ETV Bharat / city

ಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ.. ಕುಟುಂಬಸ್ಥರಿಂದ ಪ್ರತಿಭಟನೆ

author img

By

Published : Oct 27, 2019, 9:01 PM IST

ನಗರದ ದೇರಳಕಟ್ಟೆಯ ಯೆನೆಪೋಯ ಶವಾಗಾರದಲ್ಲಿರಿಸಿದ ಮೃತದೇಹವೊಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

carcass-in-rotten-condition

ಮಂಗಳೂರು:ನಗರದ ದೇರಳಕಟ್ಟೆಯ ಯೆನೆಪೋಯ ಶವಾಗಾರದಲ್ಲಿರಿಸಿದ ಮೃತದೇಹವೊಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತೊಕ್ಕೊಟ್ಟು ನಿವಾಸಿ ವಿಲ್ಸನ್ ಫೆರ್ನಾಂಡಿಸ್ ವಿದ್ಯುತ್ ಆಘಾತಕ್ಕೊಳಗಾಗಿ ಶುಕ್ರವಾರ ಮೃತಪಟ್ಟಿದ್ದರು. ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದ ಮೃತದೇಹವನ್ನು ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಇಂದು ಕೇಳಿದ್ದರು. ಆದರೆ, ವಿಲ್ಸನ್ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.

ಕುಟುಂಬಸ್ಥರಿಂದ ಪ್ರತಿಭಟನೆ..

ಸ್ಥಳದಲ್ಲಿ ಎಸಿಪಿ ಕೋದಂಡರಾಮ, ಉಳ್ಳಾಲ ಪೊಲೀಸ್ ಇನ್ಸ್‌​ಸ್ಪೆಕ್ಟರ್ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಸಂಪೂರ್ಣ ಬಂದೋಬಸ್ತ್​​ ಏರ್ಪಡಿಸಲಾಗಿತ್ತು. ಬಳಿಕ ಶಾಸಕ ಯು ಟಿ ಖಾದರ್ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಮಂಗಳೂರು:ನಗರದ ದೇರಳಕಟ್ಟೆಯ ಯೆನೆಪೋಯ ಶವಾಗಾರದಲ್ಲಿರಿಸಿದ ಮೃತದೇಹವೊಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತೊಕ್ಕೊಟ್ಟು ನಿವಾಸಿ ವಿಲ್ಸನ್ ಫೆರ್ನಾಂಡಿಸ್ ವಿದ್ಯುತ್ ಆಘಾತಕ್ಕೊಳಗಾಗಿ ಶುಕ್ರವಾರ ಮೃತಪಟ್ಟಿದ್ದರು. ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದ ಮೃತದೇಹವನ್ನು ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಇಂದು ಕೇಳಿದ್ದರು. ಆದರೆ, ವಿಲ್ಸನ್ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.

ಕುಟುಂಬಸ್ಥರಿಂದ ಪ್ರತಿಭಟನೆ..

ಸ್ಥಳದಲ್ಲಿ ಎಸಿಪಿ ಕೋದಂಡರಾಮ, ಉಳ್ಳಾಲ ಪೊಲೀಸ್ ಇನ್ಸ್‌​ಸ್ಪೆಕ್ಟರ್ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಸಂಪೂರ್ಣ ಬಂದೋಬಸ್ತ್​​ ಏರ್ಪಡಿಸಲಾಗಿತ್ತು. ಬಳಿಕ ಶಾಸಕ ಯು ಟಿ ಖಾದರ್ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Intro:ಮಂಗಳೂರು: ನಗರದ ದೇರಳಕಟ್ಟೆಯ ಯೆನೆಪೋಯ ಶವಾಗಾರದಲ್ಲಿರಿಸಿದ ಮೃತದೇಹವೊಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆಯಿತು.

ತೊಕ್ಕೊಟ್ಟು, ನಿತ್ಯಾಧರ್ ಸೈಟ್ ನಿವಾಸಿ ವಿಲ್ಸನ್ ಫೆರ್ನಾಂಡಿಸ್ ವಿದ್ಯುತ್ ಆಘಾತಕ್ಕೊಳಗಾಗಿ ಶುಕ್ರವಾರದಂದು ಮೃತಪಟ್ಟಿದ್ದರು. ಇಂದು ವಿಲ್ಸನ್ ಅಂತ್ಯಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ಅವರ ಮೃತದೇಹವನ್ನು ಯೆನೆಪೋಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿತ್ತು.

Body:ಆದರೆ ಇಂದು ಶವಾಗಾರದಲ್ಲಿದ್ದ ವಿಲ್ಸನ್ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ವಿಲ್ಸನ್ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಎಸಿಪಿ ಕೋದಂಡರಾಮ ,ಉಳ್ಳಾಲ ಪೊಲೀಸ್ ಇನ್ಸ್ ಸ್ಪೆಕ್ಟರ್ ಗೋಪಿಕೃಷ್ಣರಿಂದ ಬಂದೋಬಸ್ತು ಮಾಡಿದ್ದಾರೆ. ಉಳ್ಳಾಲ ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರನ್ನು ಸಮಾಧಾನ ಮಾಡಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.