ETV Bharat / city

ಕೇಂದ್ರ ಸರ್ಕಾರ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸುತ್ತಿದೆ: ಜೆಸಿಟಿಯು ಆರೋಪ

author img

By

Published : Jun 26, 2020, 6:50 PM IST

ಕೇಂದ್ರ ಸರ್ಕಾರ ಕೊರೊನಾ ಸೋಂಕಿನಿಂದ ಉಂಟಾಗಿರುವ ಸಂಕಷ್ಟವನ್ನ ನಿಭಾಯಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗಳ ಕಾಲ ಹೆಚ್ಚಿಸುವ ಮೂಲಕ ಮಾಲೀಕರ ಪರವಾಗಿ ನಿಂತಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಜೆಸಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

JCTU  district general secretary Sunil Kumar Bajal statement
ಕೇಂದ್ರ ಸರ್ಕಾರ ಕಾರ್ಮಿಕ ವರ್ಗವನ್ನ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ಮಂಗಳೂರು (ದಕ್ಷಿಣಕನ್ನಡ): ಕೊರೊನಾ ಸೋಂಕಿನಿಂದ ಉಂಟಾಗಿರುವ ಸಂಕಷ್ಟವನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ಜನಸಾಮಾನ್ಯರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಸರ್ಕಾರ ನಿಂತಿದೆ. ಇದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದು ಜೆಸಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.

ಕೇಂದ್ರ ಸರ್ಕಾರ ಕಾರ್ಮಿಕ ವರ್ಗವನ್ನ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ನಗರದ ಪ್ರೆಸ್ ಕ್ಲಬ್​ನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಮಾಲೀಕರ ಪರವಾಗಿ ನಿಂತಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸುವ ಕಾರ್ಯವನ್ನ ಕೇಂದ್ರ ಸರ್ಕಾರ ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ. ದೀರ್ಘಾವಧಿಯ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ‌ ಕೆಲಸ ಕಳೆದುಕೊಂಡಿದ್ದಾರೆ. ಕಳೆದ 45 ವರ್ಷಗಳ ಅವಧಿಯಲ್ಲಿ ಇಷ್ಟು ಸಂಖ್ಯೆಯಲ್ಲಿ ನಿರುದ್ಯೋಗ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ಖಾಸಗೀಕರಣ ಕೈಬಿಡಬೇಕು. ನೌಕರರ ತುಟ್ಟಿಭತ್ಯೆ ಸ್ಥಗಿತ ಕೈಬಿಡಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕುಟುಂಬಗಳಿಗೆ 6 ತಿಂಗಳು ಮಾಸಿಕ 7,500 ಪರಿಹಾರ ನೀಡಬೇಕು. ಬೀಡಿ, ಟೈಲರ್, ಹೊಟೇಲ್ ಕಾರ್ಮಿಕರು, ಹಮಾಲಿ ಮುಂತಾದ ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ಹತ್ತು ಸಾವಿರ ರೂ. ಸಹಾಯಧನ ಘೋಷಣೆ ಸೇರಿ ಸಾಕಷ್ಟು ಬೇಡಿಕೆಗಳನ್ನು ಜೆಸಿಟಿಯು ಸರ್ಕಾರದ ಮುಂದೆ ಇರಿಸಿದೆ. ಈ ಬೇಡಿಕೆಗಳನ್ನ ಸರ್ಕಾರ ಶೀಘ್ರದಲ್ಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದ್ದು, ಜುಲೈ 3ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಮಂಗಳೂರು (ದಕ್ಷಿಣಕನ್ನಡ): ಕೊರೊನಾ ಸೋಂಕಿನಿಂದ ಉಂಟಾಗಿರುವ ಸಂಕಷ್ಟವನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ಜನಸಾಮಾನ್ಯರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಸರ್ಕಾರ ನಿಂತಿದೆ. ಇದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ ಎಂದು ಜೆಸಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.

ಕೇಂದ್ರ ಸರ್ಕಾರ ಕಾರ್ಮಿಕ ವರ್ಗವನ್ನ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ನಗರದ ಪ್ರೆಸ್ ಕ್ಲಬ್​ನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಮಾಲೀಕರ ಪರವಾಗಿ ನಿಂತಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸುವ ಕಾರ್ಯವನ್ನ ಕೇಂದ್ರ ಸರ್ಕಾರ ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ. ದೀರ್ಘಾವಧಿಯ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ‌ ಕೆಲಸ ಕಳೆದುಕೊಂಡಿದ್ದಾರೆ. ಕಳೆದ 45 ವರ್ಷಗಳ ಅವಧಿಯಲ್ಲಿ ಇಷ್ಟು ಸಂಖ್ಯೆಯಲ್ಲಿ ನಿರುದ್ಯೋಗ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ಖಾಸಗೀಕರಣ ಕೈಬಿಡಬೇಕು. ನೌಕರರ ತುಟ್ಟಿಭತ್ಯೆ ಸ್ಥಗಿತ ಕೈಬಿಡಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕುಟುಂಬಗಳಿಗೆ 6 ತಿಂಗಳು ಮಾಸಿಕ 7,500 ಪರಿಹಾರ ನೀಡಬೇಕು. ಬೀಡಿ, ಟೈಲರ್, ಹೊಟೇಲ್ ಕಾರ್ಮಿಕರು, ಹಮಾಲಿ ಮುಂತಾದ ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ಹತ್ತು ಸಾವಿರ ರೂ. ಸಹಾಯಧನ ಘೋಷಣೆ ಸೇರಿ ಸಾಕಷ್ಟು ಬೇಡಿಕೆಗಳನ್ನು ಜೆಸಿಟಿಯು ಸರ್ಕಾರದ ಮುಂದೆ ಇರಿಸಿದೆ. ಈ ಬೇಡಿಕೆಗಳನ್ನ ಸರ್ಕಾರ ಶೀಘ್ರದಲ್ಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದ್ದು, ಜುಲೈ 3ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.