ETV Bharat / city

ಕೊರಗರ ಮೇಲೆ ಹಲ್ಲೆ ಪ್ರಕರಣ ಸಿಒಡಿಗೆ ಒಪ್ಪಿಸಿರೋದು ಕಣ್ಣೊರೆಸುವ ತಂತ್ರ;  ನಿವೃತ್ತ ಜಡ್ಜ್ ನೇತೃತ್ವದ​​​​​​ ತನಿಖೆಗೆ ಯು ಟಿ ಖಾದರ್ ಆಗ್ರಹ - Ex Minister UT Khader demanding police-brutality case Investigation by District Judge

ಕೊರಗರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಮಾಡಿದ ತಪ್ಪನ್ನು ಪೊಲೀಸ್ ಅಧಿಕಾರಿಗಳೇ ಇರುವ ಸಿಒಡಿ ಯಿಂದ ಮಾಡಿಸುವುದು ಕಣ್ಣೊರೆಸುವ ತಂತ್ರ ಎಂದು ಮಾಜಿ ಸಚಿವ ಯು ಟಿ ಖಾದರ್‌ ಹೇಳಿದ್ದಾರೆ.

Ex Minister UT Khader demanding police-brutality case Investigation by District Judge
ಕೊರಗರ ಮೇಲೆ ಹಲ್ಲೆ ಪ್ರಕರಣದ ಸಿಒಡಿ ತನಿಖೆ ಕಣ್ಣೊರೆಸುವ ತಂತ್ರ; ನಿ.ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಯು ಟಿ ಖಾದರ್ ಆಗ್ರಹ
author img

By

Published : Jan 3, 2022, 12:30 PM IST

ಮಂಗಳೂರು: ಉಡುಪಿ ಜಿಲ್ಲೆ ಕೋಟತಟ್ಟು ಗ್ರಾಮದಲ್ಲಿ ಮೆಹಂದಿ ಕಾರ್ಯಕ್ರಮ ನಡೆಸುತ್ತಿದ್ದ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ಪ್ರಕರಣದ ಬಗ್ಗೆ ಸಿಒಡಿ ತನಿಖೆಯ ಬದಲು ಹಾಲಿ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಯು ಟಿ ಖಾದರ್ ಆಗ್ರಹಿಸಿದ್ದಾರೆ.

ಕೊರಗರ ಮೇಲೆ ಹಲ್ಲೆ ಪ್ರಕರಣದ ಸಿಒಡಿ ತನಿಖೆ ಕಣ್ಣೊರೆಸುವ ತಂತ್ರ; ನಿ.ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಯು ಟಿ ಖಾದರ್ ಆಗ್ರಹ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಸರ್ಕಾರ ಸಿಒಡಿ ತನಿಖೆಗೆ ವಹಿಸಿದೆ. ಪೊಲೀಸರು ಮಾಡಿದ ದೌರ್ಜನ್ಯವನ್ನು ಪೊಲೀಸ್ ಅಧಿಕಾರಿಗಳೇ ಇರುವ ಸಿಒಡಿ ಯಿಂದ ಮಾಡಿಸುವುದು ಕಣ್ಣೊರೆಸುವ ತಂತ್ರ. ಇದರಿಂದಾಗಿ ನ್ಯಾಯ ಸಿಗಲು ಸಾಧ್ಯವಿಲ್ಲ. ನಾವು ಸಿಒಡಿ ತನಿಖೆಗೆ ಒಪ್ಪುವುದಿಲ್ಲ. ಈ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ದಬ್ಬಾಳಿಕೆ ನಡೆಸಿದ ಇತರ ಪೊಲೀಸರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೊರಗರ ಮೇಲೆ ಹಾಕಲಾದ ಸುಳ್ಳು ಮೊಕದ್ದಮೆ ವಾಪಸ್ ಪಡೆಯಬೇಕು. ಅನ್ಯಾಯಕ್ಕೊಳಗಾದವರಿಗೆ ಶೀಘ್ರ ಪರಿಹಾರ ಕೊಡಬೇಕು ‌ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಪರಿವರ್ತನವಾದ ಮೈಸೂರು ವಿಭಾಗೀಯ ಸಂಚಾಲಕ ಅಶೋಕ್ ಕೊಂಚಾಡಿ ಅವರು ಈ ದೌರ್ಜನ್ಯದ ವಿರುದ್ಧ ಕಚ್ಚೂರು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅಥವಾ ಎಸ್‌ಪಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಸೀಟ್ ಕಡಿಮೆ ಬಂದರೂ ಗ್ರಾಮ ಮಟ್ಟದಲ್ಲಿ ಮತದಾರರ ಸಂಖ್ಯೆ ಹೆಚ್ಚಳ: ಖಾದರ್

