ಕಲಬುರಗಿ : ಸಚಿವ ಸ್ಥಾನ ಕಳೆದುಕೊಳ್ಳುವ ಎಚ್ಚರಿಕೆ ಜೊತೆಗೆ ಸಾಕಷ್ಟು ಒತ್ತಡ ಹಾಕಿದರೂ ಮಣಿಯದೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೋಲಿ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಿರುವುದು ಹರ್ಷದಾಯಕ ವಿಷಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನಾನು ಮತ್ತು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕೋಲಿ ಸಮುದಾಯವನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿದ್ದೆವು. ಅದರಂತೆ ಈಗ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಲಾಗಿದೆ ಎಂದರು.
ಸಮಾಜ ಹಿಂದುಳಿದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿತ್ತು. ಅಲ್ಲದೇ, ಜನರಿಗೆ ನಾವು ನೀಡಿದ ಭರವಸೆಯಂತೆ ಸರ್ಕಾರ ಕ್ರಮಕೈಗೊಂಡಿದೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮೇಲೆ ಇತರೆ ಸಮುದಾಯದಿಂದ ಒತ್ತಡವಿತ್ತು.
ಕೋಲಿ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು, ನಿರ್ಧಾರಕ್ಕೆ ಮುಂದಾದರೆ ಸಚಿವ ಸ್ಥಾನ ಕಳೆದುಕೊಳ್ಳಬೇಕಾದೀತು ಎಂಬ ಎಚ್ಚರಿಕೆ ಮಧ್ಯೆಯೇ ಸಚಿವರು ಕೋಲಿ ಸಮುದಾಯವನ್ನು ಎಸ್ಟಿಗೆ ಸೇರಿಸಿದ್ದಾರೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