ETV Bharat / city

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಕಳವು, ಮೂವರ ಬಂಧನ

author img

By

Published : Sep 13, 2021, 10:08 PM IST

ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಸುಮಾರು 50.242 ಗ್ರಾಂ ತೂಕದ 2,60,400 ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಮೂವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

Gold theft in Jos Alukkas in Putturu
ಚಿನ್ನಾಭರಣ ಖರೀದಿ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಬಂಗಾರ ಕಳವು

ಪುತ್ತೂರು: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್​ನಲ್ಲಿರುವ ಜೋಸ್ ಆಲುಕ್ಕಾಸ್​ಗೆ ಸೆ.1 ರಂದು ಬಂದ ಮೂವರು ಮಹಿಳೆಯರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Gold theft in Jos Alukkas in Putturu
ಚಿನ್ನಾಭರಣ ಖರೀದಿ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಬಂಗಾರ ಕಳವು

ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಬಂಧಿತ ಆರೋಪಿಗಳು. ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದಿದ್ದ ಇವರು, ಸುಮಾರು 50.242 ಗ್ರಾಂ ತೂಕದ 2,60,400 ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿ, ಪರಾರಿಯಾಗಿದ್ದರು.

ಈ ಕುರಿತು ಜೋಸ್ ಆಲುಕ್ಕಾಸ್​ ಜ್ಯುವೆಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.‌ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಸಂಜೆ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ವಿಕಲಚೇತನ ವ್ಯಕ್ತಿಗೆ ನಿವೇಶನ ನೀಡದ ಪಾಲಿಕೆ : ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ಚಾಟಿ

ಪುತ್ತೂರು: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್​ನಲ್ಲಿರುವ ಜೋಸ್ ಆಲುಕ್ಕಾಸ್​ಗೆ ಸೆ.1 ರಂದು ಬಂದ ಮೂವರು ಮಹಿಳೆಯರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Gold theft in Jos Alukkas in Putturu
ಚಿನ್ನಾಭರಣ ಖರೀದಿ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಬಂಗಾರ ಕಳವು

ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಬಂಧಿತ ಆರೋಪಿಗಳು. ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದಿದ್ದ ಇವರು, ಸುಮಾರು 50.242 ಗ್ರಾಂ ತೂಕದ 2,60,400 ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿ, ಪರಾರಿಯಾಗಿದ್ದರು.

ಈ ಕುರಿತು ಜೋಸ್ ಆಲುಕ್ಕಾಸ್​ ಜ್ಯುವೆಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.‌ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಸಂಜೆ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ವಿಕಲಚೇತನ ವ್ಯಕ್ತಿಗೆ ನಿವೇಶನ ನೀಡದ ಪಾಲಿಕೆ : ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ಚಾಟಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.