ETV Bharat / city

ನಳಿನ್ ಕುಮಾರ್ ಕಟೀಲ್ ದೊಡ್ಡ ರಾಷ್ಟ್ರಪ್ರೇಮಿ: ಡಿಕೆಶಿ ವ್ಯಂಗ್ಯ

author img

By

Published : May 20, 2022, 7:19 AM IST

ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕುತ್ತೇವೆ ಎನ್ನುವವರು ರಾಷ್ಟ್ರಪ್ರೇಮಿಗಳು ಎಂದು ಬಿಜೆಪಿ ನಾಯಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

DK Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ

ಮಂಗಳೂರು(ದಕ್ಷಿಣ ಕನ್ನಡ): ಪಠ್ಯದಲ್ಲಿ ಬದಲಾವಣೆಯನ್ನು ವಿರೋಧಿಸುವವರು ರಾಷ್ಟ್ರದ್ರೋಹಿಗಳು ಎಂಬ ಕಟೀಲ್ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕುತ್ತೇವೆ ಎನ್ನುವವರು ರಾಷ್ಟ್ರಪ್ರೇಮಿಗಳು ಎಂದು ವ್ಯಂಗ್ಯವಾಡಿದರು.

ಜಿಲ್ಲೆಯ ಕೆಲ ಶಾಲೆಗಳಲ್ಲಿ ಶಾಲಾರಂಭದ ದಿನ ಹೋಮ-ಹವನ ಮಾಡಿರುವ ಬಗ್ಗೆ ಮಾತನಾಡಿ, ಶಾಲೆಗಳಲ್ಲಿ ಮೊದಲಿನಿಂದ ಯಾವೆಲ್ಲ ಪದ್ಧತಿ ಇದೆಯೋ, ಎಲ್ಲಾ ಧರ್ಮದವರಿಗೆ ಏನು ಗೌರವ ಕೊಡಬೇಕೋ ಅದನ್ನು ಮಾಡಬೇಕು ಎಂದರು. ವಿದ್ಯಾವಂತರು ದೇಶದ ಆಸ್ತಿ. ದ.ಕ ಜಿಲ್ಲೆಯಿಂದ ಉದ್ಯೋಗಕ್ಕಾಗಿ ವಲಸೆ ಹೋಗುತ್ತಿರುವುದನ್ನು ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಆಗ್ರಹಿಸಿದರು.


ಸರ್ಕಾರ 10ನೇ ತರಗತಿಯ ಪಠ್ಯಪುಸ್ತಕದಲ್ಲಿ ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿದೆ. ಪಠ್ಯದಿಂದ ತೆಗೆದರೆ ಚರಿತ್ರೆಯಿಂದ ತೆಗೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಆಗ ಮತ್ತೆ ಅವರ ಪಠ್ಯ ಸೇರಿಸುತ್ತೇವೆ ಎಂದು ಹೇಳಿದರು. ಮಂಗಳೂರಿನ ಪುರಭವನದಲ್ಲಿ ನಡೆದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರ ಅಭಿನಂದನಾ‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: ಮೈಸೂರು: ಪರೀಕ್ಷೆ‌ಯಲ್ಲಿ ಅನುತೀರ್ಣ ವಿದ್ಯಾರ್ಥಿ‌ ಆತ್ಮಹತ್ಯೆ

ಮಂಗಳೂರು(ದಕ್ಷಿಣ ಕನ್ನಡ): ಪಠ್ಯದಲ್ಲಿ ಬದಲಾವಣೆಯನ್ನು ವಿರೋಧಿಸುವವರು ರಾಷ್ಟ್ರದ್ರೋಹಿಗಳು ಎಂಬ ಕಟೀಲ್ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕುತ್ತೇವೆ ಎನ್ನುವವರು ರಾಷ್ಟ್ರಪ್ರೇಮಿಗಳು ಎಂದು ವ್ಯಂಗ್ಯವಾಡಿದರು.

ಜಿಲ್ಲೆಯ ಕೆಲ ಶಾಲೆಗಳಲ್ಲಿ ಶಾಲಾರಂಭದ ದಿನ ಹೋಮ-ಹವನ ಮಾಡಿರುವ ಬಗ್ಗೆ ಮಾತನಾಡಿ, ಶಾಲೆಗಳಲ್ಲಿ ಮೊದಲಿನಿಂದ ಯಾವೆಲ್ಲ ಪದ್ಧತಿ ಇದೆಯೋ, ಎಲ್ಲಾ ಧರ್ಮದವರಿಗೆ ಏನು ಗೌರವ ಕೊಡಬೇಕೋ ಅದನ್ನು ಮಾಡಬೇಕು ಎಂದರು. ವಿದ್ಯಾವಂತರು ದೇಶದ ಆಸ್ತಿ. ದ.ಕ ಜಿಲ್ಲೆಯಿಂದ ಉದ್ಯೋಗಕ್ಕಾಗಿ ವಲಸೆ ಹೋಗುತ್ತಿರುವುದನ್ನು ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಆಗ್ರಹಿಸಿದರು.


ಸರ್ಕಾರ 10ನೇ ತರಗತಿಯ ಪಠ್ಯಪುಸ್ತಕದಲ್ಲಿ ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿದೆ. ಪಠ್ಯದಿಂದ ತೆಗೆದರೆ ಚರಿತ್ರೆಯಿಂದ ತೆಗೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಆಗ ಮತ್ತೆ ಅವರ ಪಠ್ಯ ಸೇರಿಸುತ್ತೇವೆ ಎಂದು ಹೇಳಿದರು. ಮಂಗಳೂರಿನ ಪುರಭವನದಲ್ಲಿ ನಡೆದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರ ಅಭಿನಂದನಾ‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: ಮೈಸೂರು: ಪರೀಕ್ಷೆ‌ಯಲ್ಲಿ ಅನುತೀರ್ಣ ವಿದ್ಯಾರ್ಥಿ‌ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.