ETV Bharat / city

ಡೇನಿಯಲ್ ಹತ್ಯೆ ಪ್ರಕರಣ...ಆರೋಪಿಗೆ ಏಳು ವರ್ಷ ಸಜೆ - ಕುಡಿದ ಮತ್ತಿನಲ್ಲಿ ಕೊಲೆ

ವರ್ಷದ ಹಿಂದೆ ನಡೆದಿದ್ದ ಡೇನಿಯಲ್ ಕೊಲೆ ಪ್ರಕರಣದ ಆರೋಪಿಯಾದ ಜಗದೀಶ್ ಶೆಟ್ಟಿ ಅವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ ಶಿಕ್ಷೆಯ ಆದೇಶ ಹೊರಡಿಸಿದೆ.

denial murder case
author img

By

Published : Nov 17, 2019, 5:51 AM IST

ಮಂಗಳೂರು: ಯೆಯ್ಯಾಡಿಯಲ್ಲಿ 2018ರ ಸೆಪ್ಟೆಂಬರ್​​ 20ರಂದು ನಡೆದ ಡೇನಿಯಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಏಳು ವರ್ಷ ಕಠಿಣ ಸಜೆ ಮತ್ತು ₹ 10 ಸಾವಿರ ದಂಡ ವಿಧಿಸಿದೆ.

ಬಿಜೈ ಬಾರೆಬೈಲು ನಿವಾಸಿ ಜಗದೀಶ್ ಶೆಟ್ಟಿ (49) ಶಿಕ್ಷೆಗೊಳಗಾದ ಅಪರಾಧಿ. ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಮಧ್ಯೆ ನಡೆದ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣ ವಿವರ: ಕೊಲೆಯಾದ ಡೇನಿಯಲ್ ಪೈಂಟರ್ ಕೆಲಸ ಮಾಡಿಕೊಂಡಿದ್ದ. ಆರೋಪಿ ಜಗದೀಶ್ ಶೆಟ್ಟಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಇವರಿಬ್ಬರು ರಾತ್ರಿ ವೇಳೆ ಮನೆಗೆ ಹೋಗದೆ ಯೆಯ್ಯಿಡಿ ಪ್ಲೈವುಡ್ ಮಳಿಗೆ ಸಮೀಪ ಮಲಗುತ್ತಿದ್ದರು. ಪ್ರತಿನಿತ್ಯ ರಾತ್ರಿ ವೇಳೆ ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದರು. ಇದೇ ರೀತಿ 2018ರ ಸೆ.20ರಂದು ರಾತ್ರಿ ವೇಳೆ ಮದ್ಯಪಾನ ಮಾಡಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳ ಮಾಡಿಕೊಂಡಿದ್ದರು. ಆಗ ನಿಂದಿಸಿದ ಡೇನಿಯಲ್ ಮೇಲೆ ಜಗದೀಶ್ ಶೆಟ್ಟಿ ಕಲ್ಲು ಹಾಕಿ ಹತ್ಯೆ ಮಾಡಿದ್ದ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಯೆಯ್ಯಾಡಿಯಲ್ಲಿ 2018ರ ಸೆಪ್ಟೆಂಬರ್​​ 20ರಂದು ನಡೆದ ಡೇನಿಯಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಏಳು ವರ್ಷ ಕಠಿಣ ಸಜೆ ಮತ್ತು ₹ 10 ಸಾವಿರ ದಂಡ ವಿಧಿಸಿದೆ.

ಬಿಜೈ ಬಾರೆಬೈಲು ನಿವಾಸಿ ಜಗದೀಶ್ ಶೆಟ್ಟಿ (49) ಶಿಕ್ಷೆಗೊಳಗಾದ ಅಪರಾಧಿ. ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಮಧ್ಯೆ ನಡೆದ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣ ವಿವರ: ಕೊಲೆಯಾದ ಡೇನಿಯಲ್ ಪೈಂಟರ್ ಕೆಲಸ ಮಾಡಿಕೊಂಡಿದ್ದ. ಆರೋಪಿ ಜಗದೀಶ್ ಶೆಟ್ಟಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಇವರಿಬ್ಬರು ರಾತ್ರಿ ವೇಳೆ ಮನೆಗೆ ಹೋಗದೆ ಯೆಯ್ಯಿಡಿ ಪ್ಲೈವುಡ್ ಮಳಿಗೆ ಸಮೀಪ ಮಲಗುತ್ತಿದ್ದರು. ಪ್ರತಿನಿತ್ಯ ರಾತ್ರಿ ವೇಳೆ ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದರು. ಇದೇ ರೀತಿ 2018ರ ಸೆ.20ರಂದು ರಾತ್ರಿ ವೇಳೆ ಮದ್ಯಪಾನ ಮಾಡಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳ ಮಾಡಿಕೊಂಡಿದ್ದರು. ಆಗ ನಿಂದಿಸಿದ ಡೇನಿಯಲ್ ಮೇಲೆ ಜಗದೀಶ್ ಶೆಟ್ಟಿ ಕಲ್ಲು ಹಾಕಿ ಹತ್ಯೆ ಮಾಡಿದ್ದ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Intro:ಮಂಗಳೂರು: ಮಂಗಳೂರಿನ ಯೆಯ್ಯಾಡಿಯಲ್ಲಿ 2018 ಸೆ.20 ರಂದು ನಡೆದ ಡೇನಿಯಲ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷ ಕಠಿಣ ಸಜೆಯನ್ನು ನೀಡಿದೆ.Body:
ಬಿಜೈ ಬಾರೆಬೈಲು ನಿವಾಸಿ ಜಗದೀಶ್ ಶೆಟ್ಟಿ (49) ಶಿಕ್ಷೆಗೊಳಗಾದ ಆರೋಪಿ‌. ಇದೊಂದು ಕೊಲೆಯಲ್ಲದ ಮಾನವ ಹತ್ಯೆ ಎಂದು ತೀರ್ಮಾನಿಸಿ ಏಳು ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಲಾಗಿದೆ.
ಕೊಲೆಯಾದ ಡೇನಿಯಲ್ ಆರೋಪಿ ಜಗದೀಶ್ ಶೆಟ್ಟಿ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ. ರಾತ್ರಿ ಇವರು ಪ್ಲೈವುಡ್ ಮಳಿಗೆ ಸಮೀಪ ಮಲಗುತ್ತಿದ್ದರು. ರಾತ್ರಿ ವೇಳೆ ಕುಡಿದ ಮತ್ತಿನಲ್ಲಿ ಜಗಳವಾಡಿ ಆರೋಪಿ ಜಗದೀಶ್ ಶೆಟ್ಟಿ ಡೇನಿಯಲ್ ಮೇಲೆ ಕೆಂಪು ಕಲ್ಲು ಹಾಕಿ ಹತ್ಯೆ ಮಾಡಿದ್ದನು.ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.