ಕಲಬುರಗಿ: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಪ್ರಚಾರ ಮುಗಿಯುತ್ತಿದ್ದಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ.
ಅಫಜಲಪುರ ತಾಲೂಕಿನ ದೇವಲ್ ಗಾಣಗಾಪೂರಕ್ಕೆ ಆಗಮಿಸಿದ ಇಬ್ಬರು ನಾಯಕರು ದತ್ತಾತ್ರೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಂದಗಿ ಮತ್ತು ಹಾನಗಲ್ ಉಪಚುನಾಣೆ ಪ್ರಚಾರ ಮುಗಿದ ಬೆನ್ನಲ್ಲೇ ದಳಪತಿಗಳು ನಿರಾಳರಾಗಿದ್ದಾರೆ. ಉಪಚುನಾಣೆಯಲ್ಲಿ ಜೆಡಿಎಸ್ ಪಕ್ಷ ವಿಜಯಶಾಲಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
![HD Devegowda and Kumaraswamy visits Dattatreya temple](https://etvbharatimages.akamaized.net/etvbharat/prod-images/kn-klb-03-hdd-hdk-temple-run-ka10050_28102021151746_2810f_1635414466_393.jpg)
ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ದಳಪತಿಗಳಿಗೆ ಜೆಡಿಎಸ್ ಮುಖಂಡ ಬಂಡೆಪ್ಪ ಖಾಶೆಂಪುರ್ ಸಾಥ್ ನೀಡಿದ್ದರು.