ETV Bharat / city

ಜಾನುವಾರು ಸಾಗಾಟ ಮಾಡುವವರ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಡಿಸಿ

author img

By

Published : Jul 27, 2020, 11:34 PM IST

ಕಾನೂನು ನಿಯಮ ಉಲ್ಲಂಘಿಸಿ ಜಾನುವಾರು ಸಾಗಾಟ ಮಾಡುವವರ ಮೇಲೆ ಹಲ್ಲೆ ನಡೆಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

District Collector Sindhu B. Rupesh Meeting
ಜಾನುವಾರು ಸಾಗಾಟ ಮಾಡುವವರ ಮೇಲೆ ಹಲ್ಲೆ ನಡೆಸಿದಲ್ಲಿ ಕಾನೂನು ಕ್ರಮ: ಡಿಸಿ ಸಿಂಧೂ ಬಿ.ರೂಪೇಶ್

ಮಂಗಳೂರು: ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳದೆ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಕಾನೂನು ನಿಯಮ ಉಲ್ಲಂಘಿಸಿ ಸಾಗಾಟಗಾರರ ಮೇಲೆ ಹಲ್ಲೆ ನಡೆಸೋದಾಗಲಿ ಅಥವಾ ವಾಹನಗಳನ್ನು ಜಖಂಗೊಳಿಸಿದ್ದಲ್ಲಿ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಬಕ್ರೀದ್ ಹಿನ್ನೆಲೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಜಾನುವಾರು ಸಾಗಾಟ ಮಾಡುವ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾ.ಪಂ.ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದು ಪಶು ಸಂಗೋಪನಾ ಇಲಾಖೆಗೆ ಸೂಚನೆ ನೀಡಿದರು. ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶು ವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ ಬಗ್ಗೆ ಗಮನಹರಿಸಬೇಕು. ಅಲ್ಲದೆ, ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದರು.

ಕೋವಿಡ್ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನ ಸೇರದಂತೆ ನಿಗಾವಹಿಸಿ, ಆದಷ್ಟು ಮನೆಯಲ್ಲಿಯೇ ಪ್ರಾರ್ಥನೆಯನ್ನು ಸಲ್ಲಿಸಲು ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಿ ಜನರ ಮನವೊಲಿಸಬೇಕು. ಬಕ್ರೀದ್ ಸಂದರ್ಭದಲ್ಲಿ ಪ್ರಮುಖ ಪ್ರಾರ್ಥನಾ ಮಂದಿರಗಳಲ್ಲಿ ಸೂಕ್ತ ಬ್ಯಾರಿಕೇಡ್​ಗಳನ್ನು ಹಾಕಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಮಂಗಳೂರು: ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಟ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳದೆ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಕಾನೂನು ನಿಯಮ ಉಲ್ಲಂಘಿಸಿ ಸಾಗಾಟಗಾರರ ಮೇಲೆ ಹಲ್ಲೆ ನಡೆಸೋದಾಗಲಿ ಅಥವಾ ವಾಹನಗಳನ್ನು ಜಖಂಗೊಳಿಸಿದ್ದಲ್ಲಿ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಬಕ್ರೀದ್ ಹಿನ್ನೆಲೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಜಾನುವಾರು ಸಾಗಾಟ ಮಾಡುವ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾ.ಪಂ.ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದು ಪಶು ಸಂಗೋಪನಾ ಇಲಾಖೆಗೆ ಸೂಚನೆ ನೀಡಿದರು. ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶು ವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ ಬಗ್ಗೆ ಗಮನಹರಿಸಬೇಕು. ಅಲ್ಲದೆ, ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದರು.

ಕೋವಿಡ್ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನ ಸೇರದಂತೆ ನಿಗಾವಹಿಸಿ, ಆದಷ್ಟು ಮನೆಯಲ್ಲಿಯೇ ಪ್ರಾರ್ಥನೆಯನ್ನು ಸಲ್ಲಿಸಲು ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಿ ಜನರ ಮನವೊಲಿಸಬೇಕು. ಬಕ್ರೀದ್ ಸಂದರ್ಭದಲ್ಲಿ ಪ್ರಮುಖ ಪ್ರಾರ್ಥನಾ ಮಂದಿರಗಳಲ್ಲಿ ಸೂಕ್ತ ಬ್ಯಾರಿಕೇಡ್​ಗಳನ್ನು ಹಾಕಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.