆ.‌ಶಿವಕುಮಾರ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರು. ಅವರು ರಾಜ್ಯ ಸರ್ಕಾರವನ್ನು ಹೊಗಳುವುದಕ್ಕೆ ಬರಲ್ಲ. ಅನಿವಾರ್ಯವಾಗಿ ತೆಗಳಬೇಕು. ಡಿಕೆಶಿ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್​ನಲ್ಲಿ ಕಾರ್ಯಕರ್ತರೇ ಇಲ್ಲ. ಅದು ನಾಯಕರಿಂದ ತುಂಬಿರುವ ಪಕ್ಷ. ಕೆಡರ್ ಇಲ್ಲ ಅಂದ ಮೇಲೆ ಪಾರ್ಟಿ ಕಟ್ಟಲು ಸಾಧ್ಯವಿಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.