ETV Bharat / city

ಸಂಜೆಯೊಳಗೆ ಲಾಕ್​ಡೌನ್​ ಕುರಿತು ಅಂತಿಮ ತೀರ್ಮಾನ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

author img

By

Published : Jul 21, 2020, 3:39 PM IST

ಇನ್ನೂ 14 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವಂತೆ ಸಲಹೆ ನೀಡುತ್ತಿದ್ದಾರೆ. ಆದರೆ ನನ್ನ ಪ್ರಕಾರ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹಾಗಾಗಿ ಈ ಕುರಿತು ಇಂದು ಸಂಜೆಯೊಳಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಸಿಎಂ ನೀಡಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

kota-srinivasa-statement-on-lock-down
ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು : ಲಾಕ್‌ಡೌನ್ ನಾಳೆ ಮುಗಿಯುತ್ತದೆ. ಆದರೆ ನಮ್ಮಲ್ಲಿ ಅನೇಕ ಜನಪ್ರತಿನಿಧಿಗಳು, ಸಾರ್ವಜನಿಕ ವಲಯದಲ್ಲಿ ಇನ್ನೂ 14 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವಂತೆ ಸಲಹೆ ನೀಡುತ್ತಿದ್ದಾರೆ. ಆದರೆ ನಾನು ಹೇಳುವ ಪ್ರಕಾರ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹಾಗಾಗಿ ಇವತ್ತು ಸಂಜೆಯೊಳಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನವನ್ನು ಸಿಎಂ ನೀಡಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಂಜೆಯೊಳಗೆ ಲಾಕ್​ಡೌನ್​ ಕುರಿತು ಅಂತಿಮ ತೀರ್ಮಾನ

ಆಧಾರ್ ಕಾರ್ಡ್ ತೋರಿಸಿದರೂ ಕೋವಿಡ್ ಚಿಕಿತ್ಸೆ ಉಚಿತ:

ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 9 ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾದ ಕೋವಿಡ್​ ಚಿಕಿತ್ಸೆಗೆ ಬೇಕಾದ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗಿದೆ. ಆಯಷ್ಮಾನ್ ಭಾರತ್ ಹೊಂದಾಣಿಕೆಯಲ್ಲಿ ಯಾರೇ ಆದರೂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯಬಹುದು. ಎಪಿಎಲ್, ಬಿಪಿಎಲ್ ಅಥವಾ ಕನಿಷ್ಠ ಆಧಾರ್ ಕಾರ್ಡ್ ಇದ್ದರೆ ಸಾಕು, ಉಚಿತ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಜಿಲ್ಲೆಗೆ 25 ಸಾವಿರ ಪರೀಕ್ಷಾ ಕಿಟ್‌ಗಳನ್ನು ಮತ್ತು 50 ವೆಂಟಿಲೇಟರ್ ಹಾಗೂ ಪಿಪಿಇ ಕಿಟ್‌ಗಳನ್ನು ಕೂಡಾ ಕೊಡಿಸಲಾಗುತ್ತಿದೆ ಎಂದು ತಿಳಿಸಿದರು.

ಪುತ್ತೂರು, ಸುಳ್ಯದಲ್ಲಿ ಕೋವಿಡ್​ ಸೋಂಕಿತರಿಗೆ ಹಾಸ್ಟೇಲ್:

ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಕೊರೊನಾ ಚಿಕಿತ್ಸೆಗೆ ಬೇಕಾದ ಯೋಜನೆ ಮಾಡಲು ಇಲ್ಲಿನ ಶಾಸಕರು ಮಾಹಿತಿ ನೀಡಿದ್ದಾರೆ. ಹಾಗಾಗಿ ಈ ಭಾಗದ ಖಾಸಗಿ ಆಸ್ಪತ್ರೆ ಅಥವಾ ಹಾಸ್ಟೇಲ್ ಮೂಲಕ ಸರ್ಕಾರಿ ಆರೋಗ್ಯ ಸೇವೆ ಸಿಗುವಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಸಮಸ್ಯೆಗಳಿಲ್ಲದೆ ರೋಗಮುಕ್ತರಾಗಲು ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಪ್ಪು ಮಾಡಿದವರ ವಿರುದ್ಧ ಕ್ರಮ:

ನೆಲ್ಯಾಡಿಯ ಗರ್ಭಿಣಿಯೊಬ್ಬರು ಚಿಕಿತ್ಸೆಗಾಗಿ ದಿನಪೂರ್ತಿ ಸರ್ಕಾರಿ ಆಸ್ಪತ್ರೆಗಳಿಗೆ ಅಲೆದಾಡಿದ ಪ್ರಕರಣಕ್ಕೆ ಸಂಬಂಧಿಸಿ ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಇಲ್ಲಿ ಯಾರು ತಪ್ಪಿತಸ್ಥರೋ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವುದಾಗಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ಸುಳ್ಯವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು.

