ETV Bharat / city

ಯುವತಿಗೆ ಶ್ವಾಸಕೋಶದ ಸಮಸ್ಯೆ: ಪುತ್ತೂರಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ರವಾನೆ

author img

By

Published : Dec 2, 2020, 1:18 PM IST

Updated : Dec 2, 2020, 1:28 PM IST

ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಯುವತಿಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆ್ಯಂಬುಲೆನ್ಸ್​ ಮೂಲಕ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Ambulance travelled to Zero Traffic from Puttur to Bangalore
ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿ..ಝೀರೋ ಟ್ರಾಫಿಕ್​ನಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಆಸ್ಪತ್ರೆಗೆ ತೆರಳಿದ ಆ್ಯಂಬುಲೆನ್ಸ್​

ಪುತ್ತೂರು (ದಕ್ಷಿಣ ಕನ್ನಡ): ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22) ಎಂಬ ಯುವತಿಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆ್ಯಂಬುಲೆನ್ಸ್​ ಮೂಲಕ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್‌ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಯುವತಿಗೆ ಶ್ವಾಸಕೋಶದ ಸಮಸ್ಯೆ: ಪುತ್ತೂರಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ರವಾನೆ

ಪುತ್ತೂರು ಸಂಚಾರಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆ್ಯಂಬುಲೆನ್ಸ್​ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆ್ಯಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರೀಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಆ್ಯಂಬುಲೆನ್ಸ್ ಸಂಚರಿಸುವ ಮಾರ್ಗ: ಆ್ಯಂಬುಲೆನ್ಸ್ ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಬಂಕಲ್ ಹ್ಯಾಂಡ್ ಪೋಸ್ಟ್, ಗೋಣಿಬೀಡು ,ಬೇಲೂರು, ಹಾಸನ, ಯಶವಂತುರ, ಹೆಬ್ಬಾಳ, ರಾಮಮೂರ್ತಿನಗರ, ಟಿನ್ ಫ್ಯಾಕ್ಟರಿ, ಮಹದೇವಪುರ ಮಾರ್ಗವಾಗಿ ವೈದೇಹಿ ಆಸ್ಪತ್ರೆಗೆ ತೆರಳಲಿದೆ.

ಪುತ್ತೂರು (ದಕ್ಷಿಣ ಕನ್ನಡ): ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22) ಎಂಬ ಯುವತಿಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆ್ಯಂಬುಲೆನ್ಸ್​ ಮೂಲಕ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್‌ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಯುವತಿಗೆ ಶ್ವಾಸಕೋಶದ ಸಮಸ್ಯೆ: ಪುತ್ತೂರಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ರವಾನೆ

ಪುತ್ತೂರು ಸಂಚಾರಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆ್ಯಂಬುಲೆನ್ಸ್​ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆ್ಯಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರೀಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಆ್ಯಂಬುಲೆನ್ಸ್ ಸಂಚರಿಸುವ ಮಾರ್ಗ: ಆ್ಯಂಬುಲೆನ್ಸ್ ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಬಂಕಲ್ ಹ್ಯಾಂಡ್ ಪೋಸ್ಟ್, ಗೋಣಿಬೀಡು ,ಬೇಲೂರು, ಹಾಸನ, ಯಶವಂತುರ, ಹೆಬ್ಬಾಳ, ರಾಮಮೂರ್ತಿನಗರ, ಟಿನ್ ಫ್ಯಾಕ್ಟರಿ, ಮಹದೇವಪುರ ಮಾರ್ಗವಾಗಿ ವೈದೇಹಿ ಆಸ್ಪತ್ರೆಗೆ ತೆರಳಲಿದೆ.

Last Updated : Dec 2, 2020, 1:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.