ETV Bharat / city

ಕೆಕೆಆರ್​ಡಿಬಿ ಅಧ್ಯಕ್ಷರಾಗಿ ಶಾಸಕ ದತ್ತಾತ್ರೇಯ ಪಾಟೀಲ್​ ರೇವೂರ್​ ನೇಮಕ - ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ

ಕಲ್ಯಾಣ ಕರ್ನಾಟಕ ಘೋಷಣೆ ಬಳಿಕ ಕೆಕೆಆರ್​ಡಿಬಿಯ‌ ಮೊದಲ ಅಧ್ಯಕ್ಷರನ್ನಾಗಿ ದತ್ತಾತ್ರೇಯ ಪಾಟೀಲ್​ ರೇವೂರ್​ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ನೀಡಿದೆ. ಅಲ್ಲದೆ ಈಕರಸಾ ಸಂಸ್ಥೆಗೆ ಅಧ್ಯಕ್ಷರನ್ನಾಗಿ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಹಾಗೂ ಸುರಪುರ ಶಾಸಕ ನರಸಿಂಹ ನಾಯಕ(ರಾಜುಗೌಡ) ಅವರನ್ನು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

dattatreya-patil-revour-elected-kkrdb-president
ವಿವಿಧ ನಿಗಮ-ಮಂಡಳಿಗೆ ಅಧ್ಯಕ್ಷರ ಆಯ್ಕೆ
author img

By

Published : Jul 27, 2020, 4:30 PM IST

ಕಲಬುರಗಿ: ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನಕ್ಕೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ನೇಮಕ‌ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ಖಾಲಿ ಉಳಿದಿದ್ದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಅಲ್ಲದೆ ಸರ್ಕಾರ ಸಚಿವ ಸ್ಥಾನ ಹಂಚಿಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ದ್ರೋಹ ಮಾಡಿದೆ ಎಂಬ ಆರೋಪ ಕೇಳಿಬಂದಿದ್ದವು.

Dattatreya Patil Revour elected KKRDB president
ವಿವಿಧ ನಿಗಮ-ಮಂಡಳಿಗೆ ಅಧ್ಯಕ್ಷರ ಆಯ್ಕೆ

ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಕೆಆರ್​ಡಿಬಿ ಅಧ್ಯಕ್ಷರಾಗಿ ದತ್ತಾತ್ರೇಯ ಪಾಟೀಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಅವರನ್ನು ಹಾಗೂ ಸುರಪುರ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರನ್ನು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

Dattatreya Patil Revour elected KKRDB president
ವಿವಿಧ ನಿಗಮ-ಮಂಡಳಿಗೆ ಅಧ್ಯಕ್ಷರ ಆಯ್ಕೆ

ಕಲ್ಯಾಣ ಕರ್ನಾಟಕ ಘೋಷಣೆ ಬಳಿಕ‌ ಮೊದಲ ಅಧ್ಯಕ್ಷರ ಆಯ್ಕೆ

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಕಲ್ಯಾಣ ಕರ್ನಾಟಕ ಎಂದು ಘೋಷಿಸಿದ ಬಳಿಕ ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನ‌ಕ್ಕೆ ಇದುವರೆಗೂ ಯಾರನ್ನು ನೇಮಿಸಿರಲಿಲ್ಲ ಇದೀಗ ಶಾಸಕ ದತ್ತಾತ್ರೇಯ ಪಾಟೀಲ್ ಅವರನ್ನು ನೇಮಿಸಲಾಗಿದೆ.

ಕಲಬುರಗಿ: ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನಕ್ಕೆ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ನೇಮಕ‌ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ಖಾಲಿ ಉಳಿದಿದ್ದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಅಲ್ಲದೆ ಸರ್ಕಾರ ಸಚಿವ ಸ್ಥಾನ ಹಂಚಿಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ದ್ರೋಹ ಮಾಡಿದೆ ಎಂಬ ಆರೋಪ ಕೇಳಿಬಂದಿದ್ದವು.

Dattatreya Patil Revour elected KKRDB president
ವಿವಿಧ ನಿಗಮ-ಮಂಡಳಿಗೆ ಅಧ್ಯಕ್ಷರ ಆಯ್ಕೆ

ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಕೆಆರ್​ಡಿಬಿ ಅಧ್ಯಕ್ಷರಾಗಿ ದತ್ತಾತ್ರೇಯ ಪಾಟೀಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ಅವರನ್ನು ಹಾಗೂ ಸುರಪುರ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರನ್ನು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

Dattatreya Patil Revour elected KKRDB president
ವಿವಿಧ ನಿಗಮ-ಮಂಡಳಿಗೆ ಅಧ್ಯಕ್ಷರ ಆಯ್ಕೆ

ಕಲ್ಯಾಣ ಕರ್ನಾಟಕ ಘೋಷಣೆ ಬಳಿಕ‌ ಮೊದಲ ಅಧ್ಯಕ್ಷರ ಆಯ್ಕೆ

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಕಲ್ಯಾಣ ಕರ್ನಾಟಕ ಎಂದು ಘೋಷಿಸಿದ ಬಳಿಕ ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನ‌ಕ್ಕೆ ಇದುವರೆಗೂ ಯಾರನ್ನು ನೇಮಿಸಿರಲಿಲ್ಲ ಇದೀಗ ಶಾಸಕ ದತ್ತಾತ್ರೇಯ ಪಾಟೀಲ್ ಅವರನ್ನು ನೇಮಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.