ETV Bharat / city

ಅನ್ಯಧರ್ಮದ ಯುವತಿಯೊಂದಿಗೆ ವಿವಾಹ: ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

author img

By

Published : Mar 4, 2022, 8:54 AM IST

ಅನ್ಯಧರ್ಮದ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಪಿಎನ್​ಟಿ ಕ್ವಾಟರ್ಸ್ ಬಳಿ ತಡರಾತ್ರಿ‌ ನಡೆದಿದೆ.

ವ್ಯಕ್ತಿಯ ಬರ್ಬರ ಹತ್ಯೆ
ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಪಿಎನ್​ಟಿ ಕ್ವಾಟರ್ಸ್ ಬಳಿ ತಡರಾತ್ರಿ‌ ನಡೆದಿದೆ. ಪಿಎನ್​ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿ. ಪ್ರೀತಂ ಕೆಲ ತಿಂಗಳ ಹಿಂದಷ್ಟೇ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದೆ‌. ಈ ಹಿನ್ನೆಲೆ ಕೊಲೆ ಮಾಡಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ‌.

ಕಳೆದ ರಾತ್ರಿ ಪ್ರೀತಂನನ್ನು ಕೆಲ ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ‌.

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಪಿಎನ್​ಟಿ ಕ್ವಾಟರ್ಸ್ ಬಳಿ ತಡರಾತ್ರಿ‌ ನಡೆದಿದೆ. ಪಿಎನ್​ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿ. ಪ್ರೀತಂ ಕೆಲ ತಿಂಗಳ ಹಿಂದಷ್ಟೇ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದೆ‌. ಈ ಹಿನ್ನೆಲೆ ಕೊಲೆ ಮಾಡಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ‌.

ಕಳೆದ ರಾತ್ರಿ ಪ್ರೀತಂನನ್ನು ಕೆಲ ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ‌.

ಇದನ್ನೂ ಓದಿ: ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಟಾಪ್ 5 ಹಣಕಾಸು ಸಚಿವರು/ಸಿಎಂಗಳು ಯಾರು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.