ಮಂಗಳೂರು: ಉಡುಪಿ ಜಿಲ್ಲೆ ಕೋಟತಟ್ಟು ಗ್ರಾಮದಲ್ಲಿ ಮೆಹಂದಿ ಕಾರ್ಯಕ್ರಮ ನಡೆಸುತ್ತಿದ್ದ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ಪ್ರಕರಣದ ಬಗ್ಗೆ ಸಿಒಡಿ ತನಿಖೆಯ ಬದಲು ಹಾಲಿ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಯು ಟಿ ಖಾದರ್ ಆಗ್ರಹಿಸಿದ್ದಾರೆ.

ಕೊರಗರ ಮೇಲೆ ಹಲ್ಲೆ ಪ್ರಕರಣದ ಸಿಒಡಿ ತನಿಖೆ ಕಣ್ಣೊರೆಸುವ ತಂತ್ರ; ನಿ.ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಯು ಟಿ ಖಾದರ್ ಆಗ್ರಹ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಸರ್ಕಾರ ಸಿಒಡಿ ತನಿಖೆಗೆ ವಹಿಸಿದೆ. ಪೊಲೀಸರು ಮಾಡಿದ ದೌರ್ಜನ್ಯವನ್ನು ಪೊಲೀಸ್ ಅಧಿಕಾರಿಗಳೇ ಇರುವ ಸಿಒಡಿ ಯಿಂದ ಮಾಡಿಸುವುದು ಕಣ್ಣೊರೆಸುವ ತಂತ್ರ. ಇದರಿಂದಾಗಿ ನ್ಯಾಯ ಸಿಗಲು ಸಾಧ್ಯವಿಲ್ಲ. ನಾವು ಸಿಒಡಿ ತನಿಖೆಗೆ ಒಪ್ಪುವುದಿಲ್ಲ. ಈ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ದಬ್ಬಾಳಿಕೆ ನಡೆಸಿದ ಇತರ ಪೊಲೀಸರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೊರಗರ ಮೇಲೆ ಹಾಕಲಾದ ಸುಳ್ಳು ಮೊಕದ್ದಮೆ ವಾಪಸ್ ಪಡೆಯಬೇಕು. ಅನ್ಯಾಯಕ್ಕೊಳಗಾದವರಿಗೆ ಶೀಘ್ರ ಪರಿಹಾರ ಕೊಡಬೇಕು ‌ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಪರಿವರ್ತನವಾದ ಮೈಸೂರು ವಿಭಾಗೀಯ ಸಂಚಾಲಕ ಅಶೋಕ್ ಕೊಂಚಾಡಿ ಅವರು ಈ ದೌರ್ಜನ್ಯದ ವಿರುದ್ಧ ಕಚ್ಚೂರು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅಥವಾ ಎಸ್‌ಪಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಸೀಟ್ ಕಡಿಮೆ ಬಂದರೂ ಗ್ರಾಮ ಮಟ್ಟದಲ್ಲಿ ಮತದಾರರ ಸಂಖ್ಯೆ ಹೆಚ್ಚಳ: ಖಾದರ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.