ಮಂಗಳೂರು : ಲಾಕ್‌ಡೌನ್ ನಾಳೆ ಮುಗಿಯುತ್ತದೆ. ಆದರೆ ನಮ್ಮಲ್ಲಿ ಅನೇಕ ಜನಪ್ರತಿನಿಧಿಗಳು, ಸಾರ್ವಜನಿಕ ವಲಯದಲ್ಲಿ ಇನ್ನೂ 14 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವಂತೆ ಸಲಹೆ ನೀಡುತ್ತಿದ್ದಾರೆ. ಆದರೆ ನಾನು ಹೇಳುವ ಪ್ರಕಾರ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹಾಗಾಗಿ ಇವತ್ತು ಸಂಜೆಯೊಳಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನವನ್ನು ಸಿಎಂ ನೀಡಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಂಜೆಯೊಳಗೆ ಲಾಕ್​ಡೌನ್​ ಕುರಿತು ಅಂತಿಮ ತೀರ್ಮಾನ

ಆಧಾರ್ ಕಾರ್ಡ್ ತೋರಿಸಿದರೂ ಕೋವಿಡ್ ಚಿಕಿತ್ಸೆ ಉಚಿತ:

ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 9 ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾದ ಕೋವಿಡ್​ ಚಿಕಿತ್ಸೆಗೆ ಬೇಕಾದ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗಿದೆ. ಆಯಷ್ಮಾನ್ ಭಾರತ್ ಹೊಂದಾಣಿಕೆಯಲ್ಲಿ ಯಾರೇ ಆದರೂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯಬಹುದು. ಎಪಿಎಲ್, ಬಿಪಿಎಲ್ ಅಥವಾ ಕನಿಷ್ಠ ಆಧಾರ್ ಕಾರ್ಡ್ ಇದ್ದರೆ ಸಾಕು, ಉಚಿತ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಜಿಲ್ಲೆಗೆ 25 ಸಾವಿರ ಪರೀಕ್ಷಾ ಕಿಟ್‌ಗಳನ್ನು ಮತ್ತು 50 ವೆಂಟಿಲೇಟರ್ ಹಾಗೂ ಪಿಪಿಇ ಕಿಟ್‌ಗಳನ್ನು ಕೂಡಾ ಕೊಡಿಸಲಾಗುತ್ತಿದೆ ಎಂದು ತಿಳಿಸಿದರು.

ಪುತ್ತೂರು, ಸುಳ್ಯದಲ್ಲಿ ಕೋವಿಡ್​ ಸೋಂಕಿತರಿಗೆ ಹಾಸ್ಟೇಲ್:

ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಕೊರೊನಾ ಚಿಕಿತ್ಸೆಗೆ ಬೇಕಾದ ಯೋಜನೆ ಮಾಡಲು ಇಲ್ಲಿನ ಶಾಸಕರು ಮಾಹಿತಿ ನೀಡಿದ್ದಾರೆ. ಹಾಗಾಗಿ ಈ ಭಾಗದ ಖಾಸಗಿ ಆಸ್ಪತ್ರೆ ಅಥವಾ ಹಾಸ್ಟೇಲ್ ಮೂಲಕ ಸರ್ಕಾರಿ ಆರೋಗ್ಯ ಸೇವೆ ಸಿಗುವಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಸಮಸ್ಯೆಗಳಿಲ್ಲದೆ ರೋಗಮುಕ್ತರಾಗಲು ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಪ್ಪು ಮಾಡಿದವರ ವಿರುದ್ಧ ಕ್ರಮ:

ನೆಲ್ಯಾಡಿಯ ಗರ್ಭಿಣಿಯೊಬ್ಬರು ಚಿಕಿತ್ಸೆಗಾಗಿ ದಿನಪೂರ್ತಿ ಸರ್ಕಾರಿ ಆಸ್ಪತ್ರೆಗಳಿಗೆ ಅಲೆದಾಡಿದ ಪ್ರಕರಣಕ್ಕೆ ಸಂಬಂಧಿಸಿ ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಇಲ್ಲಿ ಯಾರು ತಪ್ಪಿತಸ್ಥರೋ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವುದಾಗಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ಸುಳ್ಯವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.