ETV Bharat / city

ಬೆಳ್ತಂಗಡಿ: ಚಿರತೆ ಓಡಾಟದ ಚಿತ್ರ ಸೆರೆ - ಸ್ಥಳೀಯರಲ್ಲಿ ಆತಂಕ

author img

By

Published : Mar 15, 2022, 12:18 PM IST

ಹುಲಿ ಗಣತಿ ಯೋಜನೆ ನಿಮಿತ್ತ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆ ಚಿತ್ರ ಸೆರೆಯಾಗಿದೆ. ಇದು ಇಲ್ಲಿನ ಸ್ಥಳೀಯರಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದೆ.

forest department trapping camera Captured Leopard photo in Belthangady
ಚಿರತೆ ಓಡಾಟದ ಚಿತ್ರ ಸೆರೆ!

ಬೆಳ್ತಂಗಡಿ: ಹುಲಿ ಗಣತಿ ಯೋಜನೆ ನಿಮಿತ್ತ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ.

ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. 5ದಿನಗಳಿಗೊಮ್ಮೆ ಈ ಯೋಜನೆಯ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು, ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ಬೆಳಂಬೆಳಗ್ಗೆ ಹರಿಯಿತು ನೆತ್ತರು; ಕಾರದ ಪುಡಿ ಎರಚಿ ಬಿಲ್ಡರ್ ಬರ್ಬರ ಹತ್ಯೆ

ಕಳೆದ ಎರಡು ವರ್ಷಗಳ ಹಿಂದೆ ಕರುವೊಂದನ್ನು ಚಿರತೆ ಹಿಡಿದು ಕೊಂದಿತ್ತು. ಅದರ ಕಳೇಬರ ಈ ಸ್ಥಳದ ಆಸುಪಾಸಿನಲ್ಲೇ ಕಂಡು ಬಂದಿತ್ತು. ಸ್ಥಳದಲ್ಲಿ ಬೋನನ್ನು ಇಲಾಖೆ ವತಿಯಿಂದ ಇಡಲಾಗಿತ್ತು. ಈ ಪ್ರದೇಶವು ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದು, ಹೆದ್ದಾರಿಯಲ್ಲಿ ಆಗಾಗ ಚಿರತೆ ಓಡಾಡುವ ಕುರಿತು ವಾಹನ ಸವಾರರು ತಿಳಿಸಿದ್ದರು. ಸದ್ಯ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಿರತೆ ಚಿತ್ರ ಸೆರೆಯಾಗಿದೆ.

ಬೆಳ್ತಂಗಡಿ: ಹುಲಿ ಗಣತಿ ಯೋಜನೆ ನಿಮಿತ್ತ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಇಡಲಾಗಿರುವ ಕ್ಯಾಮರಾದಲ್ಲಿ ಚಿರತೆಯು ಓಡಾಡಿರುವ ಚಿತ್ರ ಸೆರೆಯಾಗಿದೆ.

ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. 5ದಿನಗಳಿಗೊಮ್ಮೆ ಈ ಯೋಜನೆಯ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು, ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ಬೆಳಂಬೆಳಗ್ಗೆ ಹರಿಯಿತು ನೆತ್ತರು; ಕಾರದ ಪುಡಿ ಎರಚಿ ಬಿಲ್ಡರ್ ಬರ್ಬರ ಹತ್ಯೆ

ಕಳೆದ ಎರಡು ವರ್ಷಗಳ ಹಿಂದೆ ಕರುವೊಂದನ್ನು ಚಿರತೆ ಹಿಡಿದು ಕೊಂದಿತ್ತು. ಅದರ ಕಳೇಬರ ಈ ಸ್ಥಳದ ಆಸುಪಾಸಿನಲ್ಲೇ ಕಂಡು ಬಂದಿತ್ತು. ಸ್ಥಳದಲ್ಲಿ ಬೋನನ್ನು ಇಲಾಖೆ ವತಿಯಿಂದ ಇಡಲಾಗಿತ್ತು. ಈ ಪ್ರದೇಶವು ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದು, ಹೆದ್ದಾರಿಯಲ್ಲಿ ಆಗಾಗ ಚಿರತೆ ಓಡಾಡುವ ಕುರಿತು ವಾಹನ ಸವಾರರು ತಿಳಿಸಿದ್ದರು. ಸದ್ಯ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಿರತೆ ಚಿತ್ರ ಸೆರೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.