ETV Bharat / city

ಮೋದಿಗೆ ಭದ್ರತಾ ವೈಫಲ್ಯ: ಮಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ಮೋದಿಗೆ ಭದ್ರತೆ ನೀಡಲು ಪಂಜಾಬ್‌ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ಅತ್ತ ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

author img

By

Published : Jan 6, 2022, 10:15 PM IST

congress
ಪ್ರತಿಭಟನೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾದ ಪಂಜಾಬ್ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್​ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ಸಿಗರೂ ಹೋರಾಟ ನಡೆಸಿದ ಘಟನೆ ಗುರುವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮುಂಭಾಗ ಏಕಾಏಕಿ ಪ್ರತಿಭಟನೆಗಿಳಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಲು ಆರಂಭಿಸಿ, ಎರಡೂ ಪಕ್ಷಗಳ ನಡುವೆ ವಾಗ್ವಾದ ಆರಂಭವಾಯಿತು. ಎರಡೂ ಕಡೆಗಳಲ್ಲಿ ಪರ ವಿರೋಧ ಘೋಷಣೆಗಳು ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಮಾಡಲು ಯತ್ನಿಸಿದರೂ ಫಲ ನೀಡಲಿಲ್ಲ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಂದೆ ದೂಡಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಬಳಿಕ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಸಮಾಧಾನಿಸಿ ಹಿಂದೆ ಕಳುಹಿಸಿದ್ದಾರೆ.

ಕಾಂಗ್ರೆಸ್​ನಿಂದ ಮರು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಯನ್ನು ಖಂಡಿಸಿ ಕಾಂಗ್ರೆಸ್​ನಿಂದ ಬಿಜೆಪಿ ಕಚೇರಿ ಚಲೋ ನಡೆಸಲಾಯಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ನೇತೃತ್ವದ ತಂಡ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಾದಯಾತ್ರೆ ಮೂಲಕ ಹೊರಟಿತ್ತು. ಈ ಸಂದರ್ಭ ಪೊಲೀಸರು ದಾರಿ ಮಧ್ಯೆಯೇ ತಡೆ ಒಡ್ಡಿದ್ದಾರೆ.

ಇದರಿಂದ ಕುಪಿತರಾದ ಕಾಂಗ್ರೆಸ್​ ಕಾಯಕರ್ತರು ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪ್ರತಿಭಟನೆ ಕೈಬಿಡಲು ಮನವಿ ಮಾಡಿದರು. ಇದಕ್ಕೆ ಜಗ್ಗದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಇದನ್ನೂ ಓದಿ: SSLC ಪರೀಕ್ಷಾ ದಿನಾಂಕ ಪ್ರಕಟ.. ಇಲ್ಲಿದೆ ನೋಡಿ ವೇಳಾಪಟ್ಟಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾದ ಪಂಜಾಬ್ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್​ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ಸಿಗರೂ ಹೋರಾಟ ನಡೆಸಿದ ಘಟನೆ ಗುರುವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮುಂಭಾಗ ಏಕಾಏಕಿ ಪ್ರತಿಭಟನೆಗಿಳಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಲು ಆರಂಭಿಸಿ, ಎರಡೂ ಪಕ್ಷಗಳ ನಡುವೆ ವಾಗ್ವಾದ ಆರಂಭವಾಯಿತು. ಎರಡೂ ಕಡೆಗಳಲ್ಲಿ ಪರ ವಿರೋಧ ಘೋಷಣೆಗಳು ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಮಾಡಲು ಯತ್ನಿಸಿದರೂ ಫಲ ನೀಡಲಿಲ್ಲ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಂದೆ ದೂಡಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಬಳಿಕ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಸಮಾಧಾನಿಸಿ ಹಿಂದೆ ಕಳುಹಿಸಿದ್ದಾರೆ.

ಕಾಂಗ್ರೆಸ್​ನಿಂದ ಮರು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಯನ್ನು ಖಂಡಿಸಿ ಕಾಂಗ್ರೆಸ್​ನಿಂದ ಬಿಜೆಪಿ ಕಚೇರಿ ಚಲೋ ನಡೆಸಲಾಯಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ನೇತೃತ್ವದ ತಂಡ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಾದಯಾತ್ರೆ ಮೂಲಕ ಹೊರಟಿತ್ತು. ಈ ಸಂದರ್ಭ ಪೊಲೀಸರು ದಾರಿ ಮಧ್ಯೆಯೇ ತಡೆ ಒಡ್ಡಿದ್ದಾರೆ.

ಇದರಿಂದ ಕುಪಿತರಾದ ಕಾಂಗ್ರೆಸ್​ ಕಾಯಕರ್ತರು ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪ್ರತಿಭಟನೆ ಕೈಬಿಡಲು ಮನವಿ ಮಾಡಿದರು. ಇದಕ್ಕೆ ಜಗ್ಗದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಇದನ್ನೂ ಓದಿ: SSLC ಪರೀಕ್ಷಾ ದಿನಾಂಕ ಪ್ರಕಟ.. ಇಲ್ಲಿದೆ ನೋಡಿ ವೇಳಾಪಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.