ETV Bharat / city

ಸಿಆರ್​​​ಝಡ್ ವಲಯದ ಮರಳು ಸಮಸ್ಯೆ ಪರಿಹರಿಸಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ.ಆರ್.​ಝಡ್)​ ನಲ್ಲಿ ಮರಳು ಪರವಾನಗಿ ನೀಡಲಾಗಿದ್ದರೂ ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

author img

By

Published : Sep 27, 2019, 4:59 AM IST

ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ.ಆರ್.​ಝಡ್)​ ನಲ್ಲಿ ಮರಳು ಪರವಾನಗಿ ನೀಡಲಾಗಿದ್ದರೂ ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿ.ಆರ್.ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್ ಟನ್ ಮರಳು ಎತ್ತಬಹುದು. ಆದರೆ ಇದುವರೆಗೆ 4 ಲಕ್ಷ ಮೆಟ್ರಿಕ್ ಟನ್ ಮರಳು ಮಾತ್ರ ಎತ್ತಲಾಗಿದೆ. ಮರಳುಗಾರಿಕೆ ಬ್ಲಾಕ್‍ಗಳ ಪ್ರದೇಶದಲ್ಲಿ ಸ್ಥಳೀಯವಾದ ಕೆಲವು ಸಮಸ್ಯೆಗಳಿಂದ ಮರಳುಗಾರಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮರಳುಗಾರಿಕೆ ನಡೆಸಬೇಕು. ಜನಸಾಮಾನ್ಯರಿಗೆ ಸಮರ್ಪಕವಾಗಿ ಕಡಿಮೆ ದರದಲ್ಲಿ ಮರಳು ದೊರಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಪ್ರಸಕ್ತ ಜನಸಾಮಾನ್ಯರಿಗೆ ಸುಲಭದಲ್ಲಿ ಮರಳು ಸಿಗುವಂತಾಗಲು ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಮರಳು ಪೂರೈಸಲಾಗುತ್ತಿದ್ದು, ಇದುವರೆಗೆ 50 ಸಾವಿರ ಮೆಟ್ರಿಕ್ ಟನ್‍ಗಳಷ್ಟು ಮರಳು ಪೂರೈಸಲಾಗಿದೆ. ಈ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸಿ, ಪ್ರತಿ ತಾಲೂಕು ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಸಾರ್ವಜನಿಕರಿಗೆ ಆ್ಯಪ್ ಮೂಲಕ ಮರಳು ಒದಗಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಹೊರ ರಾಜ್ಯಗಳಿಗೆ ಮರಳು ಅಕ್ರಮ ಸಾಗಾಟವೇ ಜಿಲ್ಲೆಯ ಮರಳು ಸಮಸ್ಯೆಗೆ ಮೂಲ ಕಾರಣ. ಈ ನಿಟ್ಟಿನಲ್ಲಿ ಗಡಿ ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ, ಭದ್ರತಾ ವ್ಯವಸ್ಥೆ ಬಿಗಿಗೊಳಿಸಬೇಕು. ಸಾಂಪ್ರದಾಯಿಕವಾಗಿ ಮರಳುಗಾರಿಕೆ ಮಾಡುವ ಕುಟುಂಬಕ್ಕೆ ಪರವಾನಗಿಯಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಕಾರಣ ಅಂತವರಿಗೆ ಪರವಾನಗಿಯನ್ನು ಆದಷ್ಟು ಬೇಗನೇ ಕೊಡಿಸಬೆಕು ಎಂದು ಸಚಿವರಲ್ಲಿ ಮನವರಿಕೆ ಮಾಡಿದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ.ಆರ್.​ಝಡ್)​ ನಲ್ಲಿ ಮರಳು ಪರವಾನಗಿ ನೀಡಲಾಗಿದ್ದರೂ ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿ.ಆರ್.ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್ ಟನ್ ಮರಳು ಎತ್ತಬಹುದು. ಆದರೆ ಇದುವರೆಗೆ 4 ಲಕ್ಷ ಮೆಟ್ರಿಕ್ ಟನ್ ಮರಳು ಮಾತ್ರ ಎತ್ತಲಾಗಿದೆ. ಮರಳುಗಾರಿಕೆ ಬ್ಲಾಕ್‍ಗಳ ಪ್ರದೇಶದಲ್ಲಿ ಸ್ಥಳೀಯವಾದ ಕೆಲವು ಸಮಸ್ಯೆಗಳಿಂದ ಮರಳುಗಾರಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮರಳುಗಾರಿಕೆ ನಡೆಸಬೇಕು. ಜನಸಾಮಾನ್ಯರಿಗೆ ಸಮರ್ಪಕವಾಗಿ ಕಡಿಮೆ ದರದಲ್ಲಿ ಮರಳು ದೊರಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಪ್ರಸಕ್ತ ಜನಸಾಮಾನ್ಯರಿಗೆ ಸುಲಭದಲ್ಲಿ ಮರಳು ಸಿಗುವಂತಾಗಲು ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಮರಳು ಪೂರೈಸಲಾಗುತ್ತಿದ್ದು, ಇದುವರೆಗೆ 50 ಸಾವಿರ ಮೆಟ್ರಿಕ್ ಟನ್‍ಗಳಷ್ಟು ಮರಳು ಪೂರೈಸಲಾಗಿದೆ. ಈ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸಿ, ಪ್ರತಿ ತಾಲೂಕು ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಸಾರ್ವಜನಿಕರಿಗೆ ಆ್ಯಪ್ ಮೂಲಕ ಮರಳು ಒದಗಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಹೊರ ರಾಜ್ಯಗಳಿಗೆ ಮರಳು ಅಕ್ರಮ ಸಾಗಾಟವೇ ಜಿಲ್ಲೆಯ ಮರಳು ಸಮಸ್ಯೆಗೆ ಮೂಲ ಕಾರಣ. ಈ ನಿಟ್ಟಿನಲ್ಲಿ ಗಡಿ ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ, ಭದ್ರತಾ ವ್ಯವಸ್ಥೆ ಬಿಗಿಗೊಳಿಸಬೇಕು. ಸಾಂಪ್ರದಾಯಿಕವಾಗಿ ಮರಳುಗಾರಿಕೆ ಮಾಡುವ ಕುಟುಂಬಕ್ಕೆ ಪರವಾನಗಿಯಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಕಾರಣ ಅಂತವರಿಗೆ ಪರವಾನಗಿಯನ್ನು ಆದಷ್ಟು ಬೇಗನೇ ಕೊಡಿಸಬೆಕು ಎಂದು ಸಚಿವರಲ್ಲಿ ಮನವರಿಕೆ ಮಾಡಿದರು.

Intro:ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‍ಝಡ್ ವಲಯದಲ್ಲಿ ಮರಳು ಪರವಾನಿಗೆ ನೀಡಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ  ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.Body:ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಸಿಆರ್‍ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್ ಟನ್ ಮರಳು ಎತ್ತಬಹುದು. ಆದರೆ ಇದುವರೆಗೆ 4 ಲಕ್ಷ ಮೆಟ್ರಿಕ್ ಟನ್ ಮರಳು ಮಾತ್ರ ಎತ್ತಲಾಗಿದೆ. ಮರಳುಗಾರಿಕೆ ಬ್ಲಾಕ್‍ಗಳ ಪ್ರದೇಶದಲ್ಲಿ ಸ್ಥಳೀಯವಾದ ಕೆಲವು ಸಮಸ್ಯೆಗಳಿಂದ ಮರಳುಗಾರಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮರಳುಗಾರಿಕೆ ನಡೆಸಬೇಕು. ಜನಸಾಮಾನ್ಯರಿಗೆ ಸಮರ್ಪಕವಾಗಿ ಕಡಿಮೆ ದರದಲ್ಲಿ ಮರಳು ದೊರಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

 ಸಭೆಗೆ ಮಾಹಿತಿ ನೀಡಿದ ಗಣಿ ಇಲಾಖೆ ಅಧಿಕಾರಿಗಳು, ಸಿಆರ್‍ಝಡ್ ವಲಯದ ನೇತ್ರಾವತಿ ನದಿ ತೀರದಲ್ಲಿ 10 ಬ್ಲಾಕ್ ಹಾಗೂ ಫಲ್ಗುಣಿ ತೀರದಲ್ಲಿ 10 ಬ್ಲಾಕ್‍ಗಳನ್ನು ಮರಳುಗಾರಿಕೆಗೆ ಗುರುತಿಸಲಾಗಿದೆ. ಎಷ್ಟು ಟನ್ ಮರಳು ಇದೆ ಎಂಬುದನ್ನು ಅಂದಾಜಿಸಿ ಬ್ಲಾಕ್ ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ವರ್ಷಕ್ಕೆ ಸರಾಸರಿ  12 ಲಕ್ಷ ಮೆಟ್ರಿಕ್ ಟನ್ ಮರಳು ಅಗತ್ಯವಿದೆ. ನಾನ್ ಸಿಆರ್‍ಝಡ್ ವಲಯದಲ್ಲಿ 22 ಬ್ಲಾಕ್‍ಗಳನ್ನು ಗುರುತಿಸಲಾಗಿದ್ದು, ಈ ಪೈಕಿ 7 ಬ್ಲಾಕ್‍ಗಳಲ್ಲಿ ಮರಳು ಎತ್ತಲು ಅನುಮೋದನೆಯಾಗಿ, ಪರಿಸರ ಕ್ಲಿಯರೆನ್ಸ್‍ಗೆ ಕಳುಹಿಸಲಾಗಿದೆ ಎಂದು ಹೇಳಿದರು.
 ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಪ್ರಸಕ್ತ ಜನಸಾಮಾನ್ಯರಿಗೆ ಸುಲಭದಲ್ಲಿ ಮರಳು ಸಿಗುವಂತಾಗಲು ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಪೂರೈಸಲಾಗುತ್ತಿದ್ದು, ಇದುವರೆಗೆ ಇದರಿಂದ 50 ಸಾವಿರ ಮೆಟ್ರಿಕ್ ಟನ್‍ಗಳಷ್ಟು ಮರಳು ಪೂರೈಸಲಾಗಿದೆ. ಈ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸಿ, ಪ್ರತೀ ತಾಲೂಕು ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಸಾರ್ವಜನಿಕರಿಗೆ ಆ್ಯಪ್ ಮೂಲಕ ಮರಳು ಒದಗಿಸಲು ಚಿಂತಿಸಲಾಗಿದೆ ಎಂದು ಹೇಳಿದರು. 
 
 ಶಾಸಕ ಯು.ಟಿ. ಖಾದರ್ ಮಾತನಾಡಿ, ಹೊರರಾಜ್ಯಗಳಿಗೆ ಮರಳು ಅಕ್ರಮ ಸಾಗಾಟವೇ ಜಿಲ್ಲೆಯ ಮರಳು ಸಮಸ್ಯೆಗೆ ಮೂಲ ಕಾರಣ. ಈ ನಿಟ್ಟಿನಲ್ಲಿ ಗಡಿ ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ, ಭದ್ರತಾ ವ್ಯವಸ್ಥೆ ಬಿಗಿಗೊಳಿಸಬೇಕು ಎಂದು ಹೇಳಿದರು. ಸಂಪ್ರದಾಯಕವಾಗಿ ಮರಳುಗಾರಿಕೆ ಮಾಡುವ ಕುಟುಂಬಕ್ಕೆ ಪರವಾನಿಗೆಯಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಕಾರಣ ಅಂತವರಿಗೆ ಪರವಾನಿಗೆಯನ್ನು ಆದಷ್ಟು ಬೇಗನೇ ಕೊಡಿಸಬೆಕು ಎಂದು ಸಚಿವರಲ್ಲಿ ಮನವರಿಕೆ ಮಾಡಿದರು,
 ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಜನಸಾಮಾನ್ಯರಿಗೆ ಸಕಾಲದಲ್ಲಿ ಮರಳು ದೊರೆಯದಿರುವುದೇ ದೊಡ್ಡ ಸಮಸ್ಯೆಯಾಗಿದೆ. ಮರಳು ಉದ್ದಿಮೆದಾರರಿಗಿಂತ ಜನಸಾಮಾನ್ಯರನ್ನು ಹಿತದೃಷ್ಠಿಯಲ್ಲಿಟ್ಟು ನೀತಿ ಜಾರಿಗೆ ತರಬೇಕು. ಮರಳನ್ನು ತೆಗೆಯುವವರ ಬಗ್ಗೆ ಸಮಸ್ಯೆಗಳನ್ನು ಆಲಿಸಿದರೆ ಸಾಲದು, ಅದನ್ನು ಉಪಯೋಗಿಸುವ ಬಡವರ, ಮದ್ಯಮ ವರ್ಗದವರ ಸಮಸ್ಯೆಗಳನ್ನು ಕೂಡಾ ಆಲಿಸಬೇಕು. ಮದ್ಯವರ್ತಿಗಳ ಹಾವಳಿ ತಪ್ಪಿಸಿ ನಿಗಧಿತ ಬೆಲೆಯಲ್ಲಿ ಮರಳು ದೊರೆಯುವಂತೆ ಆಗಬೇಕು ಎಂದು ಹೇಳಿದರು. 

 ಸಭೆಯಲ್ಲಿ ಶಾಸಕ ರಾಜೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಖ್ಯ ಕಾರ್ಯನಿರ್ವಹಣಾಧೀಕಾರಿ ಡಾ. ಸೆಲ್ವಮಣಿ ಮತ್ತಿತರರು ಉಪಸ್ಥಿತರಿದ್ದರು.
Reporter; vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.