ETV Bharat / city

ಟ್ರಾಫಿಕ್ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್ : ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ವಿನೂತನ ನಿರ್ಧಾರ

ಅವಳಿ ನಗರದ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 371 ಅತ್ಯಾಧುನಿಕ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಛಾಯಾಚಿತ್ರ ತೆಗೆದು, ಸಿಬ್ಬಂದಿ ಮಾಲೀಕರ ವಿಳಾಸಕ್ಕೆ ದಂಡದ ನೋಟಿಸ್​ ಕಳುಹಿಸಲಿದ್ದಾರೆ. ನಿಯಮ ಉಲ್ಲಂಘಿಸುವ ಮುನ್ನ ಯೋಚಿಸಿ..

author img

By

Published : Apr 8, 2022, 12:03 PM IST

Master plan to control Traffic
ಟ್ರಾಫಿಕ್ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್

ಹುಬ್ಬಳ್ಳಿ : ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿನಗರದ ಸಂಚಾರ ದಟ್ಟಣೆ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎರಡು ಇಲಾಖೆಗಳು ವಿನೂತನ ಕಾರ್ಯಕ್ಕೆ ಮುಂದಾಗಿವೆ. ಸ್ಮಾರ್ಟ್ ಸಿಟಿಯ ರೀತಿಯಲ್ಲಿ ಸ್ಮಾರ್ಟ್ ಆಗಿ ನಿರ್ವಹಣೆ ಮಾಡಲು ನಿರ್ಧಾರ ಮಾಡಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೆಟ್‌ನ ನವನಗರದ ಕಚೇರಿ ಕಟ್ಟಡದಲ್ಲಿ ಸ್ಮಾರ್ಟ್ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ) ಶೀಘ್ರವೇ ತಲೆ ಎತ್ತಲಿದೆ.

ಟ್ರಾಫಿಕ್ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್

ಮಹಾನಗರ ಪಾಲಿಕೆಯ ಗಾಂಧಿ ನಗರ ವಿಕಾಸ ಯೋಜನೆಯ ವಿಶೇಷ ಅನುದಾನದಡಿ ಐದು ಕೋಟಿ ರೂ. ವೆಚ್ಚದಲ್ಲಿ ಕಮಿಷನರೇಟ್ ಕಚೇರಿಯ ಎರಡನೇ ಮಹಡಿಯಲ್ಲಿ 1.3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಲ್ಲಿ ಒಂದು ಹಾಲ್, ಒಂದು ಕಚೇರಿ, ಪುರುಷ-ಮಹಿಳೆಯರ ಪ್ರತ್ಯೇಕ ಶೌಚಗೃಹಗಳು ಒಳಗೊಂಡಿವೆ. ಕಟ್ಟಡ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ತಿಳಿಸಿದರು.

ಒಟ್ಟು 4 ಕೋಟಿ ರೂ. ವೆಚ್ಚದಲ್ಲಿ 371 ಬುಲೆಟ್ ಹಾಗೂ ಪಿಟಿಝಡ್ ಸಿಸಿಟಿವಿ ಕ್ಯಾಮೆರಾಗಳು, ಎಲ್‌ಇಡಿ ಪರದೆ, ಪಿಸಿಆರ್, ಸರ್ವರ್, ಮತ್ತಿತರ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಅವಳಿ ನಗರದ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 371 ಅತ್ಯಾಧುನಿಕ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಒಂದೊಂದು ಠಾಣೆ ವ್ಯಾಪ್ತಿಯಲ್ಲಿ 15 ರಿಂದ 30ರವರೆಗೆ ಕ್ಯಾಮೆರಾ ಅಳವಡಿಸಲಾಗುತ್ತಿದೆ.

ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘನೆ, ಹೆಲ್ಮೆಟ್ ರಹಿತ ಬೈಕ್ ಚಾಲನೆ, ಟ್ರಿಪಲ್ ರೈಡಿಂಗ್, ಸಿಗ್ನಲ್ ಜಂಪಿಂಗ್, ಮತ್ತಿತರ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಛಾಯಾಚಿತ್ರವನ್ನು ಸ್ವಯಂಪ್ರೇರಿತವಾಗಿ ತೆಗೆದು ರವಾನಿಸುತ್ತದೆ. ಟಿಎಂಸಿಯಲ್ಲಿರುವ ಸಿಬ್ಬಂದಿ ವಾಹನದ ಮಾಲೀಕರ ವಿಳಾಸಕ್ಕೆ ದಂಡದ ನೋಟಿಸ್ ರವಾನಿಸುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಸಂಚಾರ ದಟ್ಟಣೆ

ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸ್ಮಾರ್ಟ್ ಟಿಎಂಸಿ ವ್ಯವಸ್ಥೆಗೆ ಮುಂದಾಗಿರುವುದು ವಿಶೇಷವಾಗಿದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸಲು ನಿರ್ಧಾರ ಕೈಗೆತ್ತಿಕೊಂಡಿದ್ದು, ಸಾರ್ವಜನಿಕರು ಸಂಚಾರ ನಿಯಮ ಪಾಲಿಸಬೇಕಿದೆ.

ಹುಬ್ಬಳ್ಳಿ : ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿನಗರದ ಸಂಚಾರ ದಟ್ಟಣೆ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎರಡು ಇಲಾಖೆಗಳು ವಿನೂತನ ಕಾರ್ಯಕ್ಕೆ ಮುಂದಾಗಿವೆ. ಸ್ಮಾರ್ಟ್ ಸಿಟಿಯ ರೀತಿಯಲ್ಲಿ ಸ್ಮಾರ್ಟ್ ಆಗಿ ನಿರ್ವಹಣೆ ಮಾಡಲು ನಿರ್ಧಾರ ಮಾಡಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೆಟ್‌ನ ನವನಗರದ ಕಚೇರಿ ಕಟ್ಟಡದಲ್ಲಿ ಸ್ಮಾರ್ಟ್ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ) ಶೀಘ್ರವೇ ತಲೆ ಎತ್ತಲಿದೆ.

ಟ್ರಾಫಿಕ್ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್

ಮಹಾನಗರ ಪಾಲಿಕೆಯ ಗಾಂಧಿ ನಗರ ವಿಕಾಸ ಯೋಜನೆಯ ವಿಶೇಷ ಅನುದಾನದಡಿ ಐದು ಕೋಟಿ ರೂ. ವೆಚ್ಚದಲ್ಲಿ ಕಮಿಷನರೇಟ್ ಕಚೇರಿಯ ಎರಡನೇ ಮಹಡಿಯಲ್ಲಿ 1.3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಲ್ಲಿ ಒಂದು ಹಾಲ್, ಒಂದು ಕಚೇರಿ, ಪುರುಷ-ಮಹಿಳೆಯರ ಪ್ರತ್ಯೇಕ ಶೌಚಗೃಹಗಳು ಒಳಗೊಂಡಿವೆ. ಕಟ್ಟಡ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ತಿಳಿಸಿದರು.

ಒಟ್ಟು 4 ಕೋಟಿ ರೂ. ವೆಚ್ಚದಲ್ಲಿ 371 ಬುಲೆಟ್ ಹಾಗೂ ಪಿಟಿಝಡ್ ಸಿಸಿಟಿವಿ ಕ್ಯಾಮೆರಾಗಳು, ಎಲ್‌ಇಡಿ ಪರದೆ, ಪಿಸಿಆರ್, ಸರ್ವರ್, ಮತ್ತಿತರ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಅವಳಿ ನಗರದ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 371 ಅತ್ಯಾಧುನಿಕ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಒಂದೊಂದು ಠಾಣೆ ವ್ಯಾಪ್ತಿಯಲ್ಲಿ 15 ರಿಂದ 30ರವರೆಗೆ ಕ್ಯಾಮೆರಾ ಅಳವಡಿಸಲಾಗುತ್ತಿದೆ.

ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘನೆ, ಹೆಲ್ಮೆಟ್ ರಹಿತ ಬೈಕ್ ಚಾಲನೆ, ಟ್ರಿಪಲ್ ರೈಡಿಂಗ್, ಸಿಗ್ನಲ್ ಜಂಪಿಂಗ್, ಮತ್ತಿತರ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ಛಾಯಾಚಿತ್ರವನ್ನು ಸ್ವಯಂಪ್ರೇರಿತವಾಗಿ ತೆಗೆದು ರವಾನಿಸುತ್ತದೆ. ಟಿಎಂಸಿಯಲ್ಲಿರುವ ಸಿಬ್ಬಂದಿ ವಾಹನದ ಮಾಲೀಕರ ವಿಳಾಸಕ್ಕೆ ದಂಡದ ನೋಟಿಸ್ ರವಾನಿಸುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಸಂಚಾರ ದಟ್ಟಣೆ

ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸ್ಮಾರ್ಟ್ ಟಿಎಂಸಿ ವ್ಯವಸ್ಥೆಗೆ ಮುಂದಾಗಿರುವುದು ವಿಶೇಷವಾಗಿದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸಲು ನಿರ್ಧಾರ ಕೈಗೆತ್ತಿಕೊಂಡಿದ್ದು, ಸಾರ್ವಜನಿಕರು ಸಂಚಾರ ನಿಯಮ ಪಾಲಿಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.