ETV Bharat / city

ಕಲಬುರಗಿಯಲ್ಲಿ ಲಾಕ್​ಡೌನ್ ನಡುವೆಯೂ ಸಿಮೆಂಟ್ ಕಾರ್ಖಾನೆ ಪ್ರಾರಂಭಕ್ಕೆ ತಯಾರಿ: ಸ್ಥಳೀಯರ ವಿರೋಧ

author img

By

Published : Apr 25, 2020, 5:33 PM IST

ಏಷ್ಯಾದಲ್ಲಿಯೇ ಅತಿ ದೊಡ್ಡ ಸಿಮೆಂಟ್ ಕಾರ್ಖಾನೆ ಎಂಬ ಹೆಗ್ಗಳಿಕೆ ಹೊಂದಿರುವ ಎಸಿಸಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಪುನರಾರಂಭಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

Prepare for the start of the cement factory in  lockdown
ಕಲಬುರಗಿ: ಲಾಕ್ ಡೌನ್ ನಡುವೆಯೂ ಸಿಮೆಂಟ್ ಕಾರ್ಖಾನೆ ಪ್ರಾರಂಭಕ್ಕೆ ತಯಾರಿ, ಸ್ಥಳೀಯರ ವಿರೋಧ..!

ಕಲಬುರಗಿ: ಲಾಕ್​ಡೌನ್ ನಡುವೆಯೇ ಚಿತ್ತಾಪುರ ತಾಲೂಕಿನ ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆ ಪುನರಾರಂಭಿಸಲು ಆಡಳಿತ ಮಂಡಳಿ ತಯಾರಿ ನಡೆಸಿದೆ ಎನ್ನಲಾಗಿದ್ದು, ಇದಕ್ಕೆ ಪುರಸಭೆ ಸದಸ್ಯರು ಮತ್ತು ಸ್ಥಳೀಯರು‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಏಷ್ಯಾದಲ್ಲಿಯೇ ಅತಿ ದೊಡ್ಡ ಸಿಮೆಂಟ್ ಕಾರ್ಖಾನೆ ಎಂಬ ಹೆಗ್ಗಳಿಕೆ ಹೊಂದಿರುವ ಎಸಿಸಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಪುನರಾರಂಭಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಸಿಮೆಂಟ್ ತುಂಬಿಕೊಂಡು ಹೋಗಲು ಈಗಾಗಲೇ ಟ್ಯಾಂಕರ್​ಗಳು ಸಿದ್ಧಗೊಂಡು ನಿಂತಿವೆ. ಆದರೆ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಬಾಲಕನ ಪೋಷಕರನ್ನು ಕ್ವಾರಂಟೈನ್ ಮಾಡಲಾಗಿದ್ದು, ಪಿಲಕಮ್ಮ ಪ್ರದೇಶ ಸೇರಿ ನಾಲ್ಕು ವಾರ್ಡ್​ಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ.

ಆದರೆ ಇದೇ ಪ್ರದೇಶದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆ ಉತ್ಪಾದನೆ ಆರಂಭಿಸಲು ಮುಂದಾಗಿರುವುದು ಸ್ಥಳೀಯರಿಗೆ ತೆಲೆನೋವಾಗಿ ಪರಿಣಮಿಸಿದೆ. ಕಾರ್ಖಾನೆ ಪುನರಾರಂಭವಾದರೆ ಜನ ಸಂಚಾರ ಹೆಚ್ಚಾಗಲಿದೆ. ಇದರಿಂದ ಸೋಂಕು ಹರಡೋ ಸಾಧ್ಯತೆಗಳಿವೆ.

ಹೀಗಾಗಿ ಯಾವುದೆ ಕಾರಣಕ್ಕೂ ಮೇ 10ರವರೆಗೆ ಕಾರ್ಖಾನೆ ಪುನರಾರಂಭ ಮಾಡಬಾರದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಲಬುರಗಿ: ಲಾಕ್​ಡೌನ್ ನಡುವೆಯೇ ಚಿತ್ತಾಪುರ ತಾಲೂಕಿನ ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆ ಪುನರಾರಂಭಿಸಲು ಆಡಳಿತ ಮಂಡಳಿ ತಯಾರಿ ನಡೆಸಿದೆ ಎನ್ನಲಾಗಿದ್ದು, ಇದಕ್ಕೆ ಪುರಸಭೆ ಸದಸ್ಯರು ಮತ್ತು ಸ್ಥಳೀಯರು‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಏಷ್ಯಾದಲ್ಲಿಯೇ ಅತಿ ದೊಡ್ಡ ಸಿಮೆಂಟ್ ಕಾರ್ಖಾನೆ ಎಂಬ ಹೆಗ್ಗಳಿಕೆ ಹೊಂದಿರುವ ಎಸಿಸಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಪುನರಾರಂಭಕ್ಕೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಸಿಮೆಂಟ್ ತುಂಬಿಕೊಂಡು ಹೋಗಲು ಈಗಾಗಲೇ ಟ್ಯಾಂಕರ್​ಗಳು ಸಿದ್ಧಗೊಂಡು ನಿಂತಿವೆ. ಆದರೆ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಬಾಲಕನ ಪೋಷಕರನ್ನು ಕ್ವಾರಂಟೈನ್ ಮಾಡಲಾಗಿದ್ದು, ಪಿಲಕಮ್ಮ ಪ್ರದೇಶ ಸೇರಿ ನಾಲ್ಕು ವಾರ್ಡ್​ಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ.

ಆದರೆ ಇದೇ ಪ್ರದೇಶದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆ ಉತ್ಪಾದನೆ ಆರಂಭಿಸಲು ಮುಂದಾಗಿರುವುದು ಸ್ಥಳೀಯರಿಗೆ ತೆಲೆನೋವಾಗಿ ಪರಿಣಮಿಸಿದೆ. ಕಾರ್ಖಾನೆ ಪುನರಾರಂಭವಾದರೆ ಜನ ಸಂಚಾರ ಹೆಚ್ಚಾಗಲಿದೆ. ಇದರಿಂದ ಸೋಂಕು ಹರಡೋ ಸಾಧ್ಯತೆಗಳಿವೆ.

ಹೀಗಾಗಿ ಯಾವುದೆ ಕಾರಣಕ್ಕೂ ಮೇ 10ರವರೆಗೆ ಕಾರ್ಖಾನೆ ಪುನರಾರಂಭ ಮಾಡಬಾರದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.