ಕಲಬುರಗಿ: ಕುಡಿದ ಮತ್ತಿನಲ್ಲಿ ಪತಿಯೊರ್ವ ಪತ್ನಿಯನ್ನೆ ಕೊಂದು ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದಲ್ಲಿ ನಡೆದಿದೆ.
ಶ್ರೀದೇವಿ(45) ಮೃತ ದುರ್ದೈವಿ. ಪತಿ ಮಲ್ಲಪ್ಪ ಪೂಜಾರಿ ರಾತ್ರಿ ಕುಡಿದು ಬಂದು ಶ್ರೀದೇವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸೆರೆಗೆ ಬಲೆ ಬೀಸಿದ್ದಾರೆ